Webdunia - Bharat's app for daily news and videos

Install App

ವಿಕೋಪಕ್ಕೆ ತಿರುಗಿದ ರೈತರ ಪ್ರತಿಭಟನೆ: ಜೀಪ್ ಗೆ ಕಲ್ಲು, ಐದು ಟ್ರಾಕ್ಟರ್ ಪಲ್ಟಿ ಹೊಡೆಸಿ ಆಕ್ರೋಶ

Webdunia
ಭಾನುವಾರ, 18 ನವೆಂಬರ್ 2018 (14:41 IST)
ಕಬ್ಬಿನ ಬಾಕಿ ಪಾವತಿ ಮತ್ತು ಸಮರ್ಪಕ ಬೆಲೆ‌ನಿಗದಿಗೆ ಆಗ್ರಹಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ವಿಕೋಪಕ್ಕೆ ತಿರುಗಿದೆ.

ಬಾಗಲಕೋಟೆ ಜಿಲ್ಲೆ ಕಬ್ಬು ಬೆಳೆಗಾರರು ನಡೆಸುತ್ತಿರುವ ಪ್ರತಿಭಟನೆ ವಿಕೋಪಕ್ಕೆ ತಿರುಗಿದೆ. ತಮಗೆ ನ್ಯಾಯ ಸಿಗದ ಹಿನ್ನೆಲೆ ಆಕ್ರೋಶಗೊಂಡಿರುವ ರೈತರು ಕಬ್ಬು ಸಾಗಿಸುತ್ತಿದ್ದ ಐದು ಟ್ರ್ಯಾಕ್ಟರ್ ಗಳನ್ನು  ಪಲ್ಟಿ ಹೊಡೆಸಿ ಆಕ್ರೋಶ ಹೊರಹಾಕಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಕುಳಲಿ ಗ್ರಾಮದ ಬಳಿ ಘಟನೆ ನಡೆದಿದೆ. ನಿರಾಣಿ ಶುಗರ್ಸ್ ಗೆ ಟ್ರ್ಯಾಕ್ಟರ್ ಗಳ ಮೂಲಕ ಕಬ್ಬನ್ನು ಸಾಗಿಸಲಾಗುತ್ತಿತ್ತು. ಇನ್ನೊಂದು ಕಡೆ ರನ್ನ ರೈತರ ಸಹಕಾರಿ ಸಕ್ಕರೆ ಕಾರ್ಖಾನೆ ಮುಂದೆ ರೈತರು ಅಹೋರಾತ್ರಿ ಧರಣಿ ಮುಂದುವರೆಸಿದ್ದಾರೆ.

ಈ ಮಧ್ಯೆ  ಟ್ರ್ಯಾಕ್ಟರ್ ಗಳ  ಮೂಲಕ ಕಬ್ಬು ಸಾಗಿಸಲು ಕೆಲ ರೈತರು ಮುಂದಾಗಿದ್ದರು. ಇದರಿಂದ ಆಕ್ರೋಶಗೊಂಡ ರೈತರು ಈ ಕೃತ್ಯವೆಸಗಿದ್ದಾರೆ. ಜೊತೆಗೆ ನಿರಾಣಿ ಶುಗರ್ಸ್ ಗೆ ಸೇರಿದ ಜೀಪ್ ಒಂದಕ್ಕೆ ಕಲ್ಲೆಸೆದು ಹಿಂಬದಿ ಗಾಜನ್ನು ಜಖಂಗೊಳಿಸಿದ್ದಾರೆ. ಕುಳಲಿ ಗ್ರಾಮದ ಬಳಿ 10 ಕ್ಕೂ ಹೆಚ್ಚು ಟ್ರ್ಯಾಕ್ಟರ್ ಗಳನ್ನು ತಡೆಹಿಡಿದಿದ್ದಾರೆ.

ಘಟನೆ ಬಳಿಕ ಎರಡೂ ಗುಂಪುಗಳ ಮಧ್ಯೆ ಘರ್ಷಣೆ ನಡೆದಿದ್ದು, ಮುಧೋಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಇನ್ನೊಂದು ಕಡೆ ರಬಕವಿ-ಬನಹಟ್ಟಿ ತಾಲ್ಲೂಕಿನ ಮಹಲಿಂಗಪುರ ಪಟ್ಟಣದಲ್ಲೂ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಗಳ ಗಾಳಿ ತೆಗೆದು ಆಕ್ರೋಶ ವ್ಯಕ್ತಪಡಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಗಾಂಧೀಜಿ ಬಗ್ಗೆ ತಪ್ಪು ಮಾಹಿತಿ ಕೊಟ್ರಾ ರಾಹುಲ್ ಗಾಂಧಿ: ಲೆಹರ್ ಸಿಂಗ್ ಟ್ವೀಟ್ ನಲ್ಲಿ ಏನಿದೆ ನೋಡಿ

ರಕ್ತದ ಮಡುವಿನಲ್ಲಿ ನಿವೃತ್ತ ಪೊಲೀಸ್ ಓಂ ಪ್ರಕಾಶ್‌ ಮೃತದೇಹ ಪತ್ತೆ, ಮನೆಯವರೇ ಮೇಲೆ ಡೌಟ್‌

ಸಿಎಂ ಕುರ್ಚಿ ಗುದ್ದಾಟದ ನಡುವೆ ಧರ್ಮಸ್ಥಳಕ್ಕೆ ಭೇಟಿ ನೀಡಿ, ಧರ್ಮಾಧಿಕಾರಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್

Video vira: ವಿದ್ಯುತ್ ಶಾಕ್‌ನಿಂದ ಒದ್ದಾಟುತ್ತಿದ್ದ ಬಾಲಕನ ಪಾಲಿಗೆ ನಿಜವಾದ ಹೀರೋ ಆದ ಯುವಕ, ಇದಪ್ಪ ದೈರ್ಯ

ನನ್ನ ಸಾವಿಗೆ ಪತ್ನಿ, ಅತ್ತೆಯೇ ಕಾರಣ: ನ್ಯಾಯಕೊಡಿಸಲು ಸಾಧ್ಯವಾಗದಿದ್ದರೆ ಚಿತಾಭಸ್ಮ ಚರಂಡಿಗೆ ಎಸೆಯಿರಿ, ವಿಡಿಯೋ ಮಾಡಿಟ್ಟು ಟೆಕ್ಕಿ ಸಾವು

ಮುಂದಿನ ಸುದ್ದಿ
Show comments