ಯುದ್ಧ ಬೇಡ ಅನ್ನೋ ಸಿದ್ದರಾಮಯ್ಯಗೆ ನಾಚಿಕೆ ಆಗಲ್ವಾ: ಆರ್ ಅಶೋಕ್

Krishnaveni K
ಶನಿವಾರ, 26 ಏಪ್ರಿಲ್ 2025 (15:40 IST)
ಬೆಂಗಳೂರು: ಪಾಕಿಸ್ತಾನದ ಜೊತೆ ಯುದ್ಧ ಬೇಡ, ಶಾಂತಿಯಿಂದಿರೋಣ ಎನ್ನುವ ಸಿಎಂ ಸಿದ್ದರಾಮಯ್ಯಗೆ ನಾಚಿಕೆಯಾಗಬೇಕು ಎಂದು ವಿಪಕ್ಷ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯನ್ನು ಅಮೆರಿಕಾ, ಲಂಡನ್, ರಷ್ಯಾ ಸೇರಿದಂತೆ ವಿಶ್ವದ ಎಲ್ಲಾ ರಾಷ್ಟ್ರಗಳೂ ಖಂಡಿಸಿವೆ. ಅಲ್ಲಿ ಉಗ್ರರು ಹಿಂದೂಗಳ ಎಂದು ಕೇಳಿ ಕೇಳಿ ಹತ್ಯೆ ಮಾಡಿದ್ದಾರೆ. ಇದನ್ನು ಯಾರು ಕೂಡಾ ಕ್ಷಮಿಸಲು ಸಾಧ್ಯವೇ ಇಲ್ಲ. ಸಿದ್ದರಾಮಯ್ಯನವರು ಒಬ್ಬರೇ ಕ್ಷಮಿಸಬಹುದು.

ಯಾಕೆಂದರೆ ಬರ್ತಾ ಬರ್ತಾ ಅವರ ಮನಸ್ಥಿತಿ ಕೆಡುತ್ತಾ ಇದೆ. ವೋಟಿಗೋಸ್ಕರ ದೇಶಕ್ಕೆ ಏನು ಬೇಕಾದ್ರೂ ಆಗಲಿ ಎಂಬ ಮನಸ್ಥಿತಿ ಬಂದಿದೆಯಲ್ಲಾ? ಇದು ನಾಚಿಕೆಗೇಡಿನ ಸಂಗತಿ. ಯಾಕೆಂದರೆ ಸಿದ್ದರಾಮಯ್ಯನವರಿಗೆ ಯಾವುದೇ ಸಿದ್ಧಾಂತಗಳಿಲ್ಲ ಎಂದು ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಸಾಯುವವರೆಗೂ ಅಧಿಕಾರದಲ್ಲಿರಬೇಕು ಎನ್ನುವ ಮಹತ್ವಾಕಾಂಕ್ಷಿ ವ್ಯಕ್ತಿ ಸಿದ್ದರಾಮಯ್ಯ. ಇಡೀ ದೇಶವೇ ಬೀದಿ ಬೀದಿಯಲ್ಲಿ ಪ್ರತಿಭಟನೆ ಮಾಡ್ತಿದೆ. ಸಿದ್ದರಾಮಯ್ಯನವರು ನಿಮ್ಮ ಮನೆಯಲ್ಲೇ ಈ ರೀತಿ ಮಾಡ್ತಿದ್ದರೆ ಬಿಡ್ತಾಇದ್ರಾ? ಬೇರೆಯವರ ಕುಟುಂಬದಲ್ಲಿ ಆದ ಸಾವಿಗೆ ಬೆಲೆ ಇಲ್ವಾ? ಎಂದು ಅಶೋಕ್ ಪ್ರಶ್ನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಬೈಯಂತಹ ದೇಶ ನಿರ್ಮಿಸಿರುವ ಬಿಹಾರಿಗಳು ಇಂದು ನಿರುದ್ಯೋಗಿಗಳು: ರಾಹುಲ್ ಗಾಂಧಿ

ಮತಕ್ಕಾಗಿ ಮೋದಿ ನೃತ್ಯ ಮಾಡಕ್ಕೂ ಸೈ ಎಂದ ರಾಹುಲ್ ಗಾಂಧಿ ವಿರುದ್ಧ ದೂರು

ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2025: ವಿಜೇತರ ಪಟ್ಟಿ, ಪ್ರಶಸ್ತಿ ವಿವರ ಇಲ್ಲಿದೆ

ಬಿಹಾರ ವಿಧಾನಸಭೆ ಚುನಾವಣೆ, ನಾಳೆ ಎನ್‌ಡಿಎ ಪ್ರಣಾಳಿಕೆ ಬಿಡುಗಡೆ

ಮಕ್ಕಳು ಸೇರಿದಂತೆ 17ಮಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಆರ್ಯ ಗುಂಡೇಟಿಗೆ ಬಲಿ

ಮುಂದಿನ ಸುದ್ದಿ
Show comments