Publish Date: Mon, 23 Jan 2023 (16:12 IST)
Updated Date: Mon, 23 Jan 2023 (18:15 IST)
ವಿಜಯಪುರ : ಸೈನ್ಸ್ ಓದಲು ಇಷ್ಟವಿಲ್ಲದ ಕಾರಣ ವಿದ್ಯಾರ್ಥಿನಿ ನೇಣಿಗೆ ಶರಣಾದ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಗರಬೆಟ್ಟ ಗ್ರಾಮದ ಖಾಸಗಿ ಕಾಲೇಜಿನಲ್ಲಿ ನಡೆದಿದೆ.
ಪದ್ಮಾವತಿ ಸಂಜಯ ಮೇಟಿ (17) ನೇಣಿಗೆ ಶರಣಾದ ಪ್ರಥಮ ಪಿಯುಸಿ ವಿದ್ಯಾರ್ಥಿನಿ. ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕಿನ ಕೋಲ ಮಾಪುರ ಮೂಲದ ಪದ್ಮಾವತಿ, ಡೆತ್ನೋಟ್ ಬರೆದಿಟ್ಟು ವಸತಿ ನಿಲಯದ ಶೌಚಾಲಯದಲ್ಲಿ ನೇಣಿಗೆ ಶರಣಾಗಿದ್ದಾಳೆ.
ಡೆತ್ನೋಟ್ನಲ್ಲಿ ನನ್ನ ಸಾವಿಗೆ ನಾನೇ ಕಾರಣ. ನನಗೆ ಸೈನ್ಸ್ ಓದಲು ಇಷ್ಟವಿಲ್ಲ. ಪರೀಕ್ಷೆಯಲ್ಲಿ ಕಡಿಮೆ ಅಂಕ ಬರಲಿದೆ ಆದ್ದರಿಂದ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ ಎಂದು ಬರೆದಿಟ್ಟು ಸಾವನ್ನಪ್ಪಿದ್ದಾಳೆ.