ವಾಚ್ ಹಗರಣದಲ್ಲಿ ಯಾವುದೇ ಕಾನೂನು ತನಿಖೆ ಎದುರಿಸದೇ ಸ್ವಂಘೋಷಿತ ನಿರ್ದೋಷಿ ಎಂದು ಘೋಷಿಸಿಕೊಂಡಿರುವ ಸಿಎಂ ಸಿದ್ದರಾಮಯ್ಯನವರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರ ವಿರುದ್ಧ ಆರೋಪ ಮಾಡುವ ಯಾವುದೇ ನೈತಿಕತೆ ಇಲ್ಲ ಎಂದು ಮಾಜಿ ಡಿಸಿಎಂ ಆರ್.ಅಶೋಕ್ ತಿರುಗೇಟು ನೀಡಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಿರ್ದೋಷಿಗಳೆಂದು ಸಾಬೀತಾಗಿದೆ. ಆದರೆ, ಸಿಎಂ ಸಿದ್ದರಾಮಯ್ಯ ಮೇಲಿರುವ ಆರೋಪಗಳನ್ನು ಯಾವುದೇ ತನಿಖೆಗೆ ಒಳಪಡಿಸದೆ ತಾವೇ ತಾವೇ ದೋಷಮುಕ್ತರೆಂದು ಘೋಷಿಸಿಕೊಂಡಿದ್ದಾರೆ ಎಂದರು.
ಯಡಿಯೂರಪ್ಪನವರನ್ನು ಭ್ರಷ್ಟಾಚಾರಿ ಎಂದು ಹೇಳಲು ಸಿಎಂ ಸಿದ್ದರಾಮಯ್ಯನವರಿಗೆ ಯಾವುದೇ ನೈತಿಕತೆ ಇಲ್ಲ. ಅವರು ನ್ಯಾಯಾಲಯದಲ್ಲಿ ಕ್ಲೀನ್ಚಿಟ್ ಪಡೆದಿದ್ದಾರೆ. ಸಿದ್ದರಾಮಯ್ಯ ತಮ್ಮ ಮೇಲಿನ ಆರೋಪಗಳ ಬಗ್ಗೆ ಕಾನೂನು ತನಿಖೆ ಎದುರಿಸಿ ನಿರ್ದೋಷಿ ಎಂದು ಸಾಬೀತುಪಡಿಸಲಿ ಎಂದು ಮಾಜಿ ಡಿಸಿಎ ಆರ್.ಆಶೋಕ್ ಸವಾಲ್ ಎಸೆದರು.
ಅಮಿತ್ ಶಾ, ಬಿಎಸ್ವೈ ವಿರುದ್ಧ ಆರೋಪ ಮಾಡುವ ನೈತಿಕತೆ ಸಿಎಂ ಸಿದ್ದರಾಮಯ್ಯಗಿಲ್ಲ: ಆರ್.ಅಶೋಕ್