Webdunia - Bharat's app for daily news and videos

Install App

ವಿದ್ಯಾರ್ಥಿನಿಯರ ಹಾಸ್ಟೆಲ್ ನಲ್ಲಿ ಸೈಕೊ ಕಳ್ಳನ ಸಂಚಾರ

Webdunia
ಭಾನುವಾರ, 22 ಜುಲೈ 2018 (15:05 IST)
ರಾತ್ರೋರಾತ್ರಿ ಲೇಡಿಸ್ ಹಾಸ್ಟೆಲ್ ಗೆ ಸೈಕೋ ಕಳ್ಳನೊಬ್ಬ ನುಗ್ಗಿ  ದಾಂಧಲೆ ಮಾಡಿ ಎಸ್ಕೇಪ್ ಆಗಿದ್ದಾನೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸೈಕೋನ ಚೆಲ್ಲಾಟ ನರ್ಸಿಂಗ್ ವಿದ್ಯಾರ್ಥಿನಿಯರಿಗೆ ಪೀಕಲಾಟ ತಂದಿಟ್ಟಿದೆ.

ಮೈಸೂರಿನ ಕೆ ಆರ್ ಆಸ್ಪತ್ರೆಯ ನರ್ಸಿಂಗ್ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಸೈಕೋ ಕಳ್ಳನೊಬ್ಬ ನುಗ್ಗಿ ದಾಂಧಲೆ ಮಾಡಿ ಪರಾರಿಯಾಗಿದ್ದಾನೆ.
ಮೂರಂತಸ್ತಿನ ನರ್ಸಿಂಗ್ ಹಾಸ್ಟೆಲ್ ಕಟ್ಟಡ ಏರಿ ಒಳ ನುಗ್ಗಿ ವಿದ್ಯಾರ್ಥಿನಿಯರಿಗೆ ಹಲ್ಲೆ ನಡೆಸಿದ್ದಾನೆ. ವಿದ್ಯಾರ್ಥಿನಿ ರೂಂಗೆ ತಡ ರಾತ್ರಿ ನುಗ್ಗಿ ಮೊಬೈಲ್ ಕಸಿದು ಕೊಂಡ ಸೈಕೋ, ಯುವತಿಯರೊಂದಿಗೆ ಅಸಭ್ಯವಾಗಿಯೂ ವರ್ತಿಸಿದ್ದಾನೆ.

ಸೆಕ್ಯೂರಿಟಿ, ಸಿಸಿಟಿವಿ ಇದ್ದರೂ, ಯಾವುದನ್ನೂ ಲೆಕ್ಕಿಸದೆ ಆಳೆತ್ತರದ ಕಾಂಪೌಂಡ್ ಹಾರಿದ್ದ ಸೈಕೊ, ಕಳೆದ ಬೆಳಗಿನ ಜಾವ ಸುಮಾರು 3 ಗಂಟೆವರೆಗೂ ಹಾಸ್ಟೆಲ್ ಸರೌಂಡಿಂಗ್ ನಲ್ಲಿದ್ದ. ಹಾಸ್ಟೆಲ್ ಒಳ ಭಾಗದಲ್ಲಿ ಒಣಗಿ ಹಾಕಿದ್ದ  ಬಟ್ಟೆಗಳನ್ನು ಮೈಗೆ ಉಜ್ಜಿಕೊಂಡು ವಿಕೃತ ಕಾಮುಕನ ತೋರಿದ್ದಾನೆ. ಹೀಗಾಗಿ ಸೈಕೊ ವರ್ತನೆಗೆ  ನರ್ಸಿಂಗ್ ವಿದ್ಯಾರ್ಥಿಗಳು ಕಂಗಾಲಾಗುವಂತಾಯಿತು.

ಸುಮಾರು 30 ವರ್ಷ ಇತಿಹಾಸವಿರುವ ಕೆ ಆರ್ ಆಸ್ಪತ್ರೆಯ ನರ್ಸಿಂಗ್ ಹಾಸ್ಟೆಲ್ ಹಿಂಭಾಗದಿಂದ ಕಾಂಪೌಂಡ್ ಹಾರಿ ಬಂದಿರುವ ವಿಕೃತ ಕಾಮಿ ಭಯಕ್ಕೆ ಕಾರಣವಾಗಿದ್ದಾನೆ.
ಕಳೆದ ವರ್ಷ ಸಹ ಇದೇ ರೀತಿ ಘಟನೆ ನಡೆದಿತ್ತು. ಪ್ರಕರಣ ದಾಖಲು ಮಾಡಿಕೊಂಡಿರುವ ದೇವರಾಜ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Siddaramaiah: ಕಮಿಷನರ್ ಭದ್ರತೆ ಕೊಡ್ಬೇಕಿತ್ತು, ನಂದೇನು ತಪ್ಪಿದೆ ಎಂದ ಸಿಎಂ: ಆರ್ಡರ್ ಕೊಟ್ಟಿದ್ದು ನೀವಲ್ವಾ ಎಂದ ಪಬ್ಲಿಕ್

Karnataka Weather: ಇಂದಿನಿಂದ ಈ ಜಿಲ್ಲೆಗಳಿಗೆ ಭಾರೀ ಮಳೆ, ಹೈ ಅಲರ್ಟ್ ಘೋಷಣೆ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

ಮುಂದಿನ ಸುದ್ದಿ