Webdunia - Bharat's app for daily news and videos

Install App

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಬಗ್ಗೆ ಸಿಎಂ ಮುಂದೆ ಹಲವು ಪ್ರಶ್ನೆ ಮುಂದಿಟ್ಟ ಆರ್‌ ಅಶೋಕ್

Sampriya
ಮಂಗಳವಾರ, 17 ಸೆಪ್ಟಂಬರ್ 2024 (17:15 IST)
ಬೆಂಗಳೂರು: ಕಲ್ಯಾಣ ಕರ್ನಾಟಕದಲ್ಲಿ ಸಂಪುಟ ಸಭೆ ಮಾಡಿಬಿಟ್ಟಿ ಪ್ರಚಾರ ಗಿಟ್ಟಿಸಿಕೊಳ್ಳಲು ಹೊರಟಿರುವ ಕಾಂಗ್ರೆಸ್ ಸರ್ಕಾರ ಕಲ್ಯಾಣ ಕರ್ನಾಟಕದ ಜನತೆಯ ಕಣ್ಣಿಗೆ ಮಣ್ಣೆರಚಿ ದ್ರೋಹ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್‌ ಅಶೋಕ್ ಆಕ್ರೋಶ ಹೊರಹಾಕಿದ್ದಾರೆ.

ಈ ಸಂಬಂಧ ಸಿಎಂ ಸಿದ್ದರಾಮಯ್ಯ ಬಳಿ ಆರ್‌ ಅಶೋಕ್ ಹಲವು ಪ್ರಶ್ನೆಗಳನ್ನು ಮುಂದಿಟ್ಟು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

ಸಿಎಂ ಸಿದ್ದರಾಮಯ್ಯನವರೇ, ಕಲ್ಯಾಣ ಕರ್ನಾಟಕದಲ್ಲಿ ಸಂಪುಟ ಸಭೆ ಮಾಡಿದ ಮಾತ್ರಕ್ಕೆ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಆಗಿಬಿಡುತ್ತಾ? ನಿಮಗೆ ಕಿಂಚಿತ್ತಾದರೂ ಆತ್ಮಸಾಕ್ಷಿ ಇದ್ದರೆ ಸಂಪುಟ ಸಭೆ ಮಾಡುವ ಮುನ್ನ  ಕಲ್ಯಾಣ ಕರ್ನಾಟಕದ ಜನತೆಯ ಈ ಪ್ರಶ್ನೆಗಳಿಗೆ ಉತ್ತರಿಸಿ.

1.) ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5,000 ಕೋಟಿ ರೂಪಾಯಿ ನೀಡುವುದಾಗಿ ತಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದರಲ್ಲ, ಕಳೆದ ಎರಡು ಬಜೆಟ್ ನಲ್ಲಿ ಕಲ್ಯಾಣ ಕರ್ನಾಟಕಕ್ಕೆ ಒಟ್ಟು ಎಷ್ಟು ಹಣ ಮೀಸಲಿಟ್ಟಿದ್ದೀರಿ? ಅದರಲ್ಲಿ ಬಿಡುಗಡೆಯಾದ ಅನುದಾನ ಎಷ್ಟು? ಖರ್ಚಾಗಿದ್ದು ಎಷ್ಟು?

2.) ಬಳ್ಳಾರಿಯಲ್ಲಿ 5,000 ಕೋಟಿ ರೂಪಾಯಿ ಮೊತ್ತದ ಅಪೇರಲ್ ಪಾರ್ಕ್ ಸ್ಥಾಪಿಸುವ ಭರವಸೆ ಏನಾಯ್ತು? @RahulGandhi
 ಅವರು ತಮ್ಮ ಪ್ರಚಾರ ಭಾಷಣದಲ್ಲಿ ಬಳ್ಳಾರಿಯನ್ನ ಜೀನ್ಸ್ ರಾಜಧಾನಿ ಮಾಡುವ ಭರವಸೆ ಏನಾಯ್ತು?

3.) ಕಲ್ಯಾಣ ಕರ್ನಾಟಕದಲ್ಲಿ 41 ವಿಧಾನಸಭಾ ಕ್ಷೇತ್ರಗಳಲ್ಲಿ ಕನಿಷ್ಠ 100 ಪಿಯುಸಿ ಕಾಲೇಜು, ಒಂದು ಮಹಿಳಾ ಪದವಿ ಕಾಲೇಜು ಸ್ಥಾಪಿಸುವ ಭರವಸೆ ನೀಡಿದ್ದರಲ್ಲಾ? ಅದರಲ್ಲಿ ಒಂದಾದರೂ ಸ್ಥಾಪನೆಯಾಗಿದೆಯಾ?

4.) ಕಲ್ಯಾಣ ಕರ್ನಾಟಕದ ಪ್ರತಿ ಹೋಬಳಿಯಲ್ಲಿ ಒಂದು ಬಾಬಾ ಸಾಹೇಬ್ ಅಂಬೇಡ್ಕರ್ ಇಂಗ್ಲಿಷ್ ಮಾಧ್ಯಮ ಶಾಲೆ ಸ್ಥಾಪಿಸುವ ಭರವಸೆ ನೀಡಿದ್ದರಲ್ಲ, ಕನಿಷ್ಠ ಪಕ್ಷ ಒಂದಾದರೂ ಸ್ಥಾಪನೆ ಆಗಿದೆಯಾ?

5.) ಎರಡು ವರ್ಷದೊಳಗೆ ಕಲ್ಯಾಣ ಕರ್ನಾಟಕದ 2,500 ಹೊಸ ಶಾಲಾ ಕೊಠಡಿ ನಿರ್ಮಾಣ ಹಾಗು ಖಾಲಿ ಇರುವ ಎಲ್ಲ ಶಿಕ್ಷಕ ಹುದ್ದೆಗಳ ನೇಮಕಾತಿ ಮಾಡುತ್ತೇವೆ ಎನ್ನುವ ಭರವಸೆ ಈಡೇರುವುದು ಯಾವಾಗ? ಕಳೆದ 15 ತಿಂಗಳಲ್ಲಿ ಎಷ್ಟು ಶಿಕ್ಷಕರ ನೇಮಕಾತಿ ಆಗಿದೆ? ಎಷ್ಟು ಶಾಲಾ ಕೊಠಡಿಗಳ ನಿರ್ಮಾಣ ಆಗಿದೆ?

6.) ಕಲ್ಯಾಣ ಕರ್ನಾಟಕದ ಗ್ರಾಮ ಪಂಚಾಯಿತಿಗಳಿಗೆ ತಲಾ ಒಂದು ಕೋಟಿ ರೂಪಾಯಿ ಅನುದಾನ ನೀಡುವ ಭರವಸೆ ಈಡೇರಿದೆಯೇ?

ಅಧಿಕಾರಕ್ಕೆ ಬಂದ ಮೇಲೆ ಕಾಂಗ್ರೆಸ್ ಸರ್ಕಾರ ಕಲ್ಯಾಣ ಕರ್ನಾಟಕವನ್ನ ಸಂಪೂರ್ಣ ನಿರ್ಲಕ್ಷ್ಯ ಮಾಡಿದೆ. ಕಾಂಗ್ರೆಸ್ ಸರ್ಕಾರಕ್ಕೆ ಕಿಂಚಿತ್ತಾದರೂ ನೈತಿಕತೆ ಇದ್ದರೆ ನಾಮಕಾವಸ್ತೆ ಸಂಪುಟ ಸಭೆ ಮಾಡುವ ಮೊದಲು ಕಲ್ಯಾಣ ಕರ್ನಾಟಕದ ಜನತೆಯ ಈ ಪ್ರಶ್ನೆಗಳಿಗೆ ಉತ್ತರ ನೀಡಬೇಕು.

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಮೀಸಲಿಟ್ಟ ಹಣ ಹಾಗೇ ಉಳಿದಿದೆಯೇ ಅಥವಾ ತೆಲಂಗಾಣ ಚುನಾವಣಾ ಪ್ರಚಾರಕ್ಕೆ "ಗುಳೇ" ಹೋಯಿತೋ? ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳು ಕೇವಲ ಪೊಳ್ಳು ಭರವಸೆಗಳಾಗಿ ಉಳಿದಿದೆಯೂ ಅಥವಾ ಕಿಂಚಿತ್ತಾದರೂ ಅನುಷ್ಠಾನ ಆಗಿದೆಯೂ ಎಂದು ಸಚಿವ ಪ್ರಿಯಾಂಕ ಖರ್ಗೆ ಅವರೇ ತಮ್ಮ 'ಚೀಫ್' @zoo_bear ಮೂಲಕ ಫ್ಯಾಕ್ಟ್ ಚೆಕ್ ಮಾಡಿಸಿ ಕಲ್ಯಾಣ ಕರ್ನಾಟಕದ ಜನತೆಗೆ ವಾಸ್ತವಾಂಶ ತಿಳಿಸಬೇಕು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments