Select Your Language

Notifications

webdunia
webdunia
webdunia
webdunia

ನಾವು ಅಧಿಕಾರದಲ್ಲಿದ್ದಾಗ ಕಿವಿಗೆ ಹೂ ಇಟ್ಕೊಂಡು ಕೂತಿರಲಿಲ್ವಾ: ಡಿಕೆಶಿಗೆ ಆರ್ ಅಶೋಕ್ ಕೌಂಟರ್

R Ashoka
ಬೆಂಗಳೂರು: ಬಜೆಟ್ ಬಳಿಕ ನಾವು ಚೊಂಬು ಹಿಡಿದು ಪ್ರತಿಭಟನೆ ಮಾಡಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸುತ್ತೀದ್ದೀರಿ. ನಾವು ಅಧಿಕಾರದಲ್ಲಿದ್ದಾಗ ನೀವು ಕಿವಿಗೆ ಹೂ ಇಟ್ಕೊಂದು ಕೂರಲಿಲ್ವಾ ಎಂದು ಡಿಕೆ ಶಿವಕುಮಾರ್ ಗೆ ವಿಪಕ್ಷ ನಾಯಕ ಆರ್ ಅಶೋಕ್ ಕೌಂಟರ್ ಕೊಟ್ಟಿದ್ದಾರೆ.


ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ ಮಂಡಿಸಿದ ಬಳಿಕ ಬಿಜೆಪಿ ವಿಧಾನಸೌಧದ ಹೊರಗೆ ಖಾಲಿ ಚೊಂಬು ಹಿಡಿದು ಪ್ರತಿಭಟನೆ ಮಾಡಿತ್ತು. ಇದೇ ವಿಚಾರವಾಗಿ ಇದೀಗ ಸದನದಲ್ಲಿ ಪ್ರಸ್ತಾಪಿಸಿರುವ ಡಿಸಿಎಂ ಡಿಕೆ ಶಿವಕುಮಾರ್ ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ.

ಇದಕ್ಕೀಗ ಕೌಂಟರ್ ಕೊಟ್ಟಿರುವ ಆರ್ ಅಶೋಕ್ ‘ಬಜೆಟ್ ಮಂಡನೆ ಸಂದರ್ಭದಲ್ಲಿ ಪ್ರತಿಪಕ್ಷದ ಶಾಸಕರು ಸಾಂಕೇತಿಕವಾಗಿ ಖಾಲಿ ಚೊಂಬು ತಂದು ಪ್ರತಿಭಟನೆ ಮಾಡಿದ್ದಕ್ಕೆ ನಿನ್ನೆ ಸದನದಲ್ಲಿ ಮಹಾನ್ ಸತ್ಯಹರಿಶ್ಚಂದ್ರನ ರೀತಿ ಆಕ್ಷೇಪಣೆ ಮಾಡಿದ ಡಿಸಿಎಂ ಡಿಕೆ ಶಿವಕುಮಾರ್ ಅವರು, ಬಿಜೆಪಿ ಅಧಿಕಾರದಲ್ಲಿದ್ದಾಗ ಕಾಂಗ್ರೆಸ್ ಪಕ್ಷ ಏನು ಮಾಡಿತ್ತು ಎಂಬುದನ್ನ ಮರೆತಂತಿದೆ.

ಡಿ.ಕೆ.ಶಿವಕುಮಾರ್ ಅವರೇ, ನಾವು ಬಜೆಟ್ ಮಂಡನೆ ಆದ ನಂತರ ಚೊಂಬು ಹಿಡಿದು ಪ್ರತಿಭಟನೆ ಮಾಡಿದೆವು. ಆದರೆ, 2023ರಲ್ಲಿ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಜೆಟ್ ಮಂಡಿಸುವಾಗಲೇ ಇಡೀ ಕಾಂಗ್ರೆಸ್ ಪಕ್ಷದ ಶಾಸಕರು ಕಿವಿಯ ಮೇಲೆ ಹೂವಿಟ್ಟುಕೊಂಡು ಸದನದಲ್ಲಿ ಕೂತಿದ್ದನ್ನ ಕರ್ನಾಟಕದ ಜನತೆ ಮರೆತಿಲ್ಲ. ಸಭ್ಯತೆ, ಶಿಷ್ಟಾಚಾರ, ನೈತಿಕತೆ ಬಗ್ಗೆ ತಮ್ಮಿಂದ ನಾವು ಪಾಠ ಕಲಿಯಬೇಕಾಗಿಲ್ಲ ಸ್ವಾಮಿ.

ನೀವು ಅಧಿಕಾರಕ್ಕೆ ಬಂದಿರುವುದೇ ಸುಳ್ಳು, ಅಪಪ್ರಚಾರ, ತೇಜೋವಧೆಯ ಆಧಾರದ ಮೇಲೆ. ಬಜೆಟ್ ಮಾತ್ರವಲ್ಲ, ತಮ್ಮ ಇಡೀ ಕಾಂಗ್ರೆಸ್ ಸರ್ಕಾರ ನಡೆಯುತ್ತಿರುವುದೇ ಸುಳ್ಳಿನ ಕಂತೆಯ ಮೇಲೆ. ಕರ್ನಾಟಕದ ಪ್ರಜ್ಞಾವಂತ ಮತದಾರರು ಎಲ್ಲವನ್ನೂ ಗಮನಿಸುತ್ತಿದ್ದಾರೆ ಸ್ವಾಮಿ. ಕಾಂಗ್ರೆಸ್ ಪಕ್ಷದ ಪಾಪದ ಕೊಡ ತುಂಬಿದೆ. ಅಂತ್ಯ ಸಮೀಪಿಸುತ್ತಿದೆ. ಇದು ಗ್ಯಾರೆಂಟಿ. ಬರೆದಿಟ್ಟುಕೊಳ್ಳಿ’ ಎಂದಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ