Webdunia - Bharat's app for daily news and videos

Install App

ಪಂಜಾಬ್​​ ಆಪ್​​​ ಶಾಸಕ ಅರೆಸ್ಟ್​

Webdunia
ಗುರುವಾರ, 23 ಫೆಬ್ರವರಿ 2023 (17:38 IST)
ಆಡಳಿತ ಪಕ್ಷ ಆಮ್ ಆದ್ಮಿಯ ಶಾಸಕ ಅಮಿತ್ ರತ್ತನ್ ಕೋಟ್ಛಟ್ಟಾ ಅವರನ್ನು ಭ್ರಷ್ಟಾಚಾರ ಪ್ರಕರಣದಲ್ಲಿ ಪಂಜಾಬ್ ವಿಜಿಲೆನ್ಸ್ ಬ್ಯುರೋ ಪಟಿಯಾಲದಲ್ಲಿ ಬಂಧಿಸಿದೆ. ಸಹಾಯಕ ನಾಲ್ಕು ಲಕ್ಷ ರೂ. ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದಿದ್ದ. ಈ ಪ್ರಕರಣದಲ್ಲಿ ಬಟಿಂಡಾ ಗ್ರಾಮೀಣ ಕ್ಷೇತ್ರದ ಪ್ರತಿನಿಧಿಯಾಗಿರುವ ಕೋಟ್ಫಟ್ಟಾ ಅವರ ಪಾತ್ರ ಇರುವುದಕ್ಕೆ ಬಲವಾದ ಸಾಕ್ಷಿಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘುದ್ದಾ ಗ್ರಾಮದ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡಲು ಕೋಟ್ಫಟ್ಟಾ ಮತ್ತು ಅವರ ಸಹಾಯಕ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಬಟಿಂಡಾ ನಿವಾಸಿ ಪ್ರೀತ್ಪಾಲ್ ಕುಮಾರ್ ಆರೋಪಿಸಿದ್ದಾರೆ. ಕುಮಾರ್ ನೀಡಿದ ದೂರಿನಲ್ಲಿ ರಶಿಮ್ ಗಾರ್ಗ್ ಅವರನ್ನು ಬಟಿಂಡಾದಲ್ಲಿರುವ ಕೋಟ್ಫಟ್ಟಾ ಅವರ ನಿವಾಸಕ್ಕೆ ಆಹ್ವಾನಿಸಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಈ ಕುರಿತು ವಾಯ್ಸ್ ರೆಕಾರ್ಡ್‍ನ್ನು ತಮ್ಮ ದೂರಿನೊಂದಿಗೆ ಸಲ್ಲಿಸಿದ್ದರು. ಸರ್ಕಾರದ ಅತಿಥಿ ಗೃಹದಲ್ಲಿ ಗಾರ್ಗ್ ಹಣ ಪಡೆಯುವಾಗ ಸಿಕ್ಕಿಬಿದ್ದಿದ್ದರು. ಈ ಸಂದರ್ಭದಲ್ಲಿ ಅಲ್ಲೇ ಇದ್ದ ಕೋಟ್ಫಾಟ್ಟಾ ಅವರನ್ನು ಪ್ರಶ್ನಿಸಲಾಗಿತ್ತು. ಕೋಟ್ಫಾಟ್ಟಾ ಪರವಾಗಿ ಅವರ ಸಹಾಯಕ ರಶೀಮ್ ಗಾರ್ಗ್ ಲಂಚ ಸಂಗ್ರಹಿಸಿದ್ದಾರೆ ಎಂಬುದು ಸ್ಪಷ್ಟವಾಗಿ ತಿಳಿದು ಬಂದಿದೆ ಎಂದು ಹೆಸರು ಹೇಳಲಿಚ್ಛಿಸದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಸೀದಿ ರಸ್ತೆಯಲ್ಲಿ ಮೆರವಣಿಗೆ ಹೋಗಬಾರದು ಎಂದ ಪೊಲೀಸರಿಗೆ ಚಾಲೆಂಜ್ ಮಾಡಿದ ಪ್ರತಾಪ್ ಸಿಂಹ ಪೇಟೆ ರೌಡಿ ಎಂದ ಪ್ರಿಯಾಂಕ್ ಖರ್ಗೆ

Karnataka Weather: ಬೇಸಿಗೆಯಂಥಾ ಬಿಸಿಲಿನಿಂದ ಬೇಸತ್ತಿದ್ದೀರಾ, ರಾಜ್ಯದಲ್ಲಿ ಮಳೆ ಯಾವಾಗ ಇಲ್ಲಿದೆ ಉತ್ತರ

BRICS: ಪ್ರಧಾನಿ ಮೋದಿ ಶೇಕ್ ಹ್ಯಾಂಡ್ ಮಾಡುತ್ತಲೇ ಅಜಿತ್ ದೋವಲ್ ಗೆ ರಷ್ಯಾ ಅಧ್ಯಕ್ಷ ಪುಟಿನ್ ಮಾಡಿದ ಸನ್ನೆ ಭಾರೀ ವೈರಲ್ Video

ವಂದೇ ಮಾತರಂಗಾಗಿ ಪಾದಯಾತ್ರೆ ಮಾಡಲು ಹೊರಟ ಬಿಜೆಪಿ

ಗಣೇಶೋತ್ಸವ ಮಸೀದಿ ರಸ್ತೆಯಲ್ಲಿ ಹೋದ್ರೆ ಗ್ರಹಚಾರ ಬಿಡಿಸ್ತೀನಿ ಎಂದ ಇನ್ಸ್ ಪೆಕ್ಟರ್ ಧನಂಜಯ್: ಠಾಣೆಗೆ ನುಗ್ಗುತ್ತೇವೆ ಎಂದ ಪ್ರತಾಪ್ ಸಿಂಹ

ಮುಂದಿನ ಸುದ್ದಿ
Show comments