ಕಾರವಾರ : ಅಬಕಾರಿ ಇಲಾಖೆಯಲ್ಲಿ ಪಿಎಸ್ಐ ಹುದ್ದೆ ಕೊಡಿಸುತ್ತೇನೆಂದು ನಂಬಿಸಿ 3 ಲಕ್ಷ ರೂಪಾಯಿ ವಂಚಿಸಿರುವ ಕುರಿತು ಬನವಾಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಶಿರಸಿ ತಾಲೂಕಿನ ಕಾಳಂಗಿ ಗ್ರಾಮದ, ಖಾಸಗಿ ಕಂಪನಿಯಲ್ಲಿ ಉದ್ಯೋಗದಲ್ಲಿರುವ ರುದ್ರೇಶ ಕಲ್ಮಟ್ಲೇರ ವಂಚನೆಗೊಳಗಾದವರಾಗಿದ್ದು, ಕುಂದಾಪುರ ಮೂಲದ ರಾಘವೇಂದ್ರ ಪೂಜಾರಿ ಎನ್ನುವವರ ಮೇಲೆ ದೂರು ದಾಖಲಾಗಿದೆ.