ಕ್ವಾರಂಟೈನ್ ಗೆ ಸ್ಥಳಕೊಡದ ಸರಕಾರಿ ಶಾಲೆ ಮುಖ್ಯಶಿಕ್ಷಕ ಸಸ್ಪೆಂಡ್

Webdunia
ಗುರುವಾರ, 14 ಮೇ 2020 (18:01 IST)
ಕೋವಿಡ್-19 ಕೊರೊನಾ ಶಂಕಿತರನ್ನು ಕ್ವಾರಂಟೈನ್ ಮಾಡುವ ಸಂದರ್ಭದಲ್ಲಿ ಶಾಲೆಯನ್ನು ಸ್ಥಳಾವಕಾಶಕ್ಕಾಗಿ ನೀಡದ ಸರಕಾರಿ ಶಾಲೆ ಮುಖ್ಯ ಶಿಕ್ಷಕನನ್ನು ಸೇವೆಯಿಂದ ಸಸ್ಪೆಂಡ್ ಮಾಡಲಾಗಿದೆ.

ಕರ್ತವ್ಯ ಲೋಪವೆಸಗಿರುವ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ದೇವರನಾವದಗಿ ಸರ್ಕಾರಿ ಕನ್ನಡ ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಅಶೋಕ ರಡ್ಡೇರ ಅವರನ್ನು ಸಿಸಿಎ ನಿಯಮ 1957 (ವರ್ಗೀಕರಣ ಹಾಗೂ ಮೇಲ್ಮನವಿ) ನಿಯಮ 10(1)ಡಿ ರನ್ವಯ ಇಲಾಖೆಯ ವಿಚಾರಣೆ ಕಾಯ್ದಿರಿಸಿ ಸೇವೆಯಿಂದ ಅಮಾನತ್ತುಗೊಳಿಸಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ (ಆಡಳಿತ) ಸಿ.ಪ್ರಸನ್ನಕುಮಾರ ಆದೇಶ ಹೊರಡಿಸಿದ್ದಾರೆ.

ಅಮಾನತ್ತಿನ ಅವಧಿಯಲ್ಲಿ ಮುಖ್ಯ ಶಿಕ್ಷಕ ಅಶೋಕ ರಡ್ಡೇರ ಅವರು ಕ.ಸ.ಸೇ.ನಿ.98ರ ಪ್ರಕಾರ ಜೀವನಾಂಶ ಭತ್ತೆ ಪಡೆಯಲು ಅರ್ಹರಿರುತ್ತಾರೆ. ಸದರಿ ಅವರು ಅಮಾನತ್ತು ಅವಧಿಯಲ್ಲಿ ಮೇಲಾಧಿಕಾರಿಗಳ ಅನುಮತಿ ಪಡೆಯದೇ ಕೇಂದ್ರ ಸ್ಥಾನ ಬಿಡುವಂತಿಲ್ಲ.

ಮೇ 13 ರಂದು ಜಿಲ್ಲಾಧಿಕಾರಿಗಳ ಸೂಚನೆ ಮತ್ತು ಮೇ 14ರಂದು ಸಿಂದಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ದೂರಿನನ್ವಯ ಈ ಶಿಕ್ಷಕರನ್ನು ಅಮಾನತ್ತುಗೊಳಿಸಲಾಗಿದೆ ಎಂದು ಅವರ ಆದೇಶದಲ್ಲಿ ತಿಳಿಸಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ವರ್ಷಗಳಿಂದ ನಾನು ಟೀಕೆ ಮಾಡಿದ್ದೇನೆ. ಈಗ ಅದಕ್ಕೆ ಸಮಯವಲ್ಲ

ಹಾಸನ ಜಿಲ್ಲೆಯ ಏಕೈಕ ಕೈ ಶಾಸಕ ಕೆಎಂ ಶಿವಲಿಂಗೇಗೌಡಗೆ ಸಚಿವ ಸ್ಥಾನ ನೀಡಲು ರಾಹುಲ್‌ಗೆ ಪತ್ರ

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮಹಾರಾಷ್ಟ್ರ ನಕಲಿ ಮದ್ಯ ಸೇವನೆ ಪ್ರಕರಣ: 48ಗಂಟೆಯಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

ಮುಂದಿನ ಸುದ್ದಿ
Show comments