Webdunia - Bharat's app for daily news and videos

Install App

ಚಿಕನ್ ಸಾಂಬಾರ್‌ಗಾಗಿ ಜಗಳ, ಕೊಲೆಯಲ್ಲಿ ಅಂತ್ಯ!

Webdunia
ಶುಕ್ರವಾರ, 10 ಜೂನ್ 2022 (12:44 IST)
ದಾವಣಗೆರೆ : ಸಂಸಾರದಲ್ಲಿ ಎಲ್ಲವು ಸರಿ ಇದ್ದರೆ ಸುಖವಾಗಿ ಇರುತ್ತದೆ.
 
ಏನಾದರೂ ಅನುಮಾನ ಮನಸ್ತಾಪಗಳು ಬಂದರೆ ನಿಜಕ್ಕೂ ನರಕವಾಗುತ್ತದೆ. ಸಂಸಾರದಲ್ಲಿ ಮನಸ್ತಾಪಗಳು ಬಂದು ಜೀವವನ್ನು ಕಳೆದುಕೊಳ್ಳುವಂತಾಗುತ್ತದೆ.

ಅದೇ ರೀತಿ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಬನ್ನಿ ಕೋಡು ಗ್ರಾಮದಲ್ಲಿ ಗಂಡ ಹೆಂಡತಿಯ ನಡುವೆ ಚಿಕನ್ ಊಟದ ವಿಚಾರವಾಗಿ ಜಗಳವಾಗಿ ತಾರಕಕ್ಕೇ ಏರಿ ತನ್ನ ಹೆಂಡತಿಯನ್ನು ಪತಿಯೇ ಚಾಕುವಿನಿಂದ ಹಿರಿದುಕೊಲೆ ಮಾಡಿದ್ದಾನೆ.

ಕೊಲೆಯಾದ ದುರ್ದೈಯನ್ನು ಶೀಲಾ ಎಂದು ಗುರುತಿಸಲಾಗಿದ್ದು, ಈಕೆಗೆ ಬನ್ನಿಕೋಡು ಗ್ರಾಮದ ರೋಡ್ ರೋಲರ್ ಆಪರೇಟರ್ ಆಗಿದ್ದ ಕೆಂಚಪ್ಪ ಜೊತೆ 9 ವರ್ಷಗಳ ಹಿಂದೆ ಮದುವೆಯಾಗಿತ್ತು.

ಹರಿಹರ ತಾಲೂಕಿನ ವಾಸನ ಗ್ರಾಮದ ಶೀಲಾಳನ್ನು ಕೆಂಚಪ್ಪ ಪ್ರೀತಿಸಿದ್ದು, ಮನೆಯವರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ಮನೆಯಿಂದ ಓಡಿ ಬಂದು ದೇವಸ್ಥಾನದಲ್ಲಿ ಮದುವೆಯಾಗಿದ್ದರು. ಹೇಗೋ ಸುಖವಾಗಿ ಸಂಸಾರ ಮಾಡಿ ಒಂದು ಮುದ್ದಾದ ಮಗುವನ್ನು ಪಡೆದಿದ್ದರು.

ಆಗ ಕೆಂಚಪ್ಪನ ಅಸಲಿ ಸತ್ಯ ಗೊತ್ತಾಗಿದೆ. ಕೆಂಚಪ್ಪನಿಗೆ ಈಗಾಗಲೇ ಮದುವೆಯಾಗಿದ್ದು, ಆಕೆಗೆ ಮಕ್ಕಳಿಲ್ಲ ಎನ್ನುವ ಕಾರಣಕ್ಕೆ ತನ್ನನ್ನು ಮದುವೆಯಾಗಿರುವ ವಿಚಾರ ಶೀಲಾಗೆ ತಿಳಿದು ಬಂದಿದೆ. ಇದರಿಂದ ಪ್ರತಿನಿತ್ಯ ಜಗಳ ಶುರುವಾಗಿದೆ.

ಕೆಂಚಪ್ಪ ಕೂಡ ಮದ್ಯ ಸೇವನೆ ಮಾಡಿ ರಾದ್ಧಾಂತ ಮಾಡುತ್ತಿದ್ದ, ಇದು ಎರಡು ಮನೆಯವರಿಗೆ ಗೊತ್ತಾಗಿ ರಾಜೀ ಪಂಚಾಯಿತಿ ಮಾಡಿ ಹೋಗಿದ್ದರು. ಆದರೆ ಕಳೆದ ರಾತ್ರಿ ಮದ್ಯ ಸೇವನೆ ಮಾಡಿ ಬಂದ ಕೆಂಚಪ್ಪ ಹೆಂಡತಿಗೆ ಚಿಕನ್ ಅಡುಗೆ ಮಾಡಿಲ್ಲ ಎಂದು ಜಗಳವಾಡಿ ಕೊನೆಗೆ ಚಾಕುವಿನಿಂದ ಇರಿದು ಹತ್ಯೆಗೈದಿದ್ದಾನೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಸ್ ಯಾರ ಮೇಲಿಲ್ಲ ಬಿಡ್ರೀ... ನಾಗೇಂದ್ರಗೆ ಮಂತ್ರಿಗಿರಿ ಕೊಟ್ಟಿದ್ದನ್ನು ಸಮರ್ಥಿಸಿಕೊಂಡ ಸಿಎಂ ಡಿಕೆ ಶಿವಕುಮಾರ್

ಬಡ ಮನೆಕೆಲದಾಕೆ ಮೇಲೆ ಮಾಲಿಕರದ್ದು ಇದೆಂಥಾ ದೌರ್ಜನ್ಯ: ಭೀಕರ ಘಟನೆ ಸಿಸಿಟಿವಿಯಲ್ಲಿ ದಾಖಲು video

ಮಲ್ಲಿಕಾರ್ಜುನ ಖರ್ಗೆ ಜೊತೆ ಮಧ್ಯರಾತ್ರಿ ಚರ್ಚೆ: ಸಚಿವರಿಗೆ ಖಾತೆ ನೀಡಲು ಸಿಎಂ ಡಿಕೆ ಶಿವಕುಮಾರ್ ಅಲೆದಾಟ

Karnataka Weather: ರಾಜ್ಯದ ಯಾವೆಲ್ಲಾ ಜಿಲ್ಲೆಗಳಲ್ಲಿ ಈ ವಾರ ಭಾರೀ ಮಳೆ ಸಾಧ್ಯತೆ ಇಲ್ಲಿದೆ ವಿವರ

ನಿರಂತರ ಮಳೆಯಾಗಿದ್ದ ಕರಾವಳಿ ಭಾಗದಲ್ಲಿ ಇಂದಿನಿಂದ ಹೇಗಿರಲಿದೆ ಗೊತ್ತಾ ಹವಾಮನ

ಮುಂದಿನ ಸುದ್ದಿ
Show comments