ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರಾತ್ರಿ ಯುವತಿ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಇದೆಲ್ಲಾ ಸಾಮಾನ್ಯ ಎಂದಿರುವ ಗೃಹ ಸಚಿವ ಜಿ ಪರಮೇಶ್ವರ್ ವಿರುದ್ಧ ವಿಪಕ್ಷ ನಾಯಕ ಆರ್ ಅಶೋಕ್ ಗರಂ ಆಗಿದ್ದಾರೆ.
ಈ ಬಗ್ಗೆ ಅವರು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ.
ಆಕಸ್ಮಿಕ
❌ಮಕ್ಕಳಾಟ
❌ಸಣ್ಣ ಘಟನೆ
❌ಪ್ರೇಮ ವೈಫಲ್ಯ
❌ಕುಟುಂಬ ಕಲಹ
❌ಅಲ್ಲೊಂದು ಇಲ್ಲೊಂದು
ಆಕಸ್ಮಿಕ ಗೃಹ ಸಚಿವ ಜಿ ಪರಮೇಶ್ವರ್ಗೆ ರಾಜ್ಯದ ಹೆಣ್ಣುಮಕ್ಕಳ ಮೇಲೆ ನಡೆಯುವ ಪ್ರತಿಯೊಂದು ಅತ್ಯಾಚಾರ, ಮಾನಭಂಗ, ದೌರ್ಜನ್ಯ, ಹಲ್ಲೆ ಪ್ರಕರಣಗಲ್ಲೆವೂ ಅಲ್ಲೊಂದು ಇಲ್ಲೊಂದು ನಡೆಯುವ ಸಣ್ಣ ಘಟನೆಗಳಾಗಿ ಕಾಣಿಸುತ್ತಿರುವುದು ನಿಜಕ್ಕೂ ದುರಂತ.
ಈ ನಾಲಾಯಕ್ ಕಾಂಗ್ರೆಸ್ ಸರ್ಕಾರದಲ್ಲಿ ಹೆಣ್ಣುಮಕ್ಕಳು, ಮಹಿಳೆಯರು ನಿರ್ಭೀತಿಯಿಂದ ಓಡಾಡುವ ಪರಿಸ್ಥಿತಿಯೇ ಇಲ್ಲದಂತಾಗಿದೆ.