Webdunia - Bharat's app for daily news and videos

Install App

ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸಿಗಲಿ

Webdunia
ಶನಿವಾರ, 30 ಅಕ್ಟೋಬರ್ 2021 (20:40 IST)
ಕನ್ನಡ ಚಿತ್ರರಂಗದ ಉತ್ತಮ ನಟ, ಸಜ್ಜನಿಕೆ ವ್ಯಕ್ತಿತ್ವ, ಸಮಾಜಮುಖಿ ಕಾರ್ಯ ಚಟುವಟಿಕೆ ಮೂಲಕ ಎಲ್ಲರಿಗೂ ಸ್ಫೂರ್ತಿಯಾಗಿದ್ದ ಪುನೀತ್ ರಾಜ್ ಕುಮಾರ್ ಅವರು ಮಾದರಿಯಾಗಿ ಬದುಕಿದ್ದರು. 
 
ಕನ್ನಡ ಚಿತ್ರರಂಗಕ್ಕೆ ಅವರ ಕೊಡುಗೆ ಅಪಾರ. ತಾವೊಬ್ಬ ನಟರಾಗಿದ್ದರೂ ಸಹ ಅನೇಕ ಹೊಸಬರಿಗೆ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದರು.  ಅನಾಥಾಶ್ರಮ, ಹೆಣ್ಣು ಮಕ್ಕಳಿಗೆ ಶಿಕ್ಷಣ ಸೇರಿದಂತೆ ಇನ್ನಿತರ ಚಟುವಟಿಕೆಯನ್ನು  ಹಮ್ಮಿಕೊಂಡಿದ್ದರು. 
 
ಇದಲ್ಲದೆ ಕನ್ನಡ ಭಾಷೆ, ಸೇರಿದಂತೆ ಇನ್ನಿತರ ಹೋರಾಟದಲ್ಲಿ ಮುಂಚೂಣಿಯಾಗಿ, ಸಕ್ರಿಯರಾಗಿ ಭಾಗವಹಿಸುತ್ತಿದ್ದರು. ಕನ್ನಡ ಹಾಗೂ ಸ್ಥಳೀಯ ಸಂಸ್ಕೃತಿಗೆ ಒತ್ತನ್ನು ನೀಡುವ ಮೂಲಕ ಉತ್ತಮ ಚಿಂತನೆಯನ್ನು ಹೊಂದಿದ್ದರು. ಅಲ್ಲದೆ ನೇತ್ರದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಅತಿ ಕಿರಿಯ ವಯಸ್ಸಿಗೆ ಅವರು ಇನ್ನಿಲ್ಲ ಎಂಬುದನ್ನು ನಂಬಲು ಸಾಧ್ಯವಾಗುತ್ತಿಲ್ಲ. ಅವರ ಸೇವೆಯನ್ನು ಪರಿಗಣಿಸಿ ಕರ್ನಾಟಕ ರಾಜ್ಯ ಸರ್ಕಾರವು ಈ ಸಾಲಿನ ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ಮರಣೋತ್ತರ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಬೇಕೆಂದು ಕೋರುತ್ತೇನೆ. ಜಗ್ಗೇಶ್ ಚಲನಚಿತ್ರ ನಟ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments