Webdunia - Bharat's app for daily news and videos

Install App

ಪಿಎಸ್ಐ ಹುದ್ದೆ ಕೊಡಿಸುವುದಾಗಿ 3 ಲಕ್ಷ ರೂ. ವಂಚನೆ!

Webdunia
ಸೋಮವಾರ, 22 ನವೆಂಬರ್ 2021 (12:54 IST)
ಕಾರವಾರ : ಅಬಕಾರಿ ಇಲಾಖೆಯಲ್ಲಿ ಪಿಎಸ್ಐ ಹುದ್ದೆ ಕೊಡಿಸುತ್ತೇನೆಂದು ನಂಬಿಸಿ 3 ಲಕ್ಷ ರೂಪಾಯಿ ವಂಚಿಸಿರುವ ಕುರಿತು ಬನವಾಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಶಿರಸಿ ತಾಲೂಕಿನ ಕಾಳಂಗಿ ಗ್ರಾಮದ, ಖಾಸಗಿ ಕಂಪನಿಯಲ್ಲಿ ಉದ್ಯೋಗದಲ್ಲಿರುವ ರುದ್ರೇಶ ಕಲ್ಮಟ್ಲೇರ ವಂಚನೆಗೊಳಗಾದವರಾಗಿದ್ದು, ಕುಂದಾಪುರ ಮೂಲದ ರಾಘವೇಂದ್ರ ಪೂಜಾರಿ ಎನ್ನುವವರ ಮೇಲೆ ದೂರು ದಾಖಲಾಗಿದೆ.
‘ಅಬಕಾರಿ ಇಲಾಖೆಯಲ್ಲಿ ಪಿಎಸ್ಐ ಹುದ್ದೆ ಕೊಡಿಸುತ್ತೇನೆ. ಅದಕ್ಕೆ ಒಟ್ಟು 10 ಲಕ್ಷ ಹಣವನ್ನು ಕೊಡಬೇಕಾಗುತ್ತದೆ. ಮೊದಲು 3 ಲಕ್ಷ ಹಣವನ್ನು ಕೊಡಿ, ನಂತರ ನೇಮಕಾತಿ ಪತ್ರ ಬಂದ ಕೂಡಲೇ ಉಳಿದ ಹಣವನ್ನು ಕೊಡಿ’ ಎಂದು 2018ರಲ್ಲಿ ರಾಘವೇಂದ್ರ ರುದ್ರೇಶ ಅವರಿಗೆ ನಂಬಿಸಿ, ಅವರಿಂದ 2018ರ ನ.14ರಂದು 2 ಲಕ್ಷ ರೂಪಾಯಿ, 15ರಂದು 20 ಸಾವಿರ ರೂಪಾಯಿ, 2019ರ ಜ.23ರಂದು 50 ಸಾವಿರ ರೂಪಾಯಿ ಹಾಗೂ ಮಾ.26ರಂದು 30 ಸಾವಿರ ರೂಪಾಯಿ, ಹೀಗೆ ಒಟ್ಟೂ 3 ಲಕ್ಷ ರೂಪಾಯಿ ಪಡೆಕೊಂಡಿದ್ದಾನೆ.
ಆದರೆ ಈವರೆಗೆ ನೌಕರಿ ಕೊಡಿಸದೇ ಮತ್ತು ರುದ್ರೇಶ ನೀಡಿದ್ದ 3 ಲಕ್ಷ ರೂಪಾಯಿ ಹಣವನ್ನು ಸಹ ಮರಳಿ ನೀಡದೇ ವಂಚನೆ ಮಾಡಿದ್ದಾರೆ ಎಂದು ವಂಚನೆಗೊಳಗಾದ ರುದ್ರೇಶ ದೂರು ದಾಖಲಿಸಿದ್ದಾರೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

Waqf Bill:ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿರುವಂತೆ ಹಿಂದೂ ಟ್ರಸ್ಟ್ ಗಳಲ್ಲಿ ಮುಸ್ಲಿಮರಿಗೆ ಅವಕಾಶ ಕೊಡ್ತೀರಾ: ಸುಪ್ರೀಂಕೋರ್ಟ್

Bengaluralli ಏನಾಗುತ್ತಿದೆ, ಮಹಿಳೆಗೆ ಮರ್ಮಾಂಗ ತೋರಿಸಿ ಯುವಕನಿಂದ ಅಸಭ್ಯ ವರ್ತನೆ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments