Webdunia - Bharat's app for daily news and videos

Install App

ಪ್ರಚೋದನಕಾರಿ ಹೇಳಿಕೆ: ಬಸನಗೌಡ ಪಾಟೀಲ ವಿರುದ್ಧ ಎಫ್‌ಐಆರ್‌

Sampriya
ಬುಧವಾರ, 20 ಆಗಸ್ಟ್ 2025 (17:23 IST)
ಕೊಪ್ಪಳ: ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ವಿಜಯಪುರದ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಇದೀಗ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. 

ಹಿಂದೂ ಹಾಗೂ ಮುಸ್ಲಿಮರ ನಡುವೆ ಸೌಹಾರ್ದಕ್ಕೆ ಧಕ್ಕೆ ತರುವ ರೀತಿಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮುಸ್ಲಿಂ ಯುವಕನಿಂದ ಆಗಸ್ಟ್‌ 3ರಂದು ಇಲ್ಲಿನ ಕುರುಬರ ಓಣಿಯ ಗವಿಸಿದ್ದಪ್ಪ ನಾಯಕ ಎನ್ನುವ ಯುವಕನ ಕೊಲೆಯಾಗಿತ್ತು. ಅವರ ಕುಟುಂಬದವರಿಗೆ ಸಾಂತ್ವಾನ ಹೇಳಲು ಆ. 10ರಂದು ಕೊಪ್ಪಳಕ್ಕೆ ಬಂದಿದ್ದ ವೇಳೆ ಯತ್ನಾಳ ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ ₹5 ಲಕ್ಷ ಕೊಡುತ್ತೇನೆ. ಈ ಮೂಲಕ ಕೊಲೆ ಮಾಡುವ ಮುಸ್ಲಿಮರಿಗೆ ಉತ್ತರ ನೀಡಬೇಕಿದೆ, ಇದೀಗ ರಾಜ್ಯದಲ್ಲಿ ಸಾಬರ ಸರ್ಕಾರವಿದೆ ಎಂದು ಹೇಳಿಕೆ ನೀಡಿದರು. ಇದು ಸಾಕಷ್ಟು ಟೀಕೆಗೂ ಕಾರಣವಾಗಿತ್ತು.

ಆದ್ದರಿಂದ ಇಲ್ಲಿನ ಕುವೆಂಪು ನಗರದ ನಿವಾಸಿಯಾಗಿರುವ ಅಬ್ದುಲ್‌ ಕಲಾಂ ದೂರು ನೀಡಿದ್ದು ಯತ್ನಾಳ ಹೇಳಿಕೆಯಿಂದಾಗಿ ಎರಡು ಧರ್ಮಗಳ ನಡುವೆ ದ್ವೇಷ ಬೆಳೆಯುವಂತಾಗಿದೆ. 

ಮುಸ್ಲಿಂ ಮಹಿಳೆಯರನ್ನು ಕೀಳಾಗಿ ಕೆಟ್ಟ ಮನಸ್ಥಿತಿಯಿಂದ ನೋಡುವುದಲ್ಲದೆ ಅವರನ್ನು ಅವಮಾನ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಪತ್ತೆಯಾದ ಅನನ್ಯಾಳದೆಂದು ಸುಜಾತ ಭಟ್‌ ತೋರಿಸಿದ್ದ ಫೋಟೊಗೆ ಮತ್ತೊಂದು ಬಿಗ್‌ಟ್ವಿಸ್ಟ್‌

ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ: ರಾಧಾಕೃಷ್ಣನ್‌ಗೆ ಪ್ರಧಾನಿ ಮೋದಿ ಸೇರಿ ಎನ್‌ಡಿಎ ನಾಯಕರು ಸಾಥ್‌

ಪ್ರೇಮ ನಿವೇದನೆಯನ್ನು ತಿರಸ್ಕರಿಸಿದ ಶಿಕ್ಷಕಿ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಮಾಜಿ ವಿದ್ಯಾರ್ಥಿ

ಧರ್ಮಸ್ಥರ ಬುರುಡೆ ರಹಸ್ಯ: ಸರ್ಕಾರದ ವಿರುದ್ಧವೇ ಗರಂ ಆದ ಕಾಂಗ್ರೆಸ್ ನಾಯಕ ಅಭಯಚಂದ್ರ ಜೈನ್

ರೇಖಾ ಗುಪ್ತಾ ಮೇಲೆ ಕಪಾಳಮೋಕ್ಷ: ಆರೋಪಿ ಬೆನ್ನತ್ತಿದ್ದಾಗ ಬಯಲಾಯಿತು ಸ್ಫೋಟಕ ರಹಸ್ಯ

ಮುಂದಿನ ಸುದ್ದಿ
Show comments