Webdunia - Bharat's app for daily news and videos

Install App

ಪಿಎಸ್‌ಐ ಕೇಸ್ ಅನ್ನೇ ಮುಚ್ಚಿ ಹಾಕ್ತಿದ್ರು : ಸಿಎಂ

Webdunia
ಮಂಗಳವಾರ, 5 ಜುಲೈ 2022 (14:43 IST)
ಬೆಂಗಳೂರು : ಪಿಎಸ್ಐ ಪ್ರಕರಣ ಕಾಂಗ್ರೆಸ್ ಸರ್ಕಾರ ಇದ್ದಾಗ ನಡೆದಿರುತ್ತಿದ್ದರೆ, ಅವರು ವ್ಯವಸ್ಥಿತವಾಗಿ ಮುಚ್ಚಿ ಹಾಕುತ್ತಿದ್ದರು.
 
ಏಕೆಂದರೆ ಈ ಹಿಂದೆಯೂ ಅವರು ಇಂತಹ ಪ್ರಕರಣಗಳನ್ನು ಮುಚ್ಚಿ ಹಾಕಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾವು ವ್ಯವಸ್ಥೆಯನ್ನು ಸ್ವಚ್ಛ ಮಾಡಲು ಬಂದಿದ್ದೇವೆ. ನಮ್ಮ ಈ ಕೆಲಸ ಹೀಗೆಯೇ ಮುಂದುವರಿಯುತ್ತದೆ. ಗೃಹ ಸಚಿವ ಆರಗ ಜ್ಞಾನೇಂದ್ರ ದಕ್ಷತೆ, ಪ್ರಾಮಾಣಿಕತೆಯಿಂದ ಕೆಲಸ ಮಾಡುತ್ತಿದ್ದಾರೆ.

ಇದರಿಂದಲೇ ಹಲವರ ಬಂಧನ ಆಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಆರಗ ಜ್ಞಾನೇಂದ್ರ ಅವರ ಪರ ಬ್ಯಾಟಿಂಗ್ ಮಾಡಿದರು. ಗೃಹ ಸಚಿವ ಸ್ಥಾನಕ್ಕೆ ಆರಗ ಜ್ಞಾನೇಂದ್ರ ರಾಜೀನಾಮೆ ನೀಡಬೇಕೆಂಬ ಡಿ.ಕೆ ಶಿವಕುಮಾರ್ ಆಗ್ರಹಕ್ಕೆ ಟಾಂಗ್ ನೀಡಿದ ಬೊಮ್ಮಾಯಿ, ಅವರ ಕಾಲದಲ್ಲೂ ಪಿಎಸ್ಐ ಹಗರಣ ಆಗಿತ್ತು.

ಪಿಎಸ್ಐ ನೇಮಕಾತಿ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದು, ಹಿರಿಯ ಅಧಿಕಾರಿಯೇ ಆರೋಪಿಯಾಗಿದ್ದರು. ಆದರೆ ಅವರು ಯಾವುದೇ ಕ್ರಮ ತೆಗೆದುಕೊಂಡಿರಲಿಲ್ಲ ಎಂದು ತಿರುಗೇಟು ನೀಡಿದರು. 
.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments