Publish Date: Mon, 01 Dec 2025 (14:57 IST)
Updated Date: Mon, 01 Dec 2025 (14:59 IST)
ಬೆಂಗಳೂರು: ಬ್ರೇಕ್ ಫಾಸ್ಟ್ ಮೀಟಿಂಗ್ ಎಂದು ದಿನಬೆಳಗಾದರೆ ರಾಜಕಾರಣವೇ ಆಯ್ತು. ಉದ್ಯೋಗ ಎಲ್ಲಿ ಸ್ವಾಮಿ ಎಂದು ವಿಪಕ್ಷ ನಾಯಕ ಆರ್ ಅಶೋಕ್ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ರಾಜ್ಯದಲ್ಲಿ ನಡೆಯುತ್ತಿರುವ ಕುಸ್ತಿ ಕದನದಲ್ಲಿ ರೈತರ ಸಮಸ್ಯೆ ಸರ್ಕಾರಕ್ಕೆ ಮರೆತೇ ಹೋಗಿದೆ ಎಂದು ಆರ್ ಅಶೋಕ್ ಕಿಡಿ ಕಾರಿದ್ದಾರೆ. ಇದರ ನಡುವೆ ಸಿದ್ದರಾಮಯ್ಯ-ಡಿಕೆಶಿ ಎರಡನೇ ಬ್ರೇಕ್ ಫಾಸ್ಟ್ ಮೀಟಿಂಗ್ ಗೆ ಸಿದ್ಧತೆ ಮಾಡಿದ್ದು ಇದರ ಬಗ್ಗೆ ಅಶೋಕ್ ವ್ಯಂಗ್ಯ ಮಾಡಿದ್ದಾರೆ.
ಎಲ್ಲಿದೆ ಸ್ವಾಮಿ ಉದ್ಯೋಗದ ಗ್ಯಾರೆಂಟಿ? ಎಲ್ಲಿದೆ ನೇಮಕಾತಿ ಭಾಗ್ಯ? ಬ್ರೇಕ್ ಫಾಸ್ಟ್ ಮೀಟಿಂಗ್, ಪವರ್ ಶೇರಿಂಗ್ ಅಂತ ದಿನಬೆಳಗಾದರೆ ರಾಜಕಾರಣದಲ್ಲೇ ಕಾಲಹರಣ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಆಡಳಿತವನ್ನ ಸಂಪೂರ್ಣವಾಗಿ ಮರೆತಿದೆ.
ಕಬ್ಬು, ಮೆಕ್ಕೆಜೋಳ ರೈತರ ಪ್ರತಿಭಟನೆ ನಂತರ ಈಗ ಧಾರವಾಡದಲ್ಲಿ ನಡೆಯುತ್ತಿರುವ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ ಉಗ್ರ ಸ್ವರೂಪ ಪಡೆದುಕೊಂಡಿದೆ.
ಸಿಎಂ ಸಿದ್ದರಾಮಯ್ಯನವರೇ ಕೂಡಲೇ ಉದ್ಯೋಗಾಕಾಂಕ್ಷಿಗಳ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ನೇಮಕಾತಿಗೆ ಆದೇಶ ಹೊರಡಿಸಿ, ಬಂಧಿಸಿರುವ ಪ್ರತಿಭಟನಾ ನಿರತ ಪರೀಕ್ಷಾರ್ಥಿಗಳ ಬಿಡುಗಡೆಗೆ ಸೂಚನೆ ನೀಡಿ ಎಂದು ಆಗ್ರಹಿಸಿದ್ದಾರೆ.