Select Your Language

Notifications

webdunia
webdunia
webdunia
webdunia

ಕಾವೇರಿ ವಿವಾದ: ಪ್ರಾಣಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲವೆಂದ ಶಿವರಾಜ್ ಕುಮಾರ್

ಕಾವೇರಿ ವಿವಾದ: ಪ್ರಾಣಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲವೆಂದ ಶಿವರಾಜ್ ಕುಮಾರ್
ಬೆಂಗಳೂರು , ಮಂಗಳವಾರ, 13 ಸೆಪ್ಟಂಬರ್ 2016 (14:03 IST)
ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಉಭಯ ರಾಜ್ಯಗಳಲ್ಲಿ ಆಕ್ರೋಶ ಭುಗಿಲೆದ್ದಿದೆ. ಪ್ರತಿಭಟನೆ ಹೆಸರಿನಲ್ಲಿ ಸಾವು ನೋವುಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಪ್ರಾಣಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಎಲ್ಲರೂ ಶಾಂತಿಯುತ ಪ್ರತಿಭಟನೆ ನಡೆಸೋಣ ಎಂದು ಸಾರ್ವಜನಿಕರಲ್ಲಿ ನಟ ಶಿವರಾಜ್ ಕುಮಾರ್ ಮನವಿ ಮಾಡಿಕೊಂಡಿದ್ದಾರೆ. 
 
ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವವರು ಒಂದು ಬಾರಿ ತಮ್ಮ ಕುಟುಂಬದ ಕುರಿತು ಯೋಚಿಸಿ. ಹೋರಾಟದ ಹೆಸರಿನಲ್ಲಿ ಶಾಂತಿ ಕದಡುವುದು ಸರಿಯಲ್ಲ ಎಂದು ಹೇಳಿದರು.
 
ಕಾವೇರಿ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ ವ್ಯಾಪಕ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಶಾಂತಿ ಕಾಯ್ದುಕೊಳ್ಳುವಂತೆ ರಾಜ್ಯದ ಜನರಲ್ಲಿ ಮನವಿ ಮಾಡಿಕೊಂಡರು. 
 
ಹೋರಾಟದ ವೇಳೆ ಆಕ್ರೋಶ ಪ್ರತಿಭಟನಾಕಾರರ ಆಕ್ರೋಶ ಭುಗಿಲೆದ್ದ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಪೊಲೀಸರು ನಡೆಸಿರುವ ಗುಂಡಿನ ದಾಳಿಯಲ್ಲಿ ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಹುಲಿಯೂರು ದುರ್ಗ ಸಿಂಗೋನಹಳ್ಳಿಯ ಉಮೇಶ ಎಂಬ ಯುವಕ ಬಲಿಯಾಗಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ವಧುವರರಿಗೂ ತಟ್ಟಿದ ಬಂದ್ ಬಿಸಿ: ಗಡಿಯಲ್ಲಿ ನಡೆದೇ ಹೋದರು