Webdunia - Bharat's app for daily news and videos

Install App

ಆಂಧ್ರ ಉತ್ಸವದಲ್ಲಿ ಅಪ್ಪು ಕಟೌಟ್ ...!!!!

Webdunia
ಸೋಮವಾರ, 25 ಜುಲೈ 2022 (15:18 IST)
ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಕುಪ್ಪಂ ಮಂಡಲಂನ ಗುಡಿವಂಕ ಕಾವಡಿ ಉತ್ಸವ ನಡೆದಿದೆ. ಈ ಉತ್ಸವದಲ್ಲಿ ಅಪ್ಪು ಅಭಿಮಾನಿಗಳು ಪುನೀತ್ ರಾಜ್​ಕುಮಾರ್​ ಅವರ ದೊಡ್ಡ ಭಾವಚಿತ್ರ ಹಿಡಿದು ಕ್ರೇನ್‌ನಲ್ಲಿ ಕಾವಡಿ ಸಲ್ಲಿಸುವ ಮೂಲಕ ನೆಚ್ಚಿನ ನಟನನ್ನ ನೆನಪಿಸಿಕೊಂಡಿದ್ದಾರೆ. ಇದೊಂದೇ ಅಲ್ಲ ಶಿವಮೊಗ್ಗದಲ್ಲಿ ನಡೆದ ಜಾತ್ರೆಯಲ್ಲಿ ಸಹ ಅಭಿಮಾನಿಗಳು ಅಪ್ಪು ಫೋಟೋ ಹಿಡಿದುಕೊಂಡು ದೇವರ ದರ್ಶನ ಪಡೆದಿದ್ದಾರೆ. 
 
ಪುನೀತ್​ ರಾಜಕುಮಾರ್ ಅಭಿಮಾನಿಗಳು ಮಾತ್ರ ಅವರ ಫೋಟೋವನ್ನೇ ಜೊತೆಯಲ್ಲಿ ಇಟ್ಟುಕೊಂಡು ದೇಗುಲಕ್ಕೆ ಹೋಗಿ, ದೇವರ ದರ್ಶನ ಪಡೆದಿದ್ದಾರೆ. ಈ ಜಾತ್ರೆಯಲ್ಲಿ ಹಲವಾರು ಅಪ್ಪು ಅಭಿಮಾನಿಗಳು, ಪುನೀತ್ ರಾಜ್​ಕುಮಾರ್ ಅವರ ಫೋಟೋವನ್ನು ತಮ್ಮ ಜೊತೆ ಹೊತ್ತುಕೊಂಡು ಹೋಗಿದ್ದಾರೆ.
 
ಪುನೀತ್ ರಾಜಕುಮಾರ್ ಅಕಾಲ ಮರಣ ಹೊಂದಿದ ಬಳಿಕ ಪ್ರತಿನಿತ್ಯ ರಾಜ್ಯದ ಒಂದಲ್ಲಾ ಒಂದು ಹಳ್ಳಿ ಗ್ರಾಮಗಳಲ್ಲಿ ಅವರ ಹೆಸರಲ್ಲಿ ಪುಣ್ಯ ಕಾರ್ಯಗಳು ನಡೆಯುತ್ತದೆ. ಅದೆಷ್ಟೋ ಜನರು ಪ್ರತಿನಿತ್ಯ ಪುನೀತ್ ಹೆಸರು ಹೇಳಿಕೊಂಡು ಹಸಿದವರಿಗೆ ಅನ್ನ ಸಂತರ್ಪಣೆ ಮಾಡುತ್ತಿದ್ದಾರೆ. ಅಲ್ಲದೇ ಹಲವಾರು ರಸ್ತೆಗಳಿಗೆ ಪುನೀತ್ ಹೆಸರನ್ನು ಸಹ ಇಡಲಾಗಿದೆ. ಬೆಂಗಳೂರಿನಲ್ಲಿ ನಾಯಂಡಹಳ್ಳಿಯಿಂದ ಬನ್ನೇರುಘಟ್ಟದವರೆಗಿನ ರಸ್ತೆಗೆ ಪುನೀತ್​ ಹೆಸರು ಇಡುವಂತೆ ಅಭಿಮಾನಿಗಳು ಮನವಿ ಸಲ್ಲಿಸಿದ್ದರು. ಇದಕ್ಕೆ ಬಿಬಿಎಂಪಿ ಸ್ಪಂದಿಸಿ, ರಸ್ತೆಗೆ ಪುನೀತ್ ರಾಜ್​ಕುಮಾರ್ ರಸ್ತೆ ಎಂದು ಹೆಸರಿಟ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ಕೃಷಿ ಬಿಕ್ಕಟ್ಟಿನಲ್ಲಿರುವಾಗ ವಿಧಾನಸಭೆ ಅಧಿವೇಶನದಲ್ಲಿ ರಮ್ಮಿ ಆಡುತ್ತಾ ಕೂತಾ ಸಚಿವ ಮಾಣಿಕ್ರಾವ್ ಕೊಕಾಟೆ

ಇವನು ಮನುಷ್ಯನ, ಮಗುವಿಗೆ ನಾಯಿ ಕಚ್ಚುತ್ತಿದ್ದರು ಅದನ್ನು ನೋಡಿ ನಗುತ್ತಾ ಕೂತಾ ಮಾಲೀಕ, Viral Video

ನಾನು ಸಚಿವನಾಗಿ, ಉಪ ಮುಖ್ಯಮಂತ್ರಿಯಾಗಿ ನಿಮ್ಮ ಮುಂದೆ ಬಂದಿಲ್ಲ: ಡಿಕೆ ಶಿವಕುಮಾರ್ ಹಿಂಗದಿದ್ಯಾಕೆ

ಒಂದೇ ಯುವತಿಯನ್ನು ಮದುವೆಯಾದ ಸಹೋದರರು, ಇದೇ ರೀತಿ ಹಿಮಾಚಲ ಪ್ರದೇಶದಲ್ಲಿ 6 ವರ್ಷದಲ್ಲಿ 5 ಮದುವೆ

ವಿಪಕ್ಷಗಳ ಬೇಡಿಕೆಯಂತೆ ಲೋಕಸಭೆಯಲ್ಲಿ ಆಪರೇಷನ್ ಸಿಂಧೂರ್, ಪಹಲ್ಗಾಮ್ ದಾಳಿ ಬಗ್ಗೆ ಚರ್ಚೆ

ಮುಂದಿನ ಸುದ್ದಿ
Show comments