Daily Horoscope

ವಿಕೋಪಕ್ಕೆ ತಿರುಗಿದ ರೈತರ ಪ್ರತಿಭಟನೆ: ಜೀಪ್ ಗೆ ಕಲ್ಲು, ಐದು ಟ್ರಾಕ್ಟರ್ ಪಲ್ಟಿ ಹೊಡೆಸಿ ಆಕ್ರೋಶ

Webdunia
ಭಾನುವಾರ, 18 ನವೆಂಬರ್ 2018 (14:41 IST)
ಕಬ್ಬಿನ ಬಾಕಿ ಪಾವತಿ ಮತ್ತು ಸಮರ್ಪಕ ಬೆಲೆ‌ನಿಗದಿಗೆ ಆಗ್ರಹಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ವಿಕೋಪಕ್ಕೆ ತಿರುಗಿದೆ.

ಬಾಗಲಕೋಟೆ ಜಿಲ್ಲೆ ಕಬ್ಬು ಬೆಳೆಗಾರರು ನಡೆಸುತ್ತಿರುವ ಪ್ರತಿಭಟನೆ ವಿಕೋಪಕ್ಕೆ ತಿರುಗಿದೆ. ತಮಗೆ ನ್ಯಾಯ ಸಿಗದ ಹಿನ್ನೆಲೆ ಆಕ್ರೋಶಗೊಂಡಿರುವ ರೈತರು ಕಬ್ಬು ಸಾಗಿಸುತ್ತಿದ್ದ ಐದು ಟ್ರ್ಯಾಕ್ಟರ್ ಗಳನ್ನು  ಪಲ್ಟಿ ಹೊಡೆಸಿ ಆಕ್ರೋಶ ಹೊರಹಾಕಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಕುಳಲಿ ಗ್ರಾಮದ ಬಳಿ ಘಟನೆ ನಡೆದಿದೆ. ನಿರಾಣಿ ಶುಗರ್ಸ್ ಗೆ ಟ್ರ್ಯಾಕ್ಟರ್ ಗಳ ಮೂಲಕ ಕಬ್ಬನ್ನು ಸಾಗಿಸಲಾಗುತ್ತಿತ್ತು. ಇನ್ನೊಂದು ಕಡೆ ರನ್ನ ರೈತರ ಸಹಕಾರಿ ಸಕ್ಕರೆ ಕಾರ್ಖಾನೆ ಮುಂದೆ ರೈತರು ಅಹೋರಾತ್ರಿ ಧರಣಿ ಮುಂದುವರೆಸಿದ್ದಾರೆ.

ಈ ಮಧ್ಯೆ  ಟ್ರ್ಯಾಕ್ಟರ್ ಗಳ  ಮೂಲಕ ಕಬ್ಬು ಸಾಗಿಸಲು ಕೆಲ ರೈತರು ಮುಂದಾಗಿದ್ದರು. ಇದರಿಂದ ಆಕ್ರೋಶಗೊಂಡ ರೈತರು ಈ ಕೃತ್ಯವೆಸಗಿದ್ದಾರೆ. ಜೊತೆಗೆ ನಿರಾಣಿ ಶುಗರ್ಸ್ ಗೆ ಸೇರಿದ ಜೀಪ್ ಒಂದಕ್ಕೆ ಕಲ್ಲೆಸೆದು ಹಿಂಬದಿ ಗಾಜನ್ನು ಜಖಂಗೊಳಿಸಿದ್ದಾರೆ. ಕುಳಲಿ ಗ್ರಾಮದ ಬಳಿ 10 ಕ್ಕೂ ಹೆಚ್ಚು ಟ್ರ್ಯಾಕ್ಟರ್ ಗಳನ್ನು ತಡೆಹಿಡಿದಿದ್ದಾರೆ.

ಘಟನೆ ಬಳಿಕ ಎರಡೂ ಗುಂಪುಗಳ ಮಧ್ಯೆ ಘರ್ಷಣೆ ನಡೆದಿದ್ದು, ಮುಧೋಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಇನ್ನೊಂದು ಕಡೆ ರಬಕವಿ-ಬನಹಟ್ಟಿ ತಾಲ್ಲೂಕಿನ ಮಹಲಿಂಗಪುರ ಪಟ್ಟಣದಲ್ಲೂ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಗಳ ಗಾಳಿ ತೆಗೆದು ಆಕ್ರೋಶ ವ್ಯಕ್ತಪಡಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments