Webdunia - Bharat's app for daily news and videos

Install App

ಬಿಜೆಪಿ, ಜಡಿಎಸ್ ಒಂದು ವರ್ಷ ಮೊದಲು ಮೈತ್ರಿ ಮಾಡಿಕೊಂಡಿದ್ದರೆ ನಾವು ಅಧಿಕಾರದಲ್ಲಿರುತ್ತಿದ್ದೆವು: ಆರ್ ಅಶೋಕ್

Krishnaveni K
ಸೋಮವಾರ, 8 ಜುಲೈ 2024 (13:47 IST)
ಬೆಂಗಳೂರು: ರಾಜ್ಯದಲ್ಲಿ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಮೈತ್ರಿ ಮಾಡಿಕೊಂಡಿದ್ದ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಈ ಕೆಲಸವನ್ನು ಒಂದು ವರ್ಷ ಮೊದಲು ಮಾಡಿದ್ದರೂ ನಾವು ಈಗ ರಾಜ್ಯದಲ್ಲಿಅಧಿಕಾರದಲ್ಲಿರುತ್ತಿದ್ದೆವು ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ.

ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಜೊತೆಯಾಗಿದ್ದವು. ಜೆಡಿಎಸ್ ನಾಯಕ ಕುಮಾರಸ್ವಾಮಿ ಈಗ ಕೇಂದ್ರ ಮಂತ್ರಿಯೂ ಆಗಿದ್ದಾರೆ. ಲೋಕಸಭೆಗೆ ಮಾಡಿಕೊಂಡಿದ್ದ ಮೈತ್ರಿಯಿಂದಾಗಿ ಕಾಂಗ್ರೆಸ್ ಗೆ ಹೊಡೆತ ಬಿದ್ದಿತ್ತು. ಹೀಗಾಗಿ ಈಗ ಅಶೋಕ್ ಇಂತಹದ್ದೊಂದು ಹೇಳಿಕೆ ನೀಡಿದ್ದಾರೆ.

ಒಂದು ವರ್ಷ ಮೊದಲು ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆದಿತ್ತು. ಈ ವೇಳೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದರೆ ನಾವು ಗೆಲ್ಲಬಹುದಾಗಿತ್ತು ಎಂದು ಆರ್ ಅಶೋಕ್ ಹೇಳಿದ್ದಾರೆ. ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿರುವ ಡಾ ಸುಧಾಕರ್ ಅವರ ಅಭಿನಂದನಾ ಸಮಾರಂಭದಲ್ಲಿ ಅವರು ಈ ಮಾತುಗಳನ್ನು ಹೇಳಿದ್ದಾರೆ.

ಕಾಂಗ್ರೆಸ್ ನ ಶ್ರೀಮಂತ ಅಭ್ಯರ್ಥಿಯ ಎದುರು ಸುಧಾಕರ್ ಗೆಲ್ಲುತ್ತಾರೋ ಎಂಬ ಅನುಮಾನವಿತ್ತು. ಆದರೆ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರು ಜೊತೆಯಾಗಿ ಕೆಲಸ ಮಾಡಿದ್ದರಿಂದ ಗೆಲುವು ಕಾಣಲು ಸಾಧ್ಯವಾಯಿತು. ದೇವೇಗೌಡರಿಗೆ ಬಿಜೆಪಿ ಕೋಮುವಾದಿ ಪಕ್ಷವಲ್ಲ ಎಂದು ತಡವಾಗಿ ಗೊತ್ತಾಗಿದೆ. ಒಂದು ವರ್ಷ ಮೊದಲೇ ನಾವು ಮೈತ್ರಿ ಮಾಡಿಕೊಂಡಿದ್ದರೆ ಇಷ್ಟೊತ್ತಿಗೆ ಅಧಿಕಾರದಲ್ಲಿರುತ್ತಿದ್ದೆವು ಎಂದು ಅಶೋಕ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾನವೀಯತೆ ಆಧಾರದಲ್ಲಿ ಭಾರತದಲ್ಲಿ ಇರಲು ಬಿಡಿ ಪಾಕ್‌ ಮಹಿಳೆ ಮನವಿ

ಉಗ್ರರಿಗೆ ಶಿಕ್ಷೆ ಕೊಡಿ, ನಮಗ್ಯಾಕೆ: ಭಾರತ ಬಿಟ್ಟು ಹೋಗಲು ಗೋಳಾಡಿದ ಪಾಕಿಸ್ತಾನಿಗಳು

Pehalgam attack: ಪಹಲ್ಗಾಮ್ ದಾಳಿ ಮಾಡಿದ್ದೀರಿ ಎಂದರೆ ನಾನವನಲ್ಲ ಅಂತಿರೋ ಪಾಕಿಸ್ತಾನ ವಿರುದ್ಧ ಸಿಕ್ಕಿದೆ ಪ್ರಬಲ ಸಾಕ್ಷ್ಯ

Pehalgam attack:ಎನ್ಐಎ ತನಿಖೆಯಲ್ಲಿ ಪಹಲ್ಗಾಮ್ ಉಗ್ರರ ಯೋಜನೆ ಬಗ್ಗೆ ಮತ್ತಷ್ಟು ರೋಚಕ ವಿಚಾರಗಳು ಬಹಿರಂಗ

ಪೆಹಲ್ಗಾಮ್‌ ದಾಳಿ: ಸಾಮೂಹಿಕ ಸಂಕಲ್ಪ ಪ್ರದರ್ಶನಕ್ಕೆ ವಿಶೇಷ ಅಧಿವೇಶನ ಕರೆಯಲು ಕೇಂದ್ರಕ್ಕೆ ಖರ್ಗೆ ಆಗ್ರಹ

ಮುಂದಿನ ಸುದ್ದಿ
Show comments