ಆರ್ ಎಸ್ಎಸ್ ಗೆ ಮಾತ್ರ ಯಾಕೆ ರಾಜಕೀಯ ಪಕ್ಷಗಳಿಗೂ ರೋಡ್ ಶೋಗೆ ನಿಷೇಧಿಸಬೇಕು: ಸಿಎಂಗೆ ನೆಟ್ಟಿಗರ ಅಗ್ರಹ

Krishnaveni K
ಗುರುವಾರ, 16 ಅಕ್ಟೋಬರ್ 2025 (09:46 IST)
ಬೆಂಗಳೂರು: ಆರ್ ಎಸ್ಎಸ್ ಗೆ ಮಾತ್ರ ಯಾಕೆ, ಇನ್ನು ಮುಂದೆ ಯಾವುದೇ ರಾಜಕೀಯ ಪಕ್ಷಗಳೂ ಸರ್ಕಾರಿ ಜಾಗದಲ್ಲಿ ರೋಡ್ ಶೋ, ಸಮಾವೇಶ ನಡೆಸುವುದನ್ನು ನಿಷೇಧಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಮಾಡಿದ ಟ್ವೀಟ್ ಒಂದಕ್ಕೆ ನೆಟ್ಟಿಗರು ಆಗ್ರಹಿಸಿದ್ದಾರೆ.

ಸರ್ಕಾರಿ ಸ್ಥಳಗಳಲ್ಲಿ ಆರ್.ಎಸ್.ಎಸ್ ಚಟುವಟಿಕೆಗಳನ್ನು ಕೈಗೊಳ್ಳಬಾರದು. ತಮಿಳುನಾಡು ಮಾದರಿಯಲ್ಲಿ ಇಲ್ಲಿಯೂ ನಿಷೇಧ ಮಾಡಬೇಕು ಎಂದು ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ನನಗೆ ಪತ್ರ ಬರೆದಿದ್ದಾರೆ. ಅದರಲ್ಲಿ ತಪ್ಪೇನಿದೆ? ಇಂತಹ ಬೆದರಿಕೆಗಳಿಗೆ ಯಾರೂ ಹೆದರುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ನೆಟ್ಟಿಗರು ಹಾಗಿದ್ದರೆ ಇನ್ನು ಮುಂದೆ ಆರ್ ಎಸ್ಎಸ್ ಮಾತ್ರವಲ್ಲ, ಅನ್ಯಧರ್ಮದ ಸಂಘಟನೆಗಳು, ರಾಜಕೀಯ ಪಕ್ಷಗಳಿಗೂ ಸಾರ್ವಜನಿಕ ಸ್ಥಳಗಳಲ್ಲಿ ರೋಡ್ ಶೋ, ಸಮಾವೇಶ ಮಾಡುವುದನ್ನು ನಿಷೇಧಿಸಬೇಕು. ನಿಮ್ಮ ಪಕ್ಷದ ಕೆಲಸಗಳೇನೇ ಇದ್ದರೂ ನಿಮ್ಮ ಮನೆಯಲ್ಲಿ ಮಾಡಿಕೊಳ್ಳಿ. ಸಾರ್ವಜನಿಕ ಸ್ಥಳಗಳಲ್ಲಿ ಯಾಕೆ ಎಂದು ಪ್ರಶ್ನೆ ಮಾಡಿದ್ದಾರೆ.

ಇನ್ನು, ಕೆಲವರು ನೀವು ರಾಜ್ಯದ ಮುಖ್ಯಮಂತ್ರಿ. ಒಂದು ವೇಳೆ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಹಾಕಿದ್ದರೆ ಅವರು ಯಾರು ಎಂದು ಪತ್ತೆ ಮಾಡಿ ಕ್ರಮ ಕೈಗೊಳ್ಳಿ ಎಂದು ಕೆಲವರು ಹೇಳಿದರೆ ಮತ್ತೆ ಕೆಲವರು ಮೊದಲು ಗುಂಡಿ ಮುಚ್ಚುವ ಕೆಲಸ ಮಾಡಿ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಮಮಂದಿರ ದೇಣಿಗೆ ಕಳವು, ಪ್ರಧಾನಿ ಕ್ರಮ ಕೈಗೊಳ್ಳುತ್ತಾರೆಂಬ ನಂಬಿಕೆ ಜನರಿಗಿಲ್ಲ: ಕೇಜ್ರಿವಾಲ್

ಎಸ್‌ಐಆರ್ ಸರ್ವೆ ದಾಖಲೆಗಳನ್ನು ಹುಡುಕುತ್ತಿದ್ದ ವ್ಯಕ್ತಿಗೆ ಹೃದಯಾಘಾತ, ಸಾವು

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ಭಾರತದ ಮೊದಲ ಬುಲೆಟ್ ರೈಲು ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ಅಶ್ವಿನಿ ವೈಷ್ಣವ್

ಮುಂಗಾರು ವೈಪರೀತ್ಯ, ನಿಖಿಲ್ ಕುಮಾರಸ್ವಾಮಿ ನಾಳೆಯಿಂದ ಬರಪೀಡಿತ ಪ್ರದೇಶಕ್ಕೆ ಭೇಟಿ

ಮುಂದಿನ ಸುದ್ದಿ
Show comments