Webdunia - Bharat's app for daily news and videos

Install App

ಪುಂಡರಿಗೆ ಖಡಕ್ ಡೆಡ್‌ಲೈನ್‌?

Webdunia
ಬುಧವಾರ, 20 ಏಪ್ರಿಲ್ 2022 (08:16 IST)
ಹುಬ್ಬಳ್ಳಿ : ನಾಪತ್ತೆಯಾಗಿರುವ ವಾಸೀಂ ಸೇರಿ 8 ಆರೋಪಿಗಳಿಗೆ ಪೊಲೀಸರು ಡೆಡ್ಲೈನ್ ನೀಡಿದ್ದಾರೆ.

ಇಂದು ಸಂಜೆಯೊಳಗೆ ಶರಣಾಗದಿದ್ದರೆ ಮುಂದಿನ ಪರಿಣಾಮಕ್ಕೆ ನೀವೇ ಹೊಣೆ ಎಂದು ಖಡಕ್ ಸಂದೇಶ ರವಾನಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಶಾಂತಿ ಕದಡಿದ ಆರೋಪಿಗಳ ಪತ್ತೆಗೆ ಪೊಲೀಸರು ಬೆಳಗಾವಿ, ಹಾವೇರಿ, ಹೈದರಾಬಾದ್ಗೆ ತೆರಳಿದ್ದಾರೆ. ಗಲಭೆಗೆ 4 ಮಂದಿ ಪ್ರಚೋದನೆ ನೀಡಿದ್ದು ಇವರೇ ಗಲಭೆಗೆ ನೇರ ಕಾರಣ ಎಂಬ ತೀರ್ಮಾನಕ್ಕೆ ಪೊಲೀಸರು ಬಂದಿದ್ದಾರೆ.

ಹುಬ್ಬಳ್ಳಿ ಗಲಭೆಕೋರರ ಬಂಧನಕ್ಕೆ ಖಾಕಿಪಡೆ ತೀವ್ರಶೋಧಕಾರ್ಯ ನಡೆಸುತ್ತಿದೆ. ದಿನದಿಂದ ದಿನಕ್ಕೆ ಆರೋಪಿಗಳ ಸಂಖ್ಯೆ ಸಹ ಏರಿಕೆಯಾಗುತ್ತಿದೆ. ಇದಕ್ಕೆ ರಾಜಕೀಯ ರೂಪ ಬೆರೆತಿದ್ದು, ಬಂಧಿತರಲ್ಲಿ ಅಮಾಯಕರಿದ್ದಾರೆ ಎಂದು ರಾಜಕೀಯ ನಾಯಕರು ಮತ್ತು ಕುಟುಂಬಸ್ಥರು ಹೇಳುತ್ತಿದ್ದಾರೆ.

ಈ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಅಮಾಯಕರ ಪತ್ತೆಗೂ ಸಹ ಹಲವಾರು ಮಾರ್ಗಗಳನ್ನು ಪ್ಲಾನ್ ಮಾಡಿದೆ. ಈವರೆಗೆ 108 ಮಂದಿ ಬಂಧಿತರಾಗಿದ್ದು ಅವರಲ್ಲಿ ಅಮಾಯಕರನ್ನು ಬಿಡುಗಡೆ ಮಾಡಲು ಸಿಸಿಟಿವಿ ಮತ್ತು ಮೊಬೈಲ್ ವಿಡಿಯೋ ಮೂಲಕ 4 ಫಾರ್ಮುಲಾವನ್ನು ಪೊಲೀಸರು ಅಳವಡಿಸಿಕೊಂಡಿದ್ದಾರೆ.

ಗಲಾಟೆಯ ದಿನ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಭಾಗಿಯಾದವರು. ಘಟನೆ ನೋಡುತ್ತಾ ನಿಂತವರು, ಪೊಲೀಸರ ಲಾಠಿ ಚಾರ್ಜ್ ವೇಳೆ ಓಡಿಹೋದವರು ಪತ್ತೆಯಾಗಿದ್ದು ಈ ಬಗ್ಗೆ ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ. ಹೀಗಾಗಿ ಇವರನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಪ್ಪಾ ಈತ ಯಾವ ಸೀಮೆಯ ಡಾಕ್ಟರ್‌, ನಾಯಿಯನ್ನು ಮಹಡಿಯಿಂದ ಎಸೆದು ಅದರ ನರಳಾಟ ನೋಡುವುದೇ ವೈದ್ಯನಿಗೆ ಖುಷಿ

ಪಾಕ್‌ನ ಹೆಡೆಮುರಿ ಕಟ್ಟಬಹುದು, ಆದ್ರೆ ಕಾಂಗ್ರೆಸ್‌ನ ಹರಕಲು ಬಾಯಿ ಮುಚ್ಚಿಸಲು ಸಾಧ್ಯವಿಲ್ಲ‌: ಅಶೋಕ್‌

ಕರ್ನಾಟಕದಲ್ಲಿರುವ ಎಲ್ಲಾ ಪಾಕಿಸ್ತಾನ ಪ್ರಜೆಗಳಿಗೂ ಗೇಟ್ ಪಾಸ್: ಜಿ ಪರಮೇಶ್ವರ್

Medha Patkar: 25 ವರ್ಷದ ಹಿಂದಿನ ಪ್ರಕರಣದಲ್ಲಿ ಸಾಮಾಜಿಕ ಕಾರ್ಯಕರ್ತೆ ಅರೆಸ್ಟ್‌

CET ಬರೆಯಲು ಜನಿವಾರ ತೆಗೆಸಿದ ಪ್ರಕರಣ: ರಾಜ್ಯ ಸರ್ಕಾರದ ನಡೆ ವಿರುದ್ಧ ದೂರು ಕೊಟ್ಟ ಅಶೋಕ್‌

ಮುಂದಿನ ಸುದ್ದಿ
Show comments