Webdunia - Bharat's app for daily news and videos

Install App

ನವೆಂಬರ್​​​ 16ಕ್ಕೆ ‘ಪುನೀತ್​ ನಮನ’ ಕಾರ್ಯಕ್ರಮ

Webdunia
ಬುಧವಾರ, 3 ನವೆಂಬರ್ 2021 (20:53 IST)
ಬೆಂಗಳೂರು:  ದಿವಂಗತ ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ಅಗಲಿಕೆಯ ನೋವನ್ನು ಚಿತ್ರರಂಗ ತಡೆದುಕೊಳ್ಳಲು ಆಗುತ್ತಿಲ್ಲ ಈ ನಡುವೆಯೂ ಕರ್ನಾಟಕ ವಾಣಿಜ್ಯ  ಮಂಡಳಿ ಹಾಗೂ ನಿರ್ಮಾಪಕರ ಸಂಘ ಜಂಟಿಯಾಗಿ ಪುನೀತ್ ನಮನ ಎನ್ನುವ  ಕಾರ್ಯಕ್ರಮವನ್ನು ನೆಡೆಸಿಕೊಡಲು ಮುಂದಾಗಿದೆ. 
 
ದಿವಂಗತ ನಟ ಪುನೀತ್ ರಾಜ್ ಕುಮಾರ್ ಕನ್ನಡ ಚಿತ್ರಕ್ಕೆ ಅಪಾರ ಕೊಡುಗೆಗಳನ್ನು ನೀಡಿದ್ದಾರೆ. ಅವರ ಅಕಾಲಿಕ ಮರಣವನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಈ  ಹಿನ್ನೆಲೆಯಲ್ಲಿ ನವೆಂಬರ್​​​ 16ಕ್ಕೆ ‘ಪುನೀತ್​ ನಮನ’ ಎನ್ನುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಸಿದ್ಧತೆ ನಡೆಸಿದ್ದಾರೆ. ಈ  ಕಾರ್ಯಕ್ರಮ ಪ್ಯಾಲೆಸ್ ಗ್ರೌಂಡ್ ನ ಒಳಾಂಗಣ ವೇದಿಕೆಯಲ್ಲಿ ನಡೆಯಲಿದೆ ಎಂದು ವಾಣಿಜ್ಯ ಮಂಡಳಿಯ ಮೂಲಗಳು ತಿಳಿಸಿವೆ. 
 
ಬೃಹತ್​​ ಮಟ್ಟದಲ್ಲಿ ಕಾರ್ಯಕ್ರಮ ನಡೆಸಲು ತೀರ್ಮಾನಿಸಿದ್ದು, ಈಗಾಗಲೇ ವಾಣಿಜ್ಯ ಮಂಡಳಿ ಆಹ್ವಾನ ಪತ್ರಿಕೆ ನೀಡಲು ತಯಾರಿ ನೆಡೆಸಿದೆ. ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.​ವೈ, ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಸೇರಿ ಹಲವರಿಗೆ ಆಮಂತ್ರಣ ನೀಡಲಿದೆ.  ದಕ್ಷಿಣ ಭಾರತದ  ಕಲಾವಿದರು, ತಂತ್ರಜ್ಞರಿಗೂ ಆಹ್ವಾನ ನೀಡಲಾಗಿದೆ. ಈ ಕಾರ್ಯಕ್ರಮಕ್ಕೆ ಆಂಧ್ರ ಹಾಗೂ ತಮಿಳುನಾಡಿನ ಫಿಲ್ಮ್ ಚೇಂಬರ್ ಪದಾಧಿಕಾರಿಗಳು, ಕಲಾವಿದರು ಭಾಗಿಯಾಗಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಬಂದ್‌ ಕೂಗಿನ ಬೆನ್ನಲ್ಲೇ ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಆಘಾತ

ಹೊಸ ದಾಖಲೆ ಬರೆದ ನಮ್ಮ ಮೆಟ್ರೊ: ಒಂದೇ ದಿನ ಸಂಚರಿಸಿದ ಪ್ರಯಾಣಿಕರೆಷ್ಟು ಗೊತ್ತಾ

ಬೆಂಗಳೂರಿನ ಅಪಾರ್ಟ್ ಮೆಂಟ್ ನಲ್ಲಿ ಕಾರು ಬಂದ ವೇಗಕ್ಕೆ ಸೆಕ್ಯುರಿಟಿ ಗಾರ್ಡ್ ಬಚಾವ್ ಆಗಿದ್ದೇ ಪವಾಡ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಿಜಕ್ಕೂ ಪವಾಡ.. ಸ್ನೇಹಿತರ ಜೊತೆ ಹರಟುತ್ತಿದ್ದವನು ಸೆಕೆಂಡುಗಳಲ್ಲಿ ಜೀವ ಉಳಿಸಿಕೊಂಡ Video

ಮುಂದಿನ ಸುದ್ದಿ
Show comments