ಎನ್ ಕೌಂಟರಲ್ಲಿ ಗಾಯಗೊಂಡ ಪಿಎಸ್ಐಗೆ ಸ್ಪರ್ಶದಲ್ಲಿ ಚಿಕಿತ್ಸೆ: ನೋಡಲು ಬಾರದ ಅಧಿಕಾರಿಗಳು

Webdunia
ಸೋಮವಾರ, 6 ನವೆಂಬರ್ 2017 (21:06 IST)
ಬೆಂಗಳೂರು: ವಿಜಯಪುರ ಜಿಲ್ಲೆಯ ಕೊಂಕಣಗಾಂವ್ ಬಳಿ ಭೀಮಾತೀರದ ಹಂತಕನ ಎನ್ ಕೌಂಟರ್ ಪ್ರಕರಣದಲ್ಲಿ ಗುಂಡೇಟಿಗೆ ಒಳಗಾಗಿದ್ದ ಚಡಚಣ ಠಾಣೆ ಪಿಎಸ್ಐ ಗೋಪಾಲ್ ಹಳ್ಳೂರ್ ಸ್ಪರ್ಶ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಳೂರಿನ ಹೊಸೂರು ರಸ್ತೆಯಲ್ಲಿರುವ ಸ್ಪರ್ಶ ಆಸ್ಪತ್ರೆಯಲ್ಲಿ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ಮೂಲಕ 2 ಗುಂಡು ತೆಗೆದಿದ್ದು, ಗೋಪಾಲ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನೂ 15 ದಿನ ಸ್ಪರ್ಶ ಆಸ್ಪತ್ರೆಯಲ್ಲಿ ಪಿಎಸ್ಐ ಚಿಕಿತ್ಸೆ ಪಡೆಯಲಿದ್ದು, ಮುಂದಿನ ನಾಲ್ಕು ತಿಂಗಳು ಚಿಕಿತ್ಸೆ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದು, ಯಶವಂತಪುರದಲ್ಲಿರುವ ಸ್ಪರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆಯಲಿದೆ.

ಆದರೆ ಗುಂಡೇಟು ತಿಂದು ಆಸ್ಪತ್ರೆಯಲ್ಲಿ ಮಲಗಿರುವ ಸಹದ್ಯೋಗಿಯನ್ನು ಯಾವುದೇ ಅಧಿಕಾರಿಯೂ ನೋಡಲು ಬಂದಿಲ್ಲ. ಪೊಲೀಸ್ ಇಲಾಖೆ ಹೊಂದಿರುವ ಆರೋಗ್ಯ ಭಾಗ್ಯ ಯೋಜನೆಯ ಲಿಸ್ಟ್ ನಲ್ಲಿ ಸ್ಪರ್ಶ ಆಸ್ಪತ್ರೆಯಿಲ್ಲ. ಹೀಗಾಗಿ ಚಿಕಿತ್ಸೆಗೆಂದು ಗೋಪಾಲ್ ಕುಟುಂಬಸ್ಥರು ಈಗಾಗಲೇ 3 ಲಕ್ಷ ರೂ. ವೆಚ್ಚ ಮಾಡಿದ್ದಾರೆ. ಮತ್ತೆ 2 ರಿಂದ 3 ಲಕ್ಷ ರೂ. ವೆಚ್ಚ ಮಾಡಬೇಕಾದ ಅಗತ್ಯವಿದೆ. ಆದರೆ ಘಟನೆಯಲ್ಲಿ ಗೋಪಾಲ್ ಬದುಕುಳಿದಿದ್ದೇ ದೊಡ್ಡದು ಎಂದು ಕುಟುಂಬದ ಸದಸ್ಯರು ಸುಮ್ಮನಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಧಾನಿಯ ರಸ್ತೆ ಗುಂಡಿಯನ್ನು ವಾರದೊಳಗೆ ಮುಚ್ಚಿ: ಅಧಿಕಾರಿಗಳಿಗೆ ಸಿದ್ದರಾಮಯ್ಯ ತಾಕೀತು

ಟೀಚರ್ ಎನ್ನಲೂ ನಾಲಾಯಕ್, ಚಿತ್ರದುರ್ಗದ ಸಂಸ್ಕೃತ ಶಿಕ್ಷಕ ಬಾಲಕನಿಗೆ ಕಾಲಿನಿಂದ ಒದ್ದ ವಿಡಿಯೋ

ಜಪಾನ್‌ನಲ್ಲಿ ಹೊಸ ಇತಿಹಾಸ ಬರೆದ ಸನೇ ಟಕೈಚಿ, ಮೋದಿಯಿಂದ ಅಭಿನಂದನೆ

ಕಾಂಗ್ರೆಸ್ ಸರ್ಕಾರದ ನಡೆಯಿಂದ ಇರುವ ಕಂಪೆನಿಗಳನ್ನು ಉಳಿಸಿಕೊಳ್ಳುವುದೇ ದೊಡ್ಡ ವಿಷಯ: ಸುಧಾಕರ್ ಕಿಡಿ

ಬಿಜೆಪಿ ಹೈಕಮಾಂಡಿಗೆ ₹1800 ಕೋಟಿ ಕಪ್ಪ ನೀಡಿದ್ದನ್ನಾ ಮರೆತ್ರಾ: ಕೆದಿಕಿದ ರಾಘವೇಂದ್ರಗೆ ಪ್ರಿಯಾಂಕ್ ಖರ್ಗೆ ಕೌಂಟರ್

ಮುಂದಿನ ಸುದ್ದಿ
Show comments