Publish Date: Fri, 03 Feb 2023 (12:00 IST)
Updated Date: Fri, 03 Feb 2023 (12:02 IST)
ಬೆಂಗಳೂರು : ಪಿಎಸ್ಐ ನೇಮಕಾತಿಯಲ್ಲಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸೂಚನೆ ನೀಡಿದೆ.
ಇಲ್ಲಿಯವರೆಗೆ ನಡೆದಿರುವ ತನಿಖೆ, ತೆಗೆದುಕೊಂಡಂತಹ ಕ್ರಮದ ಬಗ್ಗೆ ವರದಿ ನೀಡುವಂತೆ ಸೂಚನೆ ನೀಡಿದ್ದು ವಾರದ ಒಳಗೆ ಎಲ್ಲಾ ವರದಿ ಸಲ್ಲಿಸಿ ಎಂದು ಸೂಚಿಸಿದೆ.
ಪ್ರಮುಖವಾಗಿ ಎಡಿಜಿಪಿ ಅಮೃತ್ ಪಾಲ್ ಬಂಧಿಸಿರುವ ಬಗ್ಗೆ ಪ್ರತ್ಯೇಕವಾದ ಮಾಹಿತಿಯನ್ನು ಕೇಳಿದ್ದು, ಬಳಿಕ ತೆಗೆದುಕೊಂಡ ಪ್ರಸ್ತುತ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ.