ನೀವು ಹೊಡೆದಷ್ಟು ಆರ್ ಎಸ್ಎಸ್ ಹೊಳೆಯುತ್ತದೆ: ಆರ್ ಅಶೋಕ್

Krishnaveni K
ಶುಕ್ರವಾರ, 17 ಅಕ್ಟೋಬರ್ 2025 (09:50 IST)
ಬೆಂಗಳೂರು: ನೀವು ಹೊಡೆದಷ್ಟು ಆರ್ ಎಸ್ಎಸ್ ಇನ್ನಷ್ಟು ಹೊಳೆಯುತ್ತದೆ ಅಷ್ಟೇ ಹೊರತು ನಿಮ್ಮಿಂದ ಸಂಘಟನೆಯನ್ನು ಕುಗ್ಗಿಸಲು ಸಾಧ್ಯವಿಲ್ಲ ಎಂದು ಬಿಜೆಪಿ ನಾಯಕ ಆರ್ ಅಶೋಕ್ ಹೇಳಿದ್ದಾರೆ.

ಆರ್ ಎಸ್ಎಸ್ ಚಟುವಟಿಕೆಗಳಿಗೆ ನಿರ್ಬಂಧ ಹೇರುವ ವಿಧೇಯಕಕ್ಕೆ ನಿನ್ನೆ ಸಚಿವ ಸಂಪುಟ ಅಂಗೀಕಾರ ನೀಡಿದೆ. ಇದರಿಂದಾಗಿ ಇನ್ನು ಮುಂದೆ ಆರ್ ಎಸ್ಎಸ್ ಸಾರ್ವಜನಿಕ ಸ್ಥಳಗಳಲ್ಲಿ ಕಾರ್ಯಕ್ರಮ ಮಾಡಬೇಕಾದರೆ ಸರ್ಕಾರದ ಒಪ್ಪಿಗೆ ಪಡೆಯಬೇಕು ಎಂದು ಹೊಸ ನಿಯಮ ಮಾಡಿದೆ.

ಇದು ಬಿಜೆಪಿ ಮತ್ತು ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್ ಅಶೋಕ್ ‘ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ದಿವಾಳಿಯ ಅಂಚಿಗೆ ತಳ್ಳಿ, ಎಲ್ಲ ರಂಗಗಳಲ್ಲೂ ಸಂಪೂರ್ಣವಾಗಿ ವಿಫಲವಾಗಿರುವ ಕಾಂಗ್ರೆಸ್ ಸರ್ಕಾರ ತನ್ನ ಆಂತರಿಕ ಕಚ್ಚಾಟ, ವೈಫಲ್ಯ, ಹಾಗು ಭ್ರಷ್ಟಾಚಾರದಿಂದ ಜನರ ಗಮನ ಬೇರೆಡೆ ಸೆಳೆಯಲು ಆರ್ ಎಸ್ಎಸ್ ಬಗ್ಗೆ ಇಲ್ಲಸಲ್ಲದ ಆರೋಪ, ನಿಂದನೆ ಮಾಡುತ್ತಿದೆ.

ಕಾಂಗ್ರೆಸ್ ನಾಯಕಕರು ಎಷ್ಟೇ ತಿಪ್ಪರಲಾಗ ಹಾಕಿದರೂ ಆರ್ ಎಸ್ಎಸ್ ಸಂಘಟನೆಯನ್ನು ಏನೂ ಮಾಡಲು ಸಾಧ್ಯವಿಲ್ಲ. ಸಂಘ ವಜ್ರವಿದ್ದಂತೆ. ಅದಕ್ಕೆ ಪೆಟ್ಟು ಕೊಟ್ಟಷ್ಟು ಹೊಳಪು ಹೆಚ್ಚಾಗುತ್ತದೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಘಾಟಬೋರಳ್ ಗ್ರಾಮದಲ್ಲಿ ಮಂಗನ ದಾಳಿಗೆ ಬೆಚ್ಚಿದ್ದ ಜನತೆ ಇದೀಗ ನಿರಾಳ

ನಾಳೆ ಡಿಕೆ ಶಿವಕುಮಾರ್ ಪ್ರಮಾಣವಚನ: ಶಕ್ತಿಕೇಂದ್ರದ ಸಿಬ್ಬಂದಿಗೆ ಅರ್ಧದಿನ ರಜೆ

ಕೇರಳ ಸದ್ಯ ಎದುರಿಸುತ್ತಿರುವ ಸವಾಲಿನ ಬಗ್ಗೆ ಸಿಎಂ ವಿಡಿ ಸತೀಶನ್ ಕಳವಳ, ಇಲ್ಲಿದೆ ಮಾಹಿತಿ

ನಾಳೆ ಸಂಚಾರಕ್ಕೆ ಮುಕ್ತವಾಗಬೇಕಿದ್ದ ಬೆಂಗಳೂರು ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಹಠಾತ್ ಬದಲಾವಣೆ

ಕ್ರೈಂ ಮಾಡಿದಾಗ ಯುವಕ, ತೀರ್ಪು ಪ್ರಕಟದ ಸಮಯದಲ್ಲಿ ನಡೆಯಕ್ಕಾಗದ ಸ್ಥಿತಿ, ಏನಿದು ಅಚ್ಚರಿ ಘಟನೆ

ಮುಂದಿನ ಸುದ್ದಿ
Show comments