Webdunia - Bharat's app for daily news and videos

Install App

ಪುನೀತ್‌ ಹುಟ್ಟು ಹಬ್ಬ: ಸಹೋದರ ರಾಘಣ್ಣ ಸೇರಿದಂತೆ ಗಣ್ಯರಿಂದ ಶುಭಾಶಯ

Sampriya
ಭಾನುವಾರ, 17 ಮಾರ್ಚ್ 2024 (09:45 IST)
Photo Courtesy Facebook
ಬೆಂಗಳೂರು: ಇಂದು ಕರ್ನಾಟಕ ರತ್ನ, ನಗುವಿನ ಸರದಾರ, ಯುವರತ್ನ ದಿ. ಡಾ. ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬವನ್ನು ನಾಡಿನಾದ್ಯಂತ ಸ್ಪೂರ್ತಿ ದಿನವಾಗಿ ಅವರ ಅಭಿಮಾನಿಗಳು ಆಚರಿಸುತ್ತಿದ್ದಾರೆ. 
 
ಯುವರತ್ನ ಬರ್ತಡೇಗೆ ಸಹೋದರ ನಟ ರಾಘವೇಂದ್ರ ರಾಜಕುಮಾರ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಸಚಿವೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಸೇರಿದಂತೆ ಅನೇಕರು ಸಾಮಾಜಿಕ ಜಾಲತಾಣದಲ್ಲಿ ಶುಭಾಶಯ ಕೋರಿದ್ದಾರೆ. 
 
'ಕನ್ನಡದ ಖ್ಯಾತ ಚಲನಚಿತ್ರ ನಟ, ಸಾಮಾಜಿಕ, ಪರಿಸರ ಕಾಳಜಿಯೊಂದಿಗೆ ಎಲ್ಲರಿಗೂ ಸ್ಫೂರ್ತಿಯಾಗಿ, ಸದಾ ಹಸನ್ಮುಖಿಯಾಗಿದ್ದ ನಮ್ಮೆಲ್ಲರ ಅಪ್ಪು ಕರ್ನಾಟಕ ರತ್ನ ಡಾ. ಪುನೀತ್‌ ರಾಜ್‌ಕುಮಾರ್‌ ಅವರ ಜನ್ಮದಿನದ ಸ್ಮರಣೆಗಳು' ಎಂದು ರಾಜ್ಯ ಬಿಜೆಪಿ ಘಟಕ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಶುಭಕೋರಿದೆ.
 
ಪುನೀತ್‌ಗೆ ಗಣ್ಯರ ಹಾರೈಕೆ ಹೀಗಿದೆ:  'ತಮ್ಮ ಅತ್ಯುತ್ತಮ ಅಭಿನಯ ಹಾಗೂ ಹೃದಯ ಶ್ರೀಮಂತಿಕೆಯಿಂದಲೇ ಕೋಟ್ಯಂತರ ಜನರನ್ನು ಸೆಳೆದಿರುವ ಕರ್ನಾಟಕ ರತ್ನ ಡಾ. ಪುನೀತ್‌ ರಾಜ್‌ಕುಮಾರ್‌ ಅವರು ಎಂದಿಗೂ ಅಜರಾಮರ. ಕರುನಾಡಿನ ಪ್ರೀತಿಯ ಅಪ್ಪು ಅವರ ಜನ್ಮದಿನದ ಸ್ಮರಣೆಯಂದು ಕನ್ನಡ ಕಲಾಲೋಕಕ್ಕೆ ಅವರು ಸಲ್ಲಿಸಿದ ಸೇವೆ ಹಾಗೂ ಕೊಡುಗೆಗಳನ್ನು ಸ್ಮರಿಸುತ್ತಾ, ಅವರ ಆಶಯಗಳನ್ನು ಮುಂದುವರೆಸೋಣ' ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.
 
    ತಮ್ಮ ಅತ್ಯುತ್ತಮ ಅಭಿನಯ ಹಾಗೂ ಹೃದಯ ಶ್ರೀಮಂತಿಕೆಯಿಂದಲೇ ಕೋಟ್ಯಂತರ ಜನರನ್ನು ಸೆಳೆದಿರುವ ಕರ್ನಾಟಕ ರತ್ನ ಡಾ. ಶ್ರೀ ಪುನೀತ್‌ ರಾಜ್‌ ಕುಮಾರ್‌ ಅವರು ಎಂದಿಗೂ ಅಜರಾಮರ. ಕರುನಾಡಿನ ಪ್ರೀತಿಯ ಅಪ್ಪು ಅವರ ಜನ್ಮದಿನದ ಸ್ಮರಣೆಯಂದು ಕನ್ನಡ ಕಲಾಲೋಕಕ್ಕೆ ಅವರು ಸಲ್ಲಿಸಿದ ಸೇವೆ ಹಾಗೂ ಕೊಡುಗೆಗಳನ್ನು ಸ್ಮರಿಸುತ್ತಾ, ಅವರ ಆಶಯಗಳನ್ನು ಮುಂದುವರೆಸೋಣ.
 
'ಸರಳತೆಯ ರಾಯಭಾರಿ, ಕನ್ನಡ ಚಿತ್ರರಂಗದ ಮಹಾನ್ ಚೇತನ, ಪವರ್ ಸ್ಟಾರ್ ಡಾ. ಪುನೀತ್ ರಾಜ್‌ಕುಮಾರ್ ಅವರ ಜನ್ಮದಿನದಂದು ಗೌರವ ನಮನಗಳು. ಸಿನಿಮಾ ಹಾಗೂ ಸಾಮಾಜಿಕ ಕ್ಷೇತ್ರಕ್ಕೆ ಅವರ ಕೊಡುಗೆ ಅಪಾರ' ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ ಪೋಸ್ಟ್‌ ಮಾಡಿದ್ದಾರೆ.
 
'ಪ್ರೀತಿಯ ಅಪ್ಪು, ಕರ್ನಾಟಕ ರತ್ನ ಪುನೀತ್ ರಾಜ್‌ಕುಮಾರ್ ಅವರ ಜನ್ಮಸ್ಮರಣೆಯ ದಿನದಂದು ಗೌರವಪೂರ್ವಕ ನಮನಗಳು' ಎಂದು ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಬೆಂಗಳೂರಿನಲ್ಲಿ ಬಾಳೆ ಎಲೆ ರೇಟು ಬಲು ದುಬಾರಿ

Hebbal Accident: ಹೆಬ್ಬಾಳದಲ್ಲಿ ತಡರಾತ್ರಿ ಸರಣಿ ಅಪಘಾತ: ಲಾರಿ ಚಾಲಕ ದುರ್ಮರಣ

CET Results live: ಕೆಲವೇ ಕ್ಷಣಗಳಲ್ಲಿ ಸಿಇಟ ಫಲಿತಾಂಶ: ಎಲ್ಲಿ, ಹೇಗೆ ಚೆಕ್ ಮಾಡಬೇಕು ಇಲ್ಲಿದೆ ವಿವರ

Viral video: ನಡು ರಸ್ತೆಯಲ್ಲೇ ಮಹಿಳೆ ಜೊತೆ ಬಿಜೆಪಿ ನಾಯಕನ ಕಾಮದಾಟ, ಥೂ ಎಂದ ಜನ

ಮುಂದಿನ ಸುದ್ದಿ
Show comments