Webdunia - Bharat's app for daily news and videos

Install App

ಭಾರತ ಅಭಿವೃದ್ಧಿಯಾಗಬೇಕು ಅಂತೇನಾದ್ರೂ ಇದ್ರೆ ಮೋದಿಗೆ ವೋಟ್ ಹಾಕಿ: ಆರ್. ಅಶೋಕ್

Krishnaveni K
ಶುಕ್ರವಾರ, 3 ಮೇ 2024 (15:02 IST)
ಬೆಂಗಳೂರು: ದೇಶವನ್ನು 10 ವರ್ಷಗಳ ಕಾಲ ಸರ್ವತೋಮುಖ ಅಭಿವೃದ್ಧಿಯತ್ತ ಒಯ್ದ ನರೇಂದ್ರ ಮೋದಿಯವರು ಸಮರ್ಥ ನಾಯಕ. ದೇಶ, ಬಡವರಿಗೆ ಒಳ್ಳೆಯದು ಮಾಡಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ತಿಳಿಸಿದರು.
 
ಬೀದರ್‍ನಲ್ಲಿ ರೆಡ್ಡಿ ಸಮುದಾಯದ ಸಾರ್ವಜನಿಕ ಸಭೆಯಲ್ಲಿ ಇಂದು ಮಾತನಾಡಿದ ಅವರು, ಇಲ್ಲಿನ ಕಾಂಗ್ರೆಸ್ ಅಭ್ಯರ್ಥಿಗೆ ರಾಹುಲ್ ಗಾಂಧಿಯವರಂತೆ ಸಮಸ್ಯೆಗಳ ಅರಿವಿಲ್ಲ ಎಂದು ಟೀಕಿಸಿದರು. ಭಗವಂತ ಖೂಬಾ ಅವರು ಜನರ ಸಮಸ್ಯೆಗಳ ಪರಿಹಾರಕ್ಕೆ ಶ್ರಮಿಸಿದ್ದಾರೆ. ಜನಮೆಚ್ಚುಗೆ ಗಳಿಸಿದ್ದಾರೆ ಎಂದು ವಿಶ್ಲೇಷಿಸಿದರು.

ರೈತ ಯೋಜನೆಗಳು, ಅಭಿವೃದ್ಧಿಗೆ ಸಂಸತ್ತಿನಲ್ಲಿ ಮನವಿ ಮಾಡಲು ಬಿಜೆಪಿಯ ಸಮರ್ಥ ಅಭ್ಯರ್ಥಿ ಆಯ್ಕೆ ಮಾಡಿ ಎಂದು ವಿನಂತಿಸಿದರು. ಫಲಿತಾಂಶ ಬಂದ ಬಳಿಕ ರಾಹುಲ್ ಗಾಂಧಿಯವರು ವಿದೇಶಕ್ಕೆ ಓಡಿ ಹೋಗಲಿದ್ದಾರೆ. ಯಾಕೆಂದರೆ ಫಲಿತಾಂಶ ಈಗಾಗಲೇ ಗೊತ್ತಾಗಿದೆ ಎಂದು ತಿಳಿಸಿದರು.

ದೇಶದ ಭವಿಷ್ಯ, ಸುರಕ್ಷತೆ, ಅಭಿವೃದ್ಧಿಗೆ ಮೋದಿಜೀ, ಬಿಜೆಪಿ ಆಯ್ಕೆ ಅನಿವಾರ್ಯ. ಕಾಂಗ್ರೆಸ್ ಪಕ್ಷ ಈ ದೇಶಕ್ಕೆ ಒಳ್ಳೆಯದು ಮಾಡಿಲ್ಲ. 50 ವರ್ಷಕ್ಕೂ ಹೆಚ್ಚು ಕಾಲ ಆಳ್ವಿಕೆ ನಡೆಸಿದರೂ ದೇಶಕ್ಕೆ ಅಭಿವೃದ್ಧಿ ತಂದಿಲ್ಲ ಎಂದು ಆಕ್ಷೇಪಿಸಿದರು. ಮೋದಿಜೀ ಅವರ ನೇತೃತ್ವದಲ್ಲಿ ದೇಶದ ಸರ್ವತೋಮುಖ ಅಭಿವೃದ್ಧಿ ಆಗಿದೆ. ಖೂಬಾ ಅವರ ಮೂಲಕ ಮೋದಿಯವರಿಗೆ ನಿಮ್ಮ ಮತ ಕೊಡಿ ಎಂದು ವಿನಂತಿಸಿದರು. 

ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು ಮಾತನಾಡಿ, ಮೋದಿ ಮೋದಿ ಎಂದು ಘೋಷಣೆ ಕೂಗಿದವರಿಗೆ ಕಪಾಳಕ್ಕೆ ಹೊಡೆಯಿರಿ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ತಂಗಡಗಿ ಹೇಳಿದ್ದಾರೆ. ಅದು ಖಂಡನೀಯ ಎಂದರು. ಇದು ಭಾರತದ ಸಂಸ್ಕಾರ, ಸಂಸ್ಕøತಿಯಲ್ಲ ಎಂದು ನುಡಿದರು. ಮೋದಿ ಮೋದಿ ಎಂದು ಸ್ಮರಣೆ ಮಾಡಿ ಖೂಬಾರಿಗೆ ಮತ ಕೊಡಿ ಎಂದು ವಿನಂತಿಸಿದರು.
ಮೋದಿಯವರು ಜಾತಿ, ಮತ ಭೇದವಿಲ್ಲದೆ ಅಭಿವೃದ್ಧಿಯತ್ತ ದೇಶವನ್ನು ಕೊಂಡೊಯ್ದಿದ್ದಾರೆ. ಆದರೂ ಅವರ ಕುರಿತು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಟೀಕಿಸಿದರು. ಜಮ್ಮು- ಕಾಶ್ಮೀರದಲ್ಲಿ 370ನೇ ವಿಧಿ ರದ್ದು ಮಾಡಿ ಪ್ರಶಾಂತ ಪರಿಸ್ಥಿತಿ ನಿರ್ಮಿಸಿದ್ದನ್ನು ಪ್ರಸ್ತಾಪಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments