Webdunia - Bharat's app for daily news and videos

Install App

'ಮನ್‌ ಕಿ ಬಾತ್‌'ನಲ್ಲಿ ಮಲ್ಲಮ್ಮನ ಪವಾಡ!

Webdunia
ಭಾನುವಾರ, 28 ಆಗಸ್ಟ್ 2016 (13:31 IST)
ಧರಣಿ ಮಾಡುವ ಮೂಲಕ ಶೌಚಾಲಯ ನಿರ್ಮಿಸಿಕೊಂಡಿದ್ದ ಕೊಪ್ಪಳ ಜಿಲ್ಲೆಯ ವಿದ್ಯಾರ್ಥಿ ಮಲ್ಲಮ್ಮ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ 'ಮನ್ ಕಿ ಬಾತ್' ಕಾರ್ಯಕ್ರಮದಲ್ಲಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
 
ಮನ್ ಕಿ ಬಾತ್‌ನ 23 ನೇ ಧ್ವನಿ ಸುರಳಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಡಣಾಪುರ ನಿವಾಸಿಯಾದ 16 ವರ್ಷದ ಬಾಲೆ ಮಲ್ಲಮ್ಮ, ತನ್ನ ಮನೆಯಲ್ಲಿ ಶೌಚಾಲಯ ನಿರ್ಮಿಸುವಂತೆ ಧರಣಿ ನಡೆಸಿದ್ದಳು. ಮಲ್ಲಮ್ಮನ ಧರಣಿಯ ನಂತರ ತನ್ನ ಮನೆಯಲ್ಲಿ ಶೌಚಾಲಯ ನಿರ್ಮಾಣವಾಗಿತ್ತು. ಮಲ್ಲಮ್ಮನ ಕುರಿತು ಮೋದಿ ಅವರು ಸುಮಾರು ಒಂದುವರೆ ನಿಮಿಶಗಳ ಕಾಲ ಮಾತನಾಡಿ, ಮಲ್ಲಮ್ಮನ ಸಾಧನೇ ದೇಶಕ್ಕೆ ಮಾದರಿ ಎಂದರು.
 
ಕ್ರೀಡೆಯ ವಿಷಯದಲ್ಲಿ ಭಾರತ ಇನ್ನಷ್ಟು ಮುಂದೆ ಸಾಗಬೇಕಾಗಿದೆ. ಕ್ರೀಡೆಗೆ ಸ್ಫೂರ್ತಿ ನೀಡುವ ನಿಟ್ಟಿನಲ್ಲಿ ಎಲ್ಲರೂ ಒಗ್ಗೂಡಿ ಕೆಲಸ ಮಾಡಬೇಕು. ರಾಜ್ಯ ಸರಕಾರ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದು ತಿಳಿಸಿದರು. ಹಾಕಿ ದಂತಕಥೆ ಧ್ಯಾನ ಚಂದ್ ಅವರ ಜನ್ಮ ದಿನಾಚರಣೆಯಾದ ಅಗಸ್ಟ್ 29 ರಂದು, ರಾಷ್ಟೀಯ ಕ್ರೀಡಾ ದಿನ ಎಂದು ಕರೆಯಲಾಗುತ್ತಿದೆ ಎಂದರು. 
 
ದೀಪಾ ಕರ್ಮಕರ್, ಲಲಿತಾ ಬಾಬರ್, ಅಭಿನವ್ ಬಿಂದ್ರಾ, ವಿಕಾಸ್ ಕೃಷ್ಟನ್ ಯಾದವ ಅವರು ಒಲಿಂಪಿಕ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಭಾರತದ ಹೆಣ್ಣು ಮಕ್ಕಳು ಒಲಿಂಪಿಕ್ಸ್‌ನಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ಹೆಣ್ಣು ಮಕ್ಕಳು ಯಾವುದಕ್ಕೂ ಕಮ್ಮಿಯಿಲ್ಲ ಎಂದು ತೋರಿಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments