Webdunia - Bharat's app for daily news and videos

Install App

ಪಿಎಸ್ಐ ಹುದ್ದೆ ಕೊಡಿಸುವುದಾಗಿ 3 ಲಕ್ಷ ರೂ. ವಂಚನೆ!

Webdunia
ಸೋಮವಾರ, 22 ನವೆಂಬರ್ 2021 (12:54 IST)
ಕಾರವಾರ : ಅಬಕಾರಿ ಇಲಾಖೆಯಲ್ಲಿ ಪಿಎಸ್ಐ ಹುದ್ದೆ ಕೊಡಿಸುತ್ತೇನೆಂದು ನಂಬಿಸಿ 3 ಲಕ್ಷ ರೂಪಾಯಿ ವಂಚಿಸಿರುವ ಕುರಿತು ಬನವಾಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಶಿರಸಿ ತಾಲೂಕಿನ ಕಾಳಂಗಿ ಗ್ರಾಮದ, ಖಾಸಗಿ ಕಂಪನಿಯಲ್ಲಿ ಉದ್ಯೋಗದಲ್ಲಿರುವ ರುದ್ರೇಶ ಕಲ್ಮಟ್ಲೇರ ವಂಚನೆಗೊಳಗಾದವರಾಗಿದ್ದು, ಕುಂದಾಪುರ ಮೂಲದ ರಾಘವೇಂದ್ರ ಪೂಜಾರಿ ಎನ್ನುವವರ ಮೇಲೆ ದೂರು ದಾಖಲಾಗಿದೆ.
‘ಅಬಕಾರಿ ಇಲಾಖೆಯಲ್ಲಿ ಪಿಎಸ್ಐ ಹುದ್ದೆ ಕೊಡಿಸುತ್ತೇನೆ. ಅದಕ್ಕೆ ಒಟ್ಟು 10 ಲಕ್ಷ ಹಣವನ್ನು ಕೊಡಬೇಕಾಗುತ್ತದೆ. ಮೊದಲು 3 ಲಕ್ಷ ಹಣವನ್ನು ಕೊಡಿ, ನಂತರ ನೇಮಕಾತಿ ಪತ್ರ ಬಂದ ಕೂಡಲೇ ಉಳಿದ ಹಣವನ್ನು ಕೊಡಿ’ ಎಂದು 2018ರಲ್ಲಿ ರಾಘವೇಂದ್ರ ರುದ್ರೇಶ ಅವರಿಗೆ ನಂಬಿಸಿ, ಅವರಿಂದ 2018ರ ನ.14ರಂದು 2 ಲಕ್ಷ ರೂಪಾಯಿ, 15ರಂದು 20 ಸಾವಿರ ರೂಪಾಯಿ, 2019ರ ಜ.23ರಂದು 50 ಸಾವಿರ ರೂಪಾಯಿ ಹಾಗೂ ಮಾ.26ರಂದು 30 ಸಾವಿರ ರೂಪಾಯಿ, ಹೀಗೆ ಒಟ್ಟೂ 3 ಲಕ್ಷ ರೂಪಾಯಿ ಪಡೆಕೊಂಡಿದ್ದಾನೆ.
ಆದರೆ ಈವರೆಗೆ ನೌಕರಿ ಕೊಡಿಸದೇ ಮತ್ತು ರುದ್ರೇಶ ನೀಡಿದ್ದ 3 ಲಕ್ಷ ರೂಪಾಯಿ ಹಣವನ್ನು ಸಹ ಮರಳಿ ನೀಡದೇ ವಂಚನೆ ಮಾಡಿದ್ದಾರೆ ಎಂದು ವಂಚನೆಗೊಳಗಾದ ರುದ್ರೇಶ ದೂರು ದಾಖಲಿಸಿದ್ದಾರೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments