Select Your Language

Notifications

webdunia
webdunia
webdunia
webdunia

ಸಿದ್ದರಾಮಯ್ಯನವರೇ ನಿಮಗೆ ತಿಲಕ, ಕೇಸರಿ ಪೇಟ ಕಂಡರೆ ಯಾಕೆ ನಡುಕ: ಆರ್ ಅಶೋಕ್

R Ashok
ಬೆಂಗಳೂರು: ಕೇಸರಿ ಪೇಟ ಧರಿಸಲು ಅವಕಾಶವಿಲ್ಲ ಎಂದ ಸಿಎಂ ಸಿದ್ದರಾಮಯ್ಯಗೆ ಟಾಂಗ್ ಕೊಟ್ಟಿರುವ ವಿಪಕ್ಷ ನಾಯಕ ಆರ್ ಅಶೋಕ್ ನಿಮಗೆ ಕೇಸರಿ ಶಾಲು, ಪೇಟ ಕಂಡರೆ ಯಾಕೆ ನಡುಕ ಎಂದು ವ್ಯಂಗ್ಯ ಮಾಡಿದ್ದಾರೆ.

ರಾಜ್ಯದಲ್ಲಿ ಮತ್ತೆ ಹಿಜಾಬ್ ವಿವಾದ ಭುಗಿಲೆದ್ದಿದೆ. ಶಾಲಾ, ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಿರುವುದು ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ. ಕಾಂಗ್ರೆಸ್ ಓಲೈಕೆ ರಾಜಕಾರಣ ಎಂದು ಬಿಜೆಪಿ ಟೀಕೆ ಮಾಡಿದೆ.

ಇದರ ನಡುವೆ ಕೇಸರಿ ಶಾಲು, ಪೇಟ ಧರಿಸಲು ಅವಕಾಶವಿಲ್ಲ, ಹಿಜಾಬ್ ಗೆ ಮಾತ್ರ ಅವಕಾಶ ನೀಡಿದ್ದೇವೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಆರ್ ಅಶೋಕ್ ಟಾಂಗ್ ಕೊಟ್ಟಿದ್ದಾರೆ. ‘ನಿಮಗೆ ತಿಲಕ ಕಂಡರೆ ನಡುಕ, ಕೇಸರಿ ಕಂಡರೆ ಮೈಯೆಲ್ಲ ಉರಿ, ಹನುಮ ಧ್ವಜ ಕಂಡರೆ ತಳಮಳ, ರಾಮಮಂದಿರ ಎಂದರೆ ಕಿರಿಕಿರಿ.

ಆದರೆ ಅನ್ಯ ಮತೀಯ ಸಂಭ್ರಮಗಳಲ್ಲಿ ಮಾತ್ರ ಗಮಗಮಿಸುವ ಸೆಂಟು ಹೊಡೆದುಕೊಂಡು, ಟೋಪಿ ಹಾಕಿಕೊಂಡು, ನವ ಮದುಮಗನಂತೆ ಸಿಂಗಾರಗೊಳ್ಳುತ್ತೀರಿ.

ಹಿಂದೂಗಳೆಂದರೆ, ಹಿಂದೂಗಳ ನಂಬಿಕೆಗಳೆಂದರೆ, ಹಿಂದೂಗಳ ಆಚರಣೆಗಳೆಂದರೆ, ಹಿಂದೂಗಳ ಧಾರ್ಮಿಕ ಚಿಹ್ನೆಗಳೆಂದರೆ ನಿಮಗೆ ಯಾಕಿಷ್ಟು ಅಸಹನೆ ಸ್ವಾಮಿ, ಯಾಕಿಷ್ಟು ದ್ವೇಷ? ನೀವು ಬರೀ ಅಲ್ಪಸಂಖ್ಯಾತರಿಗೆ ಮಾತ್ರ ಮುಖ್ಯಮಂತ್ರಿ ಅಲ್ಲ ಸ್ವಾಮಿ, ಇಡೀ ರಾಜ್ಯಕ್ಕೆ ಮುಖ್ಯಮಂತ್ರಿ ಅನ್ನೋದನ್ನ ಮರೆಯಬೇಡಿ’ ಎಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

NEET: ನೀಟ್ ಮರು ಪರೀಕ್ಷೆ ದಿನಾಂಕ ಘೋಷಣೆ: ವಿವರಗಳಿಗೆ ಇಲ್ಲಿ ನೋಡಿ