ದರ್ಪ, ದೌರ್ಜನ್ಯ ತೋರುತ್ತಿದ್ದ ಪಿಎಸ್ ಐ ಅಮಾನತು!

Webdunia
ಗುರುವಾರ, 8 ಜುಲೈ 2021 (14:05 IST)
ಸಿಗರೇಟು ಸೇದುತ್ತಿದ್ದ ವ್ಯಕ್ತಿಯಿಂದ 5 ಸಾವಿರ ರೂ. ಕಸಿದಿದ್ದು ಸೇರಿದಂತೆ ನಾನಾ ಆರೋಪಗಳ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯ ಹಡಗಲಿ ಪಿಎಸ್ ಐ ಎಸ್.ಪಿ. ನಾಯ್ಕ್ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.
ಪೊಲೀಸ್ ಅಧಿಕಾರಿಯಾಗಿ ಕರ್ತವ್ಯದ ವೇಳೆ ಸಾರ್ವಜನಿಕರ ಮೇಲೆ ದರ್ಪ ಹಾಗೂ ದೌರ್ಜನ್ಯ ಕರ್ತವ್ಯ ಲೋಪದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ.
ರಾಜೇಂದ್ರ ನಾಯ್ಕ ಎಂಬ ವ್ಯಕ್ತಿಯನ್ನು ಅಶ್ಲೀಲವಾಗಿ ನಿಂದಿಸಿದ್ದೂ ಅಲ್ಲದೇ ಹಲ್ಲೆ ಮಾಡಿದ್ದರು. ಅಲ್ಲದೇ ಮರಳು ಲಾರಿ ಚಾಲಕನ ಬಳಿ 10 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಸೀಗೆರೇಟು ಸೇದಿದ ವ್ಯಕ್ತಿಯಿಂದ 5 ಸಾವಿರ ರೂ. ಕಸಿದುಕೊಂಡ ಆರೋಪಗಳು ತನಿಖೆ ವೇಳೆ ರುಜುವಾತಾಗಿತ್ತು.
ಹಡಗಲಿ ಠಾಣಾ ವ್ಯಾಪ್ತಿಯಲ್ಲಿ ಇಸ್ಪಿಟ್ ಜೂಜು ನಡೆದರೆ ಕ್ರಮ ತೆಗೆದುಕೊಂಡಿರಲಿಲ್ಲ. ಈ ಎಲ್ಲ ಆರೋಪಗಳನ್ನ ಪರಿಶೀಲಿಸಿ ಪಿಎಸ್ ಐ ಅವರನ್ನು ಅಮಾನತು ಮಾಡಿ ಬಳ್ಳಾರಿ ಎಸ್ ಪಿ ಆದೇಶ ಹೊರಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಚನಾನಂದ ಶ್ರೀ ವಿರುದ್ಧದ ಫೋಕ್ಸೋ ಕೇಸ್‌. ವಿಚಾರಣೆಯಲ್ಲಿ ಮಹತ್ವದ ಬೆಳವಣಿಗೆ

ತಮಿಳುನಾಡು: 300 ಕ್ಕೂ ಹೆಚ್ಚು ಎಐಎಡಿಎಂಕೆ ಸದಸ್ಯರು ಟಿವಿಕೆಗೆ ಸೇರ್ಪಡೆ

ಕೇರಳದ ವಯನಾಡಿನಲ್ಲಿ 150ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು, ಶಾಲೆಗೆ ಒಂದು ವಾರ ರಜೆ ಘೋಷಿಸಿದ್ಯಾಕೆ

ಅಣ್ಣಾಮಲೈ ಕಾಕ್ರೋಚ್ ಪಾರ್ಟಿ ಸೇರ್ತಾರಾ, ಕೌಂಟರ್ ಕೊಡ್ತಾರಾ ಇಲ್ಲಿದೆ ಅಸಲಿ ಸತ್ಯ

5 ವರ್ಷದ ಮಗಳ ಅನುಮಾನಸ್ಪದ ಸಾವು: ಪತ್ನಿ, ಆಕೆಯ ಪ್ರಿಯಕರನ ವಿರುದ್ಧ ಪತಿ ದೂರು

ಮುಂದಿನ ಸುದ್ದಿ
Show comments