Select Your Language

Notifications

webdunia
webdunia
webdunia
webdunia

ಅಧಿಕೃತವಾಗಿ ಬಿಜೆಪಿ ಸೇರಿದ ಪುತ್ತಿಲ ಪರಿವಾರ: ಗೊಂದಲಕ್ಕೆ ತೆರೆ ಎಳೆದ ಕೇಸರಿ ಪಡೆ

Arun Kumar Puttila
Photo Courtesy Facebook
ಮಂಗಳೂರು: ಪುತ್ತಿಲ ಪರಿವಾರದ ಮುಖಂಡ ಅರುಣ್ ಕುಮಾರ್ ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡರು. ಈ ಮೂಲಕ ದಕ್ಷಿಣ ಕನ್ನಡದ ಕೇಸರಿ ವಲಯದಲ್ಲಿ ಕೆಲ ತಿಂಗಳಿನಿಂದ ನಡೆಯುತ್ತಿದ್ದ ರಾಜಕೀಯ ನಾಟಕಕ್ಕೆ ತೆರೆ ಬಿದ್ದಿದೆ. 
 
ಮಂಗಳೂರಿನ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಪುತ್ತಿಲ ಪರಿವಾರದ ಪ್ರಮುಖರೊಂದಿಗೆ ಬಿಜೆಪಿಯನ್ನು ಅಧಿಕೃತವಾಗಿ ಸೇರಿಕೊಂಡರು. 
 
ಪುತ್ತಿಲ ಅವರನ್ನು ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಬಿಜೆಪಿ ಪಕ್ಷಕ್ಕೆ ಬರಮಾಡಿಕೊಂಡರು. ಇದೇ ವೇಳೆ ಪುತ್ತಿಲ ಬೆಂಬಲಿಗರು ಸೇರ್ಪಡೆಗೊಂಡರು.
 
ಪುತ್ತಿಲ ಅವರನ್ನು ಮುಂದಿನ ದಿನಗಳಲ್ಲಿ ದಕ್ಷಿಣ ಕನ್ನಡ, ಉಡುಪಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಪ್ರಚಾರಕ್ಕೆ ಇಳಿಸಲು ಲೆಕ್ಕಾಚಾರ ಹಾಕಿಕೊಂಡಿದೆ.  ದಕ್ಷಿಣ ಕನ್ನಡದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್‌ಗೆ ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ಅರುಣ್ ಕುಮಾರ್ ಅವರು ರಾಜ್ಯಾಧ್ಯಕ್ಷ ವಿಜಯೇಂದ್ರ ಅವರನ್ನು ಶುಕ್ರವಾರ ಭೇಟಿಯಾಗಿದ್ದರು. 
 
 
 

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಸಾರ ಭಾರತಿ: ನವನೀತ್ ಕುಮಾರ್ ಸೆಹಗಲ್ ನೂತನ ಸಾರಥಿ