ಕಾಂಗ್ರೆಸ್ ಸರ್ಕಾರದಲ್ಲಿ ಟಕಾ ಟಕ್ ಮಾಯದ ಮಹಿಮೆ ಜೋರಾಗಿದೆ

Krishnaveni K
ಗುರುವಾರ, 30 ಮೇ 2024 (15:05 IST)
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣದಲ್ಲಿ ಇಡೀ ಸಚಿವಸಂಪುಟದವರೇ ಭಾಗಿಯಾಗಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಆರೋಪಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊನ್ನೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ಚುನಾವಣಾ ಭಾಷಣದಲ್ಲಿ ಮಾತನಾಡಿ, ತಮ್ಮ ಸರಕಾರ ಬಂದ ಬಳಿಕ ಮಹಿಳೆಯರ ಬ್ಯಾಂಕ್ ಖಾತೆಗೆ ಟಕಾ ಟಕ್ ಟಕಾ ಟಕ್ ಹಣ ಹಾಕುವುದಾಗಿ ಹೇಳಿದ್ದಾರೆ. ಅದನ್ನು ಅನುಸರಿಸಿದ ಕಾಂಗ್ರೆಸ್ ಪಕ್ಷದ ಎಲ್ಲ ಸಚಿವರು, ಟಕ್ ಟಕಾ ಟಕ್ ಎಂಬಂತೆ ಹಣ ವರ್ಗಾವಣೆ ಮಾಡಿದ್ದಾರೆ ಎಂದು ತಿಳಿಸಿದರು.

4ರಂದು 25 ಕೋಟಿ ಟಕಾ ಟಕ್ ವರ್ಗಾವಣೆ, 6ರಂದು 25 ಕೋಟಿ ಟಕಾ ಟಕ್ ವರ್ಗಾವಣೆ, 21ರಂದು 44 ಕೋಟಿ ಟಕಾ ಟಕ್ ವರ್ಗಾವಣೆ, ರಾಜ್ಯ ಖಜಾನೆಯಿಂದ 43 ಕೋಟಿ ವರ್ಗಾವಣೆ ಟಕಾ ಟಕ್ ಎಂಬಂತೆ ನಡೆದಿದೆ. ಮತ್ತೆ 21ರಂದು 50 ಕೋಟಿ ರೂ. ಟಕಾ ಟಕ್ ಟ್ರಾನ್ಸ್‍ಫರ್ ಆಗಿದೆ. ಕಾಂಗ್ರೆಸ್ಸಿನವರು ಇಷ್ಟು ಮೊತ್ತವನ್ನು ಅವರ ಲೂಟಿ ಖಾತೆಗೆ ಹಾಕಿದ್ದಾರೆ ಎಂದು ಆಕ್ಷೇಪಿಸಿದರು. ಇದೊಂದು ಬ್ರಹ್ಮಾಂಡ ಭ್ರಷ್ಟಾಚಾರ ಎಂದು ಟೀಕಿಸಿದರು.

187 ಕೋಟಿ ನುಂಗಲು ಒಬ್ಬ ಮಂತ್ರಿಯಿಂದ ಸಾಧ್ಯವಿಲ್ಲ. ಇದು ಸಣ್ಣ ಮೊತ್ತವೇನಲ್ಲ. ಅವರ ಜೀವನ, ಅವರು, ಮಕ್ಕಳು, ಮೊಮ್ಮಕ್ಕಳು, ಮರಿ ಮಕ್ಕಳು ಸಂತೃಪ್ತಿಯಿಂದ ಬದುಕುವಷ್ಟು ದುಡ್ಡು ಇದು ಎಂದು ನುಡಿದರು.
 
25 ಸಾವಿರ ಕೋಟಿ ದಲಿತರ ಹಣ ಮಾಯ..
ರಾಹುಲ್ ಗಾಂಧಿಯವರು ಹೇಳಿದಂತೆ 25 ಸಾವಿರ ಕೋಟಿ ದಲಿತರ ಹಣ ಮಾಯವಾಗಿದೆ. ಎಲ್ಲಿಗೆ ಹೋಯಿತು? ಯಾರಿಗೆ ಹೋಯಿತೆಂದು ಗೊತ್ತಿಲ್ಲ. ಯಾವುದಕ್ಕೆ ಬಳಸಿದರೆಂದೂ ಗೊತ್ತಿಲ್ಲ. ಇವತ್ತು ಅಧಿಕಾರಿಗಳು ಟಕಾ ಟಕ್ ಎಂದು ಸತ್ತು ಹೋಗುತ್ತಿದ್ದಾರೆ. ಬಿತ್ತನೆ ಬೀಜದ ಬೆಲೆ ಇವತ್ತು ಟಕಾ ಟಕ್ ಎಂದು ಶೇ 70 ರಷ್ಟು ಏರಿಕೆ ಕಂಡಿದೆ ಎಂದು ಆರ್. ಅಶೋಕ್ ಅವರು ದೂರಿದರು.
 
ಕಾಂಗ್ರೆಸ್ಸಿನವರಿಗೆ ರಾಮ ಕಂಡರೆ ಆಗುವುದಿಲ್ಲ. ವಾಲ್ಮೀಕಿ ಮಹರ್ಷಿಯನ್ನು ಕಂಡರೆ ಆಗೋಲ್ಲ ಎಂದು ಈಗ ಗೊತ್ತಾಗಿದೆ. ಆ ನಿಗಮದ ಹೆಸರಿನಲ್ಲಿ ಇದ್ದ 187 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಕಾಂಗ್ರೆಸ್ಸಿನ ಒಂದು ವರ್ಷದ ಸಾಧನೆ ಎಂದು ಟೀಕಿಸಿದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಹೊಸ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

Viral video: ಗರ್ಭಿಣಿ ಮಹಿಳೆ ಮೇಲೆ ಮಾನವೀಯತೆ ಮರೆತು ಸ್ಕೂಟಿ ಹತ್ತಿಸಿದ ಪೊಲೀಸ್

ಶೂದ್ರರು ತಮ್ಮ ವಿರೋಧಿಯಾಗಿರುವ ಆರ್ ಎಸ್ಎಸ್ ಸೇರುತ್ತಾರಲ್ಲಾ ಏನು ಹೇಳೋದು: ಸಿದ್ದರಾಮಯ್ಯ

ಇಂದಿರಾ ಗಾಂಧಿ ದೇಶದ ಪ್ರೇಮದ, ಧೈರ್ಯದ ಪ್ರತೀಕ: ಡಿಕೆ ಶಿವಕುಮಾರ್

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಮುಂದಿನ ಸುದ್ದಿ
Show comments