Webdunia - Bharat's app for daily news and videos

Install App

400 ಎಕರೆ ಜಾಗದಲ್ಲಿ ಕಸ ಸಂಸ್ಕರಣೆ ಮಾಡಲು ಪ್ಯ್ಲಾನ್

Webdunia
ಮಂಗಳವಾರ, 24 ಅಕ್ಟೋಬರ್ 2023 (13:44 IST)
ಬಿಡಿಸಲಾಗದ ಕಗ್ಗಂಟಾಗಿ ಪರಿಣಮಿಸಿರುವ ರಾಜಧಾನಿಯ ಕಸದ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಮುಂದಾಗಿರುವ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಕಂಪನಿಯು 'ಸಮಗ್ರ ಘನತ್ಯಾಜ್ಯ ಸಂಸ್ಕರಣಾ ಘಟಕ' ನಿರ್ಮಾಣಕ್ಕೆ 400 ಎಕರೆ ಜಾಗ ಕೋರಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ನಗರದಲ್ಲಿ ನಿತ್ಯ 5500 ಮೆಟ್ರಿಕ್‌ ಟನ್‌ನಷ್ಟು ಕಸ ಉತ್ಪತ್ತಿಯಾಗುತ್ತಿದ್ದು, ಸಂಗ್ರಹ, ಸಾಗಣೆ, ವಿಲೇವಾರಿ ಮತ್ತು ಸಂಸ್ಕರಣೆಗಾಗಿ ವಾರ್ಷಿಕ ಸಾವಿರ ಕೋಟಿಗಿಂತ ಹೆಚ್ಚು ವ್ಯಯಿಸಲಾಗುತ್ತಿದೆ. ಇಷ್ಟಾದರೂ ಪದೇಪದೆ ಕಸದ ಸಮಸ್ಯೆ ಉಲ್ಭಣಿಸುತ್ತಲೇ ಇದೆ. ಸಾವಿರಾರು ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ 7 ಸಂಸ್ಕರಣಾ ಘಟಕಗಳು ಕೂಡ ನಿಗದಿತ ಸಾಮರ್ಥ್ಯದಷ್ಟು ಕಸ ಪಡೆದು ಸಂಸ್ಕರಣೆ ಮಾಡುತ್ತಿಲ್ಲ. ಇದರಿಂದಾಗಿ ಕಂಪನಿಯು ನಿತ್ಯ 3500 ಟನ್‌ಗಿಂತ ಹೆಚ್ಚು ಕಸವನ್ನು ಭೂಭರ್ತಿ ಘಟಕಗಳಲ್ಲಿ ಹಾಕಿ ನಿಟ್ಟುಸಿರು ಬಿಡುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments