Select Your Language

Notifications

webdunia
webdunia
webdunia
webdunia

ದೇಶಾದ್ಯಂತ ಬಡವರಿಗೆ ಉಚಿತವಾಗಿ ಕೊರೊನಾ ಚಿಕಿತ್ಸೆ ನೀಡಿ- ಪ್ರಧಾನಿಗೆ ಸಂಸದ ಜಿ.ಸಿ.ಚಂದ್ರಶೇಖರ್ ಮನವಿ

ದೇಶಾದ್ಯಂತ ಬಡವರಿಗೆ ಉಚಿತವಾಗಿ ಕೊರೊನಾ ಚಿಕಿತ್ಸೆ ನೀಡಿ- ಪ್ರಧಾನಿಗೆ ಸಂಸದ ಜಿ.ಸಿ.ಚಂದ್ರಶೇಖರ್ ಮನವಿ
ನವದೆಹಲಿ , ಶನಿವಾರ, 27 ಜೂನ್ 2020 (08:44 IST)
ನವದೆಹಲಿ : ಕೊರೊನಾ ಸೋಂಕಿತ ಬಡವರ್ಗದ ಜನರ  ಕುರಿತಾಗಿ ರಾಜ್ಯ ಸಭೆ ಸಂಸದ ಜಿ.ಸಿ.ಚಂದ್ರಶೇಖರ್ ಪ್ರಧಾನಿ ಮೋದಿಗೆ ಮನವಿಯೊಂದನ್ನು ಮಾಡಿದ್ದಾರೆ.

ಈ ಬಗ್ಗೆ ಪತ್ರ ಬರೆದ ಅವರು, ಬಡವರು, ಕೂಲಿ ಕಾರ್ಮಿಕರು, ವಲಸೆ ಕಾರ್ಮಿಕರು ಕೊರೊನಾ ಸೋಂಕಿಗೆ ಸ್ವಂತ ಹಣ ಖರ್ಚು ಮಾಡಿ ಚಿಕಿತ್ಸೆ ಪಡೆಯಲು ಸಾಧ್ಯವಿಲ್ಲ. ಆದಕಾರಣ ಕೇಂದ್ರ ಸರ್ಕಾರ ಬಿಪಿಎಲ್ ಪಡಿತರ ಕಾರ್ಡು ಹೊಂದಿದ ಕುಟುಂಬಗಳಿಗೆ ಉಚಿತ ಚಿಕಿತ್ಸೆ ನೀಡಲು ಆದೇಶಿಸುವಂತೆ ಪ್ರಧಾನಿ ಮೋದಿ ಅವರಲ್ಲಿ ಮನವಿ ಮಾಡಿದ್ದಾರೆ.

ಅಲ್ಲದೇ ಈಗಾಗಲೇ ಸಿಎಂ ಬಿಎಸ್ ವೈ ಅವರಿಗೆ ಬಡವರಿಗೆ ಉಚಿತ ಚಿಕಿತ್ಸೆ ನೀಡುವಂತೆ ಮನವಿ ಮಾಡಿದ್ದು, ಸರ್ಕಾರ ತಮ್ಮ ಮನವಿಯನ್ನು ಒಪ್ಪಿದೆ. ಅದೇರೀತಿ ದೇಶಾದ್ಯಂತ ಬಡವರಿಗೆ ಉಚಿತ ಚಿಕಿತ್ಸೆ ನೀಡುವಂತೆ ಮಾಡಬೇಕು ಎಂದು ಪ್ರಧಾನಿಗೆ ಮನವಿ ಮಾಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಮಾಜಿ ಪ್ರಧಾನಿಯನ್ನು ಟೀಕಿಸಲು ಹೋಗಿ ಟ್ರೋಲ್ ಆದ ಬಿಜೆಪಿ ರಾಷ್ಟ್ರಾಧ್ಯಕ್ಷ