Webdunia - Bharat's app for daily news and videos

Install App

ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕಾಗಿ ಮೈತ್ರಿ ನಾಯಕರ ನಡುವೆ ಕಿತ್ತಾಟ

Webdunia
ಶನಿವಾರ, 6 ಜುಲೈ 2019 (10:32 IST)
ಬೆಂಗಳೂರು : ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕಾಗಿ ಮೈತ್ರಿ ನಾಯಕರಾದ  ಹಗರಿಬೊಮ್ಮನಹಳ್ಳಿ ಕೈ ಶಾಸಕ ಭೀಮಾ ನಾಯ್ಕ್  ಹಾಗೂ ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಮಧ್ಯೆ ಕಿತ್ತಾಟ ಶುರುವಾಗಿದೆ ಎಂಬುದಾಗಿ ತಿಳಿದುಬಂದಿದೆ.




ಕೆಎಂಎಫ್ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಗೆ ಬಿಟ್ಟುಕೊಡಲು ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ನಿರಾಕರಿಸಿದ್ದು, ಆದರೆ ಕಾಂಗ್ರೆಸ್ ಗೆ ಕೆಎಂಎಫ್ ಅಧ್ಯಕ್ಷ ಸ್ಥಾನ ನೀಡಬೇಕೆಂದು ಕೈ ಹಗರಿಬೊಮ್ಮನಹಳ್ಳಿ ಕೈ ಶಾಸಕ ಭೀಮಾ ನಾಯ್ಕ್ ಪಟ್ಟು ಹಿಡಿದಿದ್ದಾರೆ. ಯಾವುದೇ ಕಾರಣಕ್ಕೂ ಅಧ್ಯಕ್ಷ ಸ್ಥಾನ ಬಿಡಲ್ಲ. ಒಂದು ವೇಳೆ ಕೆಎಂಎಫ್ ಅಧ್ಯಕ್ಷ ಸ್ಥಾನ ಬಿಡದಿದ್ದರೆ ಬಂಡಾಯ ಏಳುವುದಾಗಿ  ಶಾಸಕ ಭೀಮಾ ನಾಯ್ಕ್  ಎಚ್ಚರಿಕೆ ನೀಡಿದ್ದಾರೆ  ಎನ್ನಲಾಗಿದೆ.


‘ಈ ಹಿಂದೆಯೂ ಕೆಎಂಎಫ್ ವಿಚಾರದಲ್ಲಿ ಕಾಂಗ್ರೆಸ್ ಗೆ ಅನ್ಯಾಯವಾಗಿದೆ, ಹೀಗಾಗಿ ಈ ಬಾರಿ ಕಾಂಗ್ರೆಸ್ ಗೆ ಅಧ್ಯಕ್ಷ ಸ್ಥಾನ ನೀಡಬೇಕು, ಮೈತ್ರಿ ಧರ್ಮವನ್ನು ಪಾಲಿಸದಿದ್ದರೆ ಶಕ್ತಿಪ್ರದರ್ಶನಕ್ಕೂ ನಾವು ಸಿದ್ಧ. ಹೆಚ್.ಡಿ.ರೇವಣ್ಣರನ್ನು ಸೂಪರ್ ಸಿಎಂ ಎಂದು ಕರೆಯುತ್ತಾರೆ. ಅವರಿಗೇಕೆ ಬೇಕು ಕೆಎಂಎಫ್ ಅಧ್ಯಕ್ಷ ಸ್ಥಾನ ಎಂದು  ಶಾಸಕ ಭೀಮಾ ನಾಯ್ಕ್ , ಹೆಚ್.ಡಿ.ರೇವಣ್ಣರನ್ನು  ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments