Webdunia - Bharat's app for daily news and videos

Install App

ನನ್ನದು, ಕುಮಾರಸ್ವಾಮಿ ಫೋನ್ ಕದ್ದಾಲಿಕೆಯಾಗ್ತಿದೆ ಎಂದ ಅಶೋಕ್: ನಂಗೇನೂ ಗೊತ್ತೇ ಇಲ್ಲ ಎಂದ ಪರಮೇಶ್ವರ್

Krishnaveni K
ಸೋಮವಾರ, 24 ಮಾರ್ಚ್ 2025 (14:26 IST)
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಈಗ ಫೋನ್ ಕದ್ದಾಲಿಕೆ ವಿಚಾರ ಭಾರೀ ಸದ್ದು ಮಾಡ್ತಿದೆ. ಒಂದೆಡೆ ವಿಪಕ್ಷ ನಾಯಕ ಆರ್ ಅಶೋಕ್ ನನ್ನದು, ಕುಮಾರಸ್ವಾಮಿಯವರದ್ದು ಫೋನ್ ಕದ್ದಾಲಿಕೆಯಾಗ್ತಿದೆ ಎಂದು ಆರೋಪಿಸಿದ್ದಾರೆ. ಇನ್ನೊಂದೆಡೆ ಗೃಹಸಚಿವ ಜಿ ಪರಮೇಶ್ವರ್ ನಂಗೆ ಇದರ ಬಗ್ಗೆ ಮಾಹಿತಿಯಿಲ್ಲ ಎಂದಿದ್ದಾರೆ.

ಹನಿಟ್ರ್ಯಾಪ್ ಗದ್ದಲದ ನಡುವೆ ಈಗ ರಾಜ್ಯ ರಾಜಕೀಯದಲ್ಲಿ ಫೋನ್ ಟ್ಯಾಪಿಂಗ್ ವಿಚಾರ ಸದ್ದು ಮಾಡುತ್ತಿದೆ. ಸರ್ಕಾರವೇ ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಮಾಡ್ತಿದೆ ಎಂದು ಆರ್ ಅಶೋಕ್ ಆಪಾದಿಸಿದ್ದಾರೆ. ಇದರಲ್ಲಿ ಸಂಶಯವೇ ಬೇಡ, ಇದು ರಾಜ್ಯ ಸರ್ಕಾರದ್ದೇ ಕೆಲಸ ಎಂದಿದ್ದಾರೆ.

ಫೋನ್ ಟ್ಯಾಪಿಂಗ್ ಬಗ್ಗೆ ಈಗಾಗಲೇ ಕೆಲವು ನಾಯಕರು ಸಿಎಂ ಸಿದ್ದರಾಮಯ್ಯಗೆ ಮೌಖಿಕ ದೂರು ನೀಡಿದ್ದಾರೆ ಎಂದು ವರದಿಯಾಗಿದೆ. ಆದರೆ ಈ ಬಗ್ಗೆ ತನಗೆ ಯಾವುದೇ ಮಾಹಿತಿಯಿಲ್ಲ ಎಂದು ಗೃಹಸಚಿವ ಪರಮೇಶ್ವರ್ ಹೇಳಿದ್ದಾರೆ.

ನನಗೆ ಫೋನ್ ಟ್ಯಾಪಿಂಗ್ ಬಗ್ಗೆ ಗೊತ್ತಿಲ್ಲ. ಇದುವರೆಗೆ ಯಾರೂ ನನ್ನ ಸಂಪರ್ಕಿಸಿ ಮಾಹಿತಿ ನೀಡಿಲ್ಲ ಎಂದಿದ್ದಾರೆ. ವಿಶೇಷವೆಂದರೆ ಇಂತಹದ್ದೊಂದು ಆರೋಪ ಮೊದಲು ಮಾಡಿರುವುದು ಕಾಂಗ್ರೆಸ್ ನಾಯಕರೇ. ಹೀಗಾಗಿ ರಾಜ್ಯ ಬಿಜೆಪಿಗೆ ಈಗ ಸರ್ಕಾರದ ವಿರುದ್ಧ ಮತ್ತೊಂದು ಅಸ್ತ್ರ ಸಿಕ್ಕಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಮುಂದಿನ ಸುದ್ದಿ
Show comments