Webdunia - Bharat's app for daily news and videos

Install App

ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ಅವಕಾಶ ಹೈಕೋರ್ಟ್

Webdunia
ಗುರುವಾರ, 3 ಮಾರ್ಚ್ 2022 (16:04 IST)
ಕಾಂಗ್ರೆಸ್ ಪಾದಯಾತ್ರೆಗೆ ಹೈಕೋರ್ಟ್​ ಅಸಮಾಧಾನ ವ್ಯಕ್ತಪಡಿಸಿದ್ದು, ಫ್ರೀಡಂ ಪಾರ್ಕ್ ಹೊರತುಪಡಿಸಿ ಬೆಂಗಳೂರು ನಗರದಲ್ಲಿ ಇನ್ಮುಂದೆ ಯಾವುದೇ ಪ್ರತಿಭಟನೆಗಳನ್ನು ಕೈಗೊಳ್ಳದಂತೆ ಆದೇಶ ಹೊರಡಿಸಿದೆ.
 
ಬೆಂಗಳೂರು: ಫ್ರೀಡಂಪಾರ್ಕ್ ಹೊರತುಪಡಿಸಿ ರಾಜಧಾನಿ ಬೆಂಗಳೂರಿನ ಯಾವುದೇ ಭಾಗದಲ್ಲಿಯೂ ರಾಜಕೀಯ ಪಕ್ಷಗಳು ಹಾಗೂ ಸಂಘಟನೆಗಳು ಪ್ರತಿಭಟನೆ ನಡೆಸಬಾರದು ಎಂದು ಹೈಕೋರ್ಟ್ ಕಟ್ಟಪ್ಪಣೆ ಮಾಡಿದೆ.
ರಾಜಕೀಯ ಪಕ್ಷಗಳು ಹಾಗೂ ಸಂಘಟನೆಗಳು ಪ್ರತಿ ಬಾರಿ ಪಾದಯಾತ್ರೆ-ಪ್ರತಿಭಟನೆ ಕೈಗೊಂಡಾಗಲೂ ಜನಸಾಮಾನ್ಯರು ತೀವ್ರ ಸಂಕಷ್ಟಕ್ಕೆ ಸಿಲುಕುತ್ತಿರುವ ಹಿನ್ನೆಲೆಯಲ್ಲಿ ಹೈಕೋರ್ಟ್ ಈ ಆದೇಶ ಹೊರಡಿಸಿದೆ.
 
ಈ ಕುರಿತಂತೆ ಹೈಕೋರ್ಟ್ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಹಾಗೂ ನ್ಯಾಯಮೂರ್ತಿ ಎಸ್.ಆರ್ ಕೃಷ್ಣ ಕುಮಾರ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
 
ವಿಚಾರಣೆ ಆರಂಭವಾಗುತ್ತಿದ್ದಂತೆ ಇಂದಿನ ಪ್ರತಿಭಟನೆ ಕುರಿತು ಪ್ರಸ್ತಾಪಿಸಿದ ನ್ಯಾಯಮೂರ್ತಿ ಎಸ್.ಆರ್ ಕೃಷ್ಣಕುಮಾರ್, ನಗರದಲ್ಲಿ ಪ್ರತಿಭಟನೆ 'ಪಾದಯಾತ್ರೆಗಳನ್ನು ತಡೆಯಲು ಸಾಧ್ಯವಿಲ್ಲವೇ?, ಇಂದು ಮೇಕ್ರಿ ಸರ್ಕಲ್ ಅರಮನೆ ರಸ್ತೆ ದಾಟಿ ಬರಲು ನಮಗೇ ಒಂದು ಗಂಟೆ ಸಮಯ ಹಿಡಿಯಿತು. ಏನಾದರೂ ಕ್ರಮ ಕೈಗೊಳ್ಳಬೇಕಲ್ಲವೇ?' ಎಂದರು.
 
ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಸರ್ಕಾರದ ಪರ ವಕೀಲರನ್ನು ಪ್ರಶ್ನಿಸಿ, ಪ್ರತಿಭಟನೆ-ಪಾದಯಾತ್ರೆಗಳಿಗೆ ನಿರ್ದಿಷ್ಟ ಜಾಗವನ್ನೇಕೆ ನಿಗದಿ ಮಾಡಬಾರದು?, ರಸ್ತೆಯಲ್ಲಿ ಪ್ರತಿಭಟನೆ ಮಾಡಿದರೆ ಜನರು ಏನು ಮಾಡಬೇಕು?, ಅವರು ಯಾವುದಕ್ಕಾದರೂ ಪ್ರತಿಭಟನೆ ಮಾಡಲಿ. ಫ್ರೀಡಂ ಪಾರ್ಕ್​​​ನಲ್ಲಿ ಮಾಡಲಿ. ಪ್ರತಿಭಟನೆಗಳಿಂದ ಜನಸಾಮಾನ್ಯರಿಗೆ ತೊಂದರೆ ಉಂಟುಮಾಡುವವರ ವಿರುದ್ಧ ಯಾವ ರೀತಿ ಕ್ರಮ ಕೈಗೊಳ್ಳಬಹುದು? ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments