Webdunia - Bharat's app for daily news and videos

Install App

ಮಾನಸಿಕ ಸ್ಥಿಮಿತತೆ ಕಳೆದುಕೊಂಡಿರುವ ಪುಟ್ಟಸ್ವಾಮಿ- ಬಂಗೇರಾ

Webdunia
ಗುರುವಾರ, 28 ಡಿಸೆಂಬರ್ 2017 (08:34 IST)
ಬಿಜೆಪಿ ಮುಖಂಡ ಬಿ.ಜೆ.ಪುಟ್ಟಸ್ವಾಮಿ ಮಾನಸಿಕ ಸ್ಥಿಮಿತತೆ ಕಳೆದುಕೊಂಡಿದ್ದಾರೆ ಎಂದು ಶಾಸಕ ವಸಂತ ಬಂಗೇರಾ ವ್ಯಂಗವಾಡಿದ್ದಾರೆ.

ಭೂಪಸಂದ್ರ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾತ್ರವಲ್ಲ. ಮಾನಸಿಕ ಸ್ಥಿಮಿತತೆ ಕಳೆದುಕೊಂಡಿರುವ ಪುಟ್ಟಸ್ವಾಮಿ ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ ಎಂದಿದ್ದಾರೆ.

ಭೂಪಸಂದ್ರದ ಸರ್ವೇ ನಂಬರ್ 20,21 ರ ಡಿನೋಟಿಫಿಕೇಶನ್ ಅಕ್ರಮ, ನಾನು ಎರಡು ಪತ್ರಗಳನ್ನ ಬರೆದಿದ್ದಕ್ಕೆ ಡಿನೋಟಿಫಿಕೇಶನ್ ಮಾಡಿದ್ದಾರೆ ಎನ್ನುವುದು ಸುಳ್ಳು. ಭೂ ಮಾಲೀಕರು ಕೋರ್ಟ್ ನಲ್ಲಿ ಪ್ರಕರಣ ದಾಖಲಿಸಿ ಗೆದ್ದುಕೊಂಡಿದ್ದಾರೆ ಎಂದರು.  

ಕೋರ್ಟ್ ಆದೇಶ ಇರುವುದರಿಂದ ಸಕ್ರಮ ಮಾಡುವಂತೆ ಪತ್ರ ನೀಡಿದ್ದೆ. ಪರಿಶೀಲನೆ ಬಳಿಕ ಮುಖ್ಯಮಂತ್ರಿ ಬಿಡಿಎ ಆಯುಕ್ತರಿಗೆ ಪತ್ರ ಬರೆದಿದ್ದಾರೆ ಅಷ್ಟೇ. ಬಳಿಕ ಸೈಟ್‌ಗಳನ್ನು ಸಕ್ರಮಗೊಳಿಸಲು  ಸಾಧ್ಯವಿಲ್ಲವೆಂದು ಬಿಡಿಎ ಆಯುಕ್ತರು ಸರ್ಕಾರಕ್ಕೆ ಪತ್ರ ಬರೆದಿದ್ದರು. 2014ರಲ್ಲೇ ಪತ್ರ ಬರೆದು, ಪ್ರಕರಣ ಮುಗಿದ ಅಧ್ಯಾಯವಾಗಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments