ಕೇಂದ್ರೀಯ ಉತ್ಪಾದನಾ ಕೇಂದ್ರಗಳಿಂದ ವಿದ್ಯುತ್‌ ನೀಡಿ

Webdunia
ಗುರುವಾರ, 12 ಅಕ್ಟೋಬರ್ 2023 (16:20 IST)
ಇಂಧನ ಸಚಿವ ಕೆಜೆ ಜಾರ್ಜ್ ಅವರು ಕೇಂದ್ರ ಸರ್ಕಾರದ ವಿದ್ಯುತ್, ನವ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಆರ್.ಕೆ.ಸಿಂಗ್ ಅವರನ್ನು ಕರ್ನಾಟಕದ ಇಂಧನ ಪರಿಸ್ಥಿತಿಯ ಕುರಿತು ಮನವರಿಕೆ ಮಾಡಿಕೊಡಲು ಬುಧವಾರ ಸಂಜೆ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಕೆ ಜೆ ಜಾರ್ಜ್ ಅವರು ವಿದ್ಯುತ್ ಬೇಡಿಕೆಯ ಹೆಚ್ಚಳದ ದೃಷ್ಟಿಯಿಂದ ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆಯನ್ನು ಹೆಚ್ಚಿಸಲು ತೆಗೆದುಕೊಂಡ ಕ್ರಮಗಳ ಬಗ್ಗೆ ವಿವರಿಸಿದರು. ಈ ವೇಳೆ ಕೇಂದ್ರೀಯ ಉತ್ಪಾದನಾ ಕೇಂದ್ರಗಳಲ್ಲಿ ಹೆಚ್ಚಿನ ಪಾಲು ನೀಡುವ ಮೂಲಕ ಕರ್ನಾಟಕದ ಹೆಚ್ಚುವರಿ ವಿದ್ಯುತ್ ಅಗತ್ಯವನ್ನು ಪೂರೈಸಲು ಬೆಂಬಲಿಸಬೇಕೆಂದು ವಿನಂತಿಸಿದರು. ಕೆಜೆ ಜಾರ್ಜ್ ಅವರು ಕರ್ನಾಟಕ ಇಂಧನ ಸಚಿವಾಲಯದ ವಿವಿಧ ನವೀನ ಯೋಜನೆಗಳ ವಿವರಗಳನ್ನು ಹಂಚಿಕೊಳ್ಳುತ್ತಾ ರಾಜ್ಯವು ವಾಯು ಮತ್ತು ಸೌರ ಶಕ್ತಿಯ ಮೂಲಗಳಿಂದ ಶಕ್ತಿ ಉತ್ಪಾದನೆಗೆ ಹೆಚ್ಚು ಒತ್ತು ನೀಡುತ್ತಿದೆ. ಆ ಮೂಲಕ ನವೀಕರಿಸಲಾಗದ ಇಂಧನ ಉತ್ಪಾದನೆಯ ಮೂಲಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುತ್ತಿರುವ ಬಗ್ಗೆ ತಿಳಿಸಿ ಈ ಮೂಲಕ ಶುದ್ಧ ಮತ್ತು ಸಮರ್ಥ ನವೀಕರಿಸಬಹುದಾದ ಇಂಧನ ಮೂಲಗಳತ್ತ ಸಾಗುತ್ತಿರುವ ಬಗ್ಗೆ ವಿವರಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಚನಾನಂದ ಶ್ರೀ ವಿರುದ್ಧದ ಫೋಕ್ಸೋ ಕೇಸ್‌. ವಿಚಾರಣೆಯಲ್ಲಿ ಮಹತ್ವದ ಬೆಳವಣಿಗೆ

ತಮಿಳುನಾಡು: 300 ಕ್ಕೂ ಹೆಚ್ಚು ಎಐಎಡಿಎಂಕೆ ಸದಸ್ಯರು ಟಿವಿಕೆಗೆ ಸೇರ್ಪಡೆ

ಕೇರಳದ ವಯನಾಡಿನಲ್ಲಿ 150ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು, ಶಾಲೆಗೆ ಒಂದು ವಾರ ರಜೆ ಘೋಷಿಸಿದ್ಯಾಕೆ

ಅಣ್ಣಾಮಲೈ ಕಾಕ್ರೋಚ್ ಪಾರ್ಟಿ ಸೇರ್ತಾರಾ, ಕೌಂಟರ್ ಕೊಡ್ತಾರಾ ಇಲ್ಲಿದೆ ಅಸಲಿ ಸತ್ಯ

5 ವರ್ಷದ ಮಗಳ ಅನುಮಾನಸ್ಪದ ಸಾವು: ಪತ್ನಿ, ಆಕೆಯ ಪ್ರಿಯಕರನ ವಿರುದ್ಧ ಪತಿ ದೂರು

ಮುಂದಿನ ಸುದ್ದಿ
Show comments