Webdunia - Bharat's app for daily news and videos

Install App

ಬಿಎಂಟಿಸಿಯಲ್ಲಿ ಕ್ಯಾಶ್ ಇಲ್ಲದೇ ಪ್ರಯಾಣಿಸಲು ಉಪಾಯ

Krishnaveni K
ಶನಿವಾರ, 24 ಫೆಬ್ರವರಿ 2024 (15:19 IST)
ಬೆಂಗಳೂರು: ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಸುವಾಗ ಚಿಲ್ಲರೆ ಸಮಸ್ಯೆ ಎದುರಿಸಿದ್ದೀರಾ? ಹಾಗಿದ್ದರೆ ಇನ್ನು ನಿಮಗೆ ಈ ಸಮಸ್ಯೆಯಾಗದು. ಬಿಎಂಟಿಸಿಯಲ್ಲೂ ಇನ್ನು ಕ್ಯಾಶ್ ಲೆಸ್ ಆಗಿ ಪ್ರಯಾಣಿಸಬಹುದು. ಹೇಗೆ ಅಂತೀರಾ?

ಈಗ ಎಲ್ಲಿ ನೋಡಿದರೂ ಯುಪಿಐ ಪೇಮೆಂಟ್ ಪದ್ಧತಿ ಜನಪ್ರಿಯವಾಗಿದೆ. ತಳ್ಳುಗಾಡಿಗಳಲ್ಲೂ ಕ್ಯೂ ಆರ್ ಕೋಡ್ ಬಳಸಿ ಪೇಮೆಂಟ್ ಮಾಡುವ ವ್ಯವಸ್ಥೆ ಬಂದಿದೆ. ಎಲ್ಲಾ ಕಡೆ ಬಂದ ಮೇಲೆ ಬಸ್ ಗಳಿಗೂ ಬರಬೇಕಲ್ಲವೇ? ಇದೀಗ ಬಿಎಂಟಿಸಿ ಬಸ್ ಗಳಲ್ಲೂ ಕ್ಯು ಆರ್ ಕೋಡ್ ಸ್ಕ್ಯಾನ್ ಮಾಡಿ ಪೇಮೆಂಟ್ ಮಾಡುವ ಪದ್ಧತಿ ಜಾರಿಗೆ ಬಂದಿದೆ. ಇದು ಚಿಲ್ಲರೆ ಸಮಸ್ಯೆಗೆ ಪರಿಹಾರ ನೀಡಲಿದೆ.

ಎಲ್ಲೇ ಹೋದರೂ ಇತ್ತೀಚೆಗಿನ ದಿನಗಳಲ್ಲಿ 10 ರೂ. ಚಿಲ್ಲರೆ ಸಿಗುವುದೂ ಕಷ್ಟವಾಗಿದೆ. ಬಿಎಂಟಿಸಿ ಬಸ್ ನಲ್ಲಿ ಕಂಡಕ್ಟರ್ ಗಳಿಗೂ ಇದೇ ತಲೆಬಿಸಿ. 20 ರೂ. ಟಿಕೆಟ್ ಗೆ 100 ರೂ. ಕೊಟ್ಟರೆ ಚಿಲ್ಲರೆ ಕೊಡುವುದು ಹೇಗೆ ಎಂಬ ಚಿಂತೆ. ಹೀಗಾಗಿಯೇ ಈಗ ಕ್ಯು ಆರ್ ಕೋಡ್ ಸ್ಕ್ಯಾನರ್ ನ್ನು ನಿರ್ವಾಹಕರಿಗೆ ನೀಡಲಾಗಿದೆ. ಒಂದು ವೇಳೆ ನೀವು ಕ್ಯಾಶ್ ತಂದಿಲ್ಲ, ಚಿಲ್ಲರೆ ಇಲ್ಲ ಎಂದಾದರೆ ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿ ಪೇಮೆಂಟ್ ಮಾಡಬಹುದು.

ಈಗಾಗಲೇ ಹಲವರು ಈ ಪದ್ಧತಿಯ ಪ್ರಯೋಜನ ಪಡೆಯುತ್ತಿದ್ದಾರೆ. ಇದರಿಂದ ಕಂಡಕ್ಟರ್ ಮತ್ತು ಪ್ರಯಾಣಿಕರು ಇಬ್ಬರ ಚಿಲ್ಲರೆ ಸಮಸ್ಯೆಗೂ ಪರಿಹಾರ ಸಿಕ್ಕಂತಾಗುತ್ತದೆ. ಈಗಾಗಲೇ ಕೆಲವು ತಿಂಗಳಿನಿಂದ ಯುಪಿಐ ಪೇಮೆಂಟ್ ವ್ಯವಸ್ಥೆ ಜಾರಿಯಲ್ಲಿದ್ದು, ಪ್ರಯಾಣಿಕರಿಗೆ ಅನುಕೂಲವಾಗುತ್ತಿದೆ. ಮುಂದಿನ ದಿನಗಳಲ್ಲಿ ಬಿಎಂಟಿಸಿ ಇಟಿಎಂ ಮೆಷಿನ್ ನಲ್ಲಿ ಕ್ಯೂ ಆರ್ ಕೋಡ್ ಜನರೇಟ್ ಮಾಡಲು ತಯಾರಿ ನಡೆಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆಶಿಗೆ ಕ್ಯಾರೇ ಎನ್ನದ ಸಿದ್ದು, ಭುಗಿಲೆದ್ದ ಕಾಂಗ್ರೆಸ್ ಅಂತಃಕಲಹ, ಸೆಪ್ಟೆಂಬರ್‌ನಲ್ಲಿ ಮುಹೂರ್ತ ಫಿಕ್ಸ್: ಬಿಜೆಪಿ

ರಾಜ್ಯದ ಸಣ್ಣ ವ್ಯಾಪಾರಸ್ಥರ ಹಿತರಕ್ಷಣೆಗೆ ಬಿಜೆಪಿ ಸಹಾಯವಾಣಿ - ಛಲವಾದಿ ನಾರಾಯಣಸ್ವಾಮಿ

ಡಿಕೆಶಿ ಕುರ್ಚಿ ಕಸಿದುಕೊಳ್ಳುವ ದುಸ್ಸಾಹಸಕ್ಕೆ ಕೈಹಾಕಿದರೆ ಮನೆಯಲ್ಲಿ ಕೂರಿಸುವ ಎಚ್ಚರಿಕೆ ಕೊಟ್ರಾ ಸಿದ್ದರಾಮಯ್ಯ: ಆರ್ ಅಶೋಕ್‌

ಆರ್‌ಸಿಬಿ ಕಾಲ್ತುಳಿತ ಪ್ರಕರಣ, ಅಮಾಯಕರ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲಲ್ಲ: ಆರ್‌ ಅಶೋಕ್‌

ತುರ್ತು ನಿರ್ವಹಣಾ ಕಾಮಗಾರಿ: ಬೆಂಗಳೂರಿನ ಈ ಭಾಗದಲ್ಲಿ ಜು.21, 22ರಂದು ವಿದ್ಯುತ್ ವ್ಯತ್ಯಯ

ಮುಂದಿನ ಸುದ್ದಿ
Show comments