Webdunia - Bharat's app for daily news and videos

Install App

ದೇವಾಲಯದಲ್ಲಿ ತೇರಿನ ದಿನ ಕುರಾನ್ ಪಠಣೆ?

Webdunia
ಗುರುವಾರ, 14 ಏಪ್ರಿಲ್ 2022 (09:24 IST)
ಹಾಸನ : ದೇವಾಲಯದಲ್ಲಿ ಹಿಂದಿನಿಂದ ನಡೆದುಕೊಂಡು ಬಂದ ರೂಢಿ, ಸಂಪ್ರದಾಯ, ಪದ್ಧತಿಗಳನ್ನು ಮೀರಲು ಅಧಿಕಾರವಿರುವುದಿಲ್ಲ ಎಂದು ಧಾರ್ಮಿಕದತ್ತಿ ಇಲಾಖೆ ಸ್ಪಷ್ಟಪಡಿಸಿದೆ.

ಬೇಲೂರು ಚನ್ನಕೇಶವಸ್ವಾಮಿ ಜಾತ್ರಾ ಮಹೋತ್ಸವದ ತೇರಿನ ದಿನ ಕುರಾನ್ ಪಠಣೆ ಮಾಡುವ ವಿಚಾರವಾಗಿ ಎದ್ದಿರುವ ವಿವಾದಕ್ಕೆ ಇಲಾಖೆ ಸ್ಪಷ್ಟನೆ ನೀಡಿದೆ.

ತೇರಿನ ದಿನ ಕುರಾನ್ ಪಠಣೆ ಮಾಡುವ ವಿಚಾರ ನಮ್ಮ ಕೈಪಿಡಿಯಲ್ಲೇ ಇದೆ. ಗಳಿಗೆ ತೇರಿನ ದಿನ ದೇವಾಲಯದ ಬಳಿ ನಿಂತು ಕುರಾನ್ ಪಠಣೆ ಮಾಡಲಾಗುತ್ತದೆ. ಪ್ರತಿ ವರ್ಷವೂ ಅದು ನಡೆದುಕೊಂಡು ಬಂದಿದೆ. ಆದರೆ ಈ ವರ್ಷ ಸ್ವಲ್ಪ ಚರ್ಚೆಗಳಾಗುತ್ತಿವೆ.

ಹೀಗಾಗಿ ಗಳಿಗೆ ತೇರಿನ ದಿನ (ಚಿಕ್ಕತೇರು) ಕುರಾನ್ ಪಠಣೆ ನಡೆಯುವುದರ ಬಗ್ಗೆ ಆಯುಕ್ತರಾದ ರೋಹಿಣಿ ಸಿಂಧೂರಿಯವರ ಗಮನಕ್ಕೆ ತಂದಿದ್ದೇನೆ. ಅವರ ನಿರ್ದೇಶನದ ನಿರೀಕ್ಷೆಯಲ್ಲಿದ್ದೇವೆ ಎಂದು ಹೇಳಿದ್ದರು.

ಇದೀಗ ಈ ಬಗ್ಗೆ ಧಾರ್ಮಿಕದತ್ತಿ ಇಲಾಖೆ ಸ್ಪಷ್ಟನೆ ನೀಡಿದೆ. ದೇವಾಲಯದಲ್ಲಿ ಹಿಂದಿನಿಂದ ಬಂದಿರುವ ರೂಢಿ, ಸಂಪ್ರದಾಯ, ಪದ್ಧತಿಯನ್ನು ಮೀರಲು ಅಧಿಕಾರ ಇರುವುದಿಲ್ಲ.

ಈ ಕಾರಣ ಸದರಿ ದೇವಾಲಯದಲ್ಲಿ ವಾರ್ಷಿಕ ಬ್ರಹ್ಮರಥೋತ್ಸವವನ್ನು ಆಗಮಶಾಸ್ತ್ರ ರೀತಿ ಹಾಗೂ ಹಿಂದಿನಿಂದ ನಡೆದುಬರುತ್ತಿರುವ ರೂಢಿಯಲ್ಲಿರುವ ಸಂಪ್ರದಾಯ ಪದ್ಧತಿಯಂತೆ ನಡೆಸಲು ಸೂಚಿಸಬಹುದಾಗಿರುತ್ತದೆ ಎಂದು ಆಯುಕ್ತರ ಪರವಾಗಿ ಧಾರ್ಮಿಕ ದತ್ತಿ ಇಲಾಖೆ ಸೂಚಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

1.3 ಮಿಲಿಯನ್‌ ಅನುಯಾಯಿಗಳನ್ನು ಹೊಂದಿದ್ದ ಪಾಕ್‌ ಟಿಕ್‌ಟಾಕ್‌ ಸ್ಟಾರ್‌ ಗುಂಡೇಟಿಗೆ ಬಲಿ, CCTV Video

ಪಡುಬಿದ್ರಿ ಡೇವಿಡ್ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ಉಡುಪಿ, ಬಾಳೆಹಣ್ಣುಗಳನ್ನು ಕೃತಕವಾಗಿ ಹಣ್ಣಾಗಿಸಲು ರಾಸಾಯನಿಕ ಬಳಕೆ ಪತ್ತೆ

ಪ್ರೀತಿಸಿ ಮದುವೆಯಾಗಿದ್ದಕ್ಕೆ ಗಂಡನ ಮನೆಯಿಂದ ಕಿರುಕುಳ, ಮಗುವನ್ನು ಉಸಿರುಗಟ್ಟಿಸಿ ಕೊಂದು ಸಾವಿಗೆ ಶರಣಾದ ಮಹಿಳೆ

ಕ್ಲಾಸ್‌ವರ್ಕ್ ಮಾಡದಕ್ಕೆ ಕೆನ್ನೆಗೆ ಬಾರಿಸಿದ ಶಿಕ್ಷಕಿ, ಆಘಾತಗೊಂಡ ತರಗತಿಯಲ್ಲೇ ಉಸಿರು ಚೆಲ್ಲಿದ ಎಲ್‌ಕೆಜಿ ಬಾಲಕ, CCTV Video

ಮುಂದಿನ ಸುದ್ದಿ
Show comments