Webdunia - Bharat's app for daily news and videos

Install App

'ಕಾವೇರಿ'ಗಾಗಿ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ

Webdunia
ಸೋಮವಾರ, 4 ಸೆಪ್ಟಂಬರ್ 2023 (14:55 IST)
ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಹಿನ್ನೆಲೆ ಮಂಡ್ಯದಲ್ಲಿ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಮಂಡ್ಯದ ಡಿಸಿ ಕಚೇರಿ ಸಮೀಪದಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಕಾರ್ಯಕರ್ತರು ಹೋರಾಟ ನಡೆಸಿ, ಕಾವೇರಿ ಪ್ರತಿಮೆಗೆ ಹಾಲಿನ ಅಭಿಷೇಕ ಮಾಡಿದ್ರು. ಹಾಲು-ಮೊಸರು, ಕುಂಕುಮ, ಅರಿಸಿಣ, ಎಳನೀರು, ಜೇನುತುಪ್ಪದಿಂದ ಅಭಿಷೇಕ ಮಾಡಿ, ಕಾವೇರಿ ಪ್ರತಿಮೆ ಬಳಿ ಖಾಲಿ ಬಿಂದಿಗೆ ಇಟ್ಟು ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ರು. ಇನ್ನು, ರಾಜ್ಯ ಸರ್ಕಾರ ಯಾವುದೇ ರೀತಿಯ ನಿಲುವನ್ನ ತೆಗೆದುಕೊಳ್ಳುತ್ತಿಲ್ಲ, ತಕ್ಷಣವೇ ನಮ್ಮ ನೀರು ತಮಿಳುನಾಡಿಗೆ ಹೋಗುತ್ತಿರುವುದನ್ನ ನಿಲ್ಲಿಸಿ ಎಂದು ಆಕ್ರೋಶ ವ್ಯಕ್ತಪಡಿಸಿದ್ರು.

ತಮಿಳುನಾಡಿಗೆ KRS ಜಲಾಶಯದಿಂದ ನೀರು ಬಿಡುಗಡೆ ಹಿನ್ನೆಲೆ ಕಾವೇರಿ ಕಿಚ್ಚು ಮುಂದುವರೆದಿದ್ದು, ಮಂಡ್ಯ ರಕ್ಷಣಾ ವೇದಿಕೆ ಕಾರ್ಯಕರ್ತರಿಂದ ವಿನೂತನ ಪ್ರತಿಭಟನೆ ನಡೆಸಲಾಯಿತು. ವೇದಿಕೆ ಅಧ್ಯಕ್ಷ ಶಂಕರ್ ಬಾಬು
ನೇತೃತ್ವದಲ್ಲಿ ಬಿಸ್ಲೆರಿ ನೀರಿನಲ್ಲಿ ನಾಟಿ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ರೈತರ ಬೆಳೆಗಳಿಗೆ ನೀರು
ಕೊಡುತ್ತಿಲ್ಲ, ತಮಿಳುನಾಡಿಗೆ ನೀರು ಹರಿಸುತ್ತಿದ್ದಾರೆ ಎಂದು ಆಕ್ರೋಶತರಾದ ರೈತರು, ಕಾರ್ಯಕರ್ತರು ಹನುಮಂತಪುರ ಗ್ರಾಮದ ಗದ್ದೆಯಲ್ಲಿ ನಾಟಿ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಕಾವೇರಿ ನೀರು ಇಲ್ಲದೆ ಭತ್ತದ ನಾಟಿ ಮಾಡಲು ಆಗುತ್ತಿಲ್ಲ, ಬಿಸ್ಲೆರಿ ನೀರಿನಲ್ಲಿ ನಾಟಿ ಮಾಡುವ ಪರಿಸ್ಥಿತಿ ಬಂದಿದೆ ಎಂದು ಹೇಳಿ ಕೂಡಲೇ ನಿಲ್ಲಿಸಿ ರಾಜ್ಯ ಕಾಪಾಡಬೇಕು ಎಂದು ಆಗ್ರಹಿಸಿದ್ದಾರೆ. ರೈತರ ಸಂಕಷ್ಟಕ್ಕೆ ಸ್ಪಂದಿಸದ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿ ಗ್ರಾಮದ ರಾಮಚಂದ್ರು ಎಂಬುವವರ ಜಮೀನಿನಲ್ಲಿ ನಾಟಿ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿ ಭತ್ತದ ನಾಟಿ ಮಾಡಿ, ಬಿಸ್ಲೇರಿ ನೀರೆರೆದು ಪ್ರತಿಭಟನೆ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎರಡನೇ ಬಾರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಲಪಾಡ್‌, ಸಿಎಂ ಡಿಕೆ ಶಿವಕುಮಾರ್ ದಂಪತಿ, ಕಿಚ್ಚ ಸುದೀಪ್ ಭಾಗಿ

ರಕ್ಷಣೆ ನೀಡಬೇಕಿದ್ದ ಸಿಐಎಸ್‌ಎಫ್‌ ಸಿಬ್ಬಂದಿಯ ಕಾಲರ್ ಹಿಡಿದ ಪ್ರಯಾಣಿಕರು, ನಿಜವಾದ ಕಾರಣ ಕೇಳಿದ್ರೆ ಶಾಕ್ ಆಗ್ತೀರಾ, Video

ಸಂಸ್ಥೆ ಎಷ್ಟೇ ದೊಡ್ಡದಾಗಿದ್ದರೂ, ಯಾವುದೇ ವಿನಾಯಿತಿ ನೀಡುವ ಪ್ರಶ್ನೆಯೇ ಇಲ್ಲ

ಸ್ವಾತಂತ್ರ್ಯೋತ್ಸವಕ್ಕೆ ಮುನ್ನ ಹಸು, ನವಿಲುಗಳಿಗೆ ಆಹಾರ ತಿನ್ನಿಸಿದ ಪ್ರಧಾನಿ ಮೋದಿ: ವಿಡಿಯೊ ವೈರಲ್‌

ಪವಿತ್ರ ಗೀತೆಗೆ ಮಾಡಿದ ಅವಮಾನ ದೇಶದ ಜನ ಕ್ಷಮಿಸಲ್ಲ: ಸೋನಿಯಾ ಗಾಂಧಿ ವಿರುದ್ಧ ಗುಡುಗಿದ ಅಮಿತ್ ಶಾ

ಮುಂದಿನ ಸುದ್ದಿ
Show comments