Select Your Language

Notifications

webdunia
webdunia
webdunia
webdunia

ಪಿಯುಸಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿಲ್ಲ: ಸಚಿವ ತನ್ವೀರ್ ಸೇಠ್ ಸ್ಪಷ್ಟನೆ

ಪಿಯುಸಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿಲ್ಲ: ಸಚಿವ ತನ್ವೀರ್ ಸೇಠ್ ಸ್ಪಷ್ಟನೆ
ಬೆಂಗಳೂರು , ಸೋಮವಾರ, 13 ಮಾರ್ಚ್ 2017 (14:39 IST)
ಪಿಯುಸಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿಲ್ಲ. ಇಲ್ಲಸಲ್ಲದ ವದಂತಿಗಳಿಗೆ ಕಿಡಿಗೊಡಬೇಡಿ ಎಂದು ಪ್ರಾಥಮಿಕ ಶಿಕ್ಷಣ ಖಾತೆ ಸಚಿವ ತನ್ವೀರ್ ಸೇಠ್ ಹೇಳಿದ್ದಾರೆ.
 
ಪಿಯುಸಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂದು ಕೆಲ ಕಿಡಿಗೇಡಿಗಳು ವದಂತಿಗಳನ್ನು ಹರಡಿಸುತ್ತಿದ್ದಾರೆ. ಇಂತಹ ಕಿಡಿಗೇಡಿಗಳ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.
 
ವದಂತಿ ಎಲ್ಲಿಂದ ಹರಡಿದೆ. ಯಾರು ಹರಡಿಸುತ್ತಿದ್ದಾರೆ ಎನ್ನುವುದನ್ನು ಪತ್ತೆ ಹಚ್ಚಿ ಶಿಕ್ಷಿಸಲಾಗುವುದು ಎಂದು ಹೇಳಿದ್ದಾರೆ.
 
ಕಳೆದ ಬಾರಿ ಪಿಯು ಪತ್ರಿಕೆ ಸೋರಿಕೆಯಾಗಿ ರಾಜ್ಯದಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಸಿಐಡಿ ತನಿಖೆ ನಡೆದು ಹಲವರನ್ನು ಕೃಷ್ಣನ ಜನ್ಮಸ್ಥಳಕ್ಕೆ ತಳ್ಳಲಾಗಿದ್ದನ್ನು ಸ್ಮರಿಸಬಹುದು.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ನಮ್ಮ ಕುಮಾರಣ್ಣ ವೆಬ್ ಸೈಟ್ ಬಿಡುಗಡೆ