Select Your Language

Notifications

webdunia
webdunia
webdunia
webdunia

ಸದನದಲ್ಲೇ ನಿದ್ದೆ ಹೋದ ಡಿಕೆ ಶಿವಕುಮಾರ್: ರಾತ್ರಿಯೆಲ್ಲಾ ನಿದ್ರೆಯಿಲ್ವಾ ಎಂದು ಕಾಲೆಳದ ಆರ್ ಅಶೋಕ್

DK Shivakumar

Krishnaveni K

ಬೆಳಗಾವಿ , ಗುರುವಾರ, 11 ಡಿಸೆಂಬರ್ 2025 (11:25 IST)
Photo Credit: X
ಬೆಳಗಾವಿ: ವಿಧಾನಸಭೆ ಅಧಿವೇಶನದ ನಡುವೆ ಸದನದಲ್ಲೇ ನಿದ್ದೆ ಹೋದ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ವಿಪಕ್ಷ ನಾಯಕ ಆರ್ ಅಶೋಕ್ ಕಿಚಾಯಿಸಿದ್ದಾರೆ.

ಸದನದಲ್ಲೇ ಡಿಕೆಶಿ ನಿದ್ರಿಸುತ್ತಿರುವ ಫೋಟೋ ಹಂಚಿಕೊಂಡ ಆರ್ ಅಶೋಕ್, ಪಾಪ ಬಹುಶಃ ಕುರ್ಚಿ ಸಿಗದ ನಿರಾಸೆಯಿಂದ ರಾತ್ರಿಯೆಲ್ಲಾ ನಿದ್ರೆಯಿಲ್ಲ ಎನಿಸುತ್ತದೆ ಎಂದು ಕಾಲೆಳೆದಿದ್ದಾರೆ. ‘ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಕೇಂದ್ರ ಸರ್ಕಾರವೇ ಉತ್ತರ ಕೊಡಬೇಕು ಎಂದು ಜಾರಿಕೊಂಡು ಸದನದಲ್ಲೇ ಪ್ರಗಾಢ ನಿದ್ರೆಗೆ ಜಾರಿರುವ ಡಿಸಿಎಂ ಡಿಕೆ ಶಿವಕುಮಾರ್ ಸಾಹೇಬರಿಗೆ ಪಾಪ ಸಿಎಂ ಕುರ್ಚಿ ಸಿಗದ ನಿರಾಸೆಯಿಂದ ರಾತ್ರಿಯೆಲ್ಲ ನಿದ್ದೆ ಬರುತ್ತಿಲ್ಲ ಅನ್ನಿಸುತ್ತೆ. ಹಾಗಾಗಿ ಸದನದಲ್ಲೇ ವಿಶ್ರಾಂತಿ ಪಡೆಯುತ್ತಿರಬೇಕು.

"ಏಳಿ ಎದ್ದೇಳಿ, ಗುರಿ ಮುಟ್ಟುವ ತನಕ ನಿಲ್ಲದಿರಿ", ಎಂದು ಸ್ವಾಮಿ ವಿವೇಕಾನಂದರು ಕರೆ ಕೊಟ್ಟಿದ್ದರು. ಆದರೆ ಕಾಂಗ್ರೆಸ್ ನಾಯಕರ ವರಸೆ "ಮಲಗಿ, ಮಲಗಿರಿ, ಜನ ಒದ್ದೋಡಿಸುವವರೆಗೂ ಎಳೆಬೇಡಿ" ಎನ್ನುವಂತಿದೆ’ ಎಂದು ವ್ಯಂಗ್ಯ ಮಾಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

12 ವೋಟ್ ಪಡೆದಿದ್ದು ಸರ್ದಾರ್ ವಲ್ಲಭಾಯಿ ಪಟೇಲ್, ಆದ್ರೆ ನೆಹರೂ ಹೇಗೆ ಪ್ರಧಾನಿಯಾದ್ರು