ಮಾಜಿ ಸಿಎಂ‌ ಬಂಗಾರಪ್ಪ ಪುತ್ರಿ ಮನೆ ಮುಂದೆ ಪ್ರೊಟೆಸ್ಟ್

Webdunia
ಸೋಮವಾರ, 27 ಮಾರ್ಚ್ 2023 (17:20 IST)
ಕೋಟ್ಯಾಂತರ ರೂಪಾಯಿ ಸಾಲ ಪಡೆದು ವಾಪಸ್ ನೀಡದೆ ಸತಾಯಿಸಿರುವ ಆರೋಪ ಮಾಜಿ‌ ಮುಖ್ಯಮಂತ್ರಿ ಬಂಗಾರಪ್ಪ ಕೊನೆಯ ಪುತ್ರಿ ಅನಿತಾ ಪವನ್ ಮೇಲೆ ಕೇಳಿ ಬಂದಿದೆ. ಈ ಸಂಬಂಧ ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ ನಲ್ಲಿರುವ ಬಂಗಾರಪ್ಪ ಪುತ್ರಿ ‌ನಿವಾಸದ ಮುಂದೆ ಕಳೆದ‌ ಎರಡು ದಿನಗಳಿಂದ ಸಾಲ ನೀಡಿದ್ದ ದಂಪತಿ ಪ್ರತಿಭಟನೆ ‌ನಡೆಸುತ್ತಿದ್ದಾರೆ.
ಹಾಸನದ ಚನ್ನರಾಯಪಟ್ಟಣದ ಹಿರಿಸಾವೆ ಮೂಲದ‌ ಓಂಪ್ರಕಾಶ್ ಹಾಗೂ ಪತ್ನಿ ಎರಡು ದಿನಗಳಿಂದ ಅನಿತಾ ಮನೆ ಮುಂದೆ ಪ್ರೊಟೆಸ್ಟ್ ನಡೆಸಿದ್ದಾರೆ. ಸುಮಾರು 5 ಕೋಟಿವರೆಗೂ ಸಾಲ ನೀಡಿದ್ದು ಕಳೆದ ಮೂರಾಲ್ಕು ವರ್ಷಗಳಿಂದ ಹಣ ವಾಪಸ್ ನೀಡುವುದಾಗಿ ಸತಾಯಿಸುತ್ತಿದ್ದಾರೆ‌. ಹಲವು ಬಾರಿ ಹಣ ಕೇಳಲು ಹೋದಾಗ ಚೆಕ್ ನೀಡಿದ್ದರು. ನೀಡಿದ ಚೆಕ್ ಗಳೆಲ್ಲವೂ ಬೌನ್ಸ್ ಆಗಿವೆ. ಮನೆ ರಿಜಿಸ್ಟ್ರೇಷನ್ ಗಾಗಿ ಹಾಗೂ ಇಡಲಾಗಿದ್ದ ಒಡವೆ ಹರಾಜು ಬಂದಿರುವುದಾಗಿ ಹೇಳಿ ನನ್ನ‌ ಕಡೆಯಿಂದ ಕೋಟ್ಯಾಂತರ ರೂ ಸಾಲ ಪಡೆದಿದ್ದಾರೆ. ಆರಂಭದಲ್ಲಿ ತೆಗೆದುಕೊಂಡ ಸಾಲಕ್ಕೆ ಬಡ್ಡಿ ಪಾವತಿಸಿದ ಅನಿತಾ ಕಾಲಕ್ರಮೇಣ ಹಣ ವಾಪಸ್ ನೀಡಿಲ್ಲ‌. ಈ ಬಗ್ಗೆ ಚನ್ನರಾಯನಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಕೀಲರ ಮೂಲಕ ನೋಟಿಸ್ ಕಳುಹಿಸಿದರು ಪ್ರಯೋಜನವಾಗಿಲ್ಲ. ಸದ್ಯ ಎರಡು ದಿನಗಳಿಂದ ಅವರ ಮನೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದರೂ ಅನಿತಾ ಕ್ಯಾರೆ ಎಂದಿಲ್ಲ‌ ಎಂದು ಓಂ ಪ್ರಕಾಶ್ ಆಳಲು ತೋಡಿಕೊಳ್ಳುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವೆಂಬರ್‌ನಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದಿದ್ದಕ್ಕೆ ಸಿಎಂ ಪ್ರತಿಕ್ರಿಯೆ ಹೀಗಿತ್ತು

ಈ ವಿಚಾರ ಯಾವಾ ಇಲಾಖೆಯಲ್ಲಿ ಗೊತ್ತಾದಲ್ಲಿ ಕಠಿಣ ಕ್ರಮ: ಜಿ ಪರಮೇಶ್ವರ್

ಬರೋಬ್ಬರಿ ನಾಲ್ಕು ಗಂಟೆ ತೆಂಗಿನ ಮರ ಏರಿ ಕುಳಿತ ವ್ಯಕ್ತಿ, ಕಾರಣ ಕೇಳಿದ್ರೆ ಶಾಕ್‌

ಅನಾರೋಗ್ಯ ಕಾರಣಕ್ಕೆ ತಾತ್ಕಾಲಿಕ ಬ್ರೇಕ್ ಪಡೆದ ಸಂಜಯ್ ರಾವುತ್‌ಗೆ ಮೋದಿ ವಿಶ್‌

ನವೆಂಬರ್ 1ರಂದು ಮೈಸೂರು ಝೂಗೆ ಹೋಗುವ 12ವರ್ಷದೊಳಗಿನ ಮಕ್ಕಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments