Webdunia - Bharat's app for daily news and videos

Install App

ಮಳೆಯಿಂದ ಹಾನಿಗೊಳಗಾದ ಸ್ಥಳಗಳಿಗೆ ಆರ್ ಅಶೋಕ್ ಭೇಟಿ

Webdunia
ಗುರುವಾರ, 1 ಸೆಪ್ಟಂಬರ್ 2022 (21:18 IST)
ರಾಜಧಾನಿ ಬೆಂಗಳೂರಿನಲ್ಲಿ ಸುರಿದ ಮಳೆಯಿಂದ ಅವಾಂತರವೇ ಸೃಷ್ಟಿಯಾಗಿದೆ. ಸಿಲಿಕಾನ್​ ಸಿಟಿಯಲ್ಲಿ ಮಳೆಯಿಂದಾದ ಹಾನಿ ಕುರಿತಾಗಿ ಕಂದಾಯ ಸಚಿವ ಆರ್​​.ಅಶೋಕ್​​​ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರು ವೇಗವಾಗಿ ಬೆಳೆಯುತ್ತಿರುವ ನಗರ. ವಾಡಿಕೆಗಿಂತ ಹೆಚ್ಚು ಮಳೆ ಬಂದಿದ್ದರಿಂದ ಸಮಸ್ಯೆಯಾಗಿದೆ. ಈ‌ ಬಾರಿ ಮಳೆಯಿಂದಾಗಿ ಬೊಮ್ಮನಹಳ್ಳಿ ಹಾಗೂ ಮಹದೇವಪುರ ಭಾಗದಲ್ಲಿ ಅತಿ ಹಾನಿಯಾಗಿದೆ. ಇಂದು ಸಿಎಂ ಬೊಮ್ಮಾಯಿ ಅವರು ಭೇಟಿ ನೀಡಲಿದ್ದಾರೆ ಎಂದರು. ಹಾನಿಗೊಳಗಾದ ಭಾಗದಲ್ಲಿ ಕಾಮಗಾರಿ ವೇಗವಾಗಿ ನಡೆಯುತ್ತಿದೆ. ಸರ್ಕಾರ ಎಲ್ಲಾ ಕ್ರಮ ತೆಗೆದುಕೊಳ್ಳುತ್ತಿದೆ. ಬೆಂಗಳೂರು ಹೊರತುಪಡಿಸಿ ಜಿಲ್ಲೆಗಳಲ್ಲಿ ಆದ ಹಾನಿ ಬಗ್ಗೆ  ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಹಾನಿಯಾಗಿರೋ‌ ಮನೆಗಳಿಗೆ ಪರಿಹಾರ ‌ನೀಡಲಾಗ್ತಿದೆ. ನಿರಾಶ್ರಿತರಿಗೆ 15 ದಿನಗಳ ಆಹಾರ ಕಿಟ್ ಸರ್ಕಾರ ನೀಡುತ್ತಿದೆ. ಮಳೆ ಏನು ಬೆಂಗಳೂರಲ್ಲಿ ಮಾತ್ರ ಆಗಿಲ್ಲ. ಅಮೆರಿಕಾ, ಪಾಕಿಸ್ತಾನ ಸೇರಿ ಎಲ್ಲಾ ಕಡೆ ಆಗಿದೆ. ಯಾರೋ ಏನೋ ಹೇಳಿದ್ರು ಅಂದ್ರೆ ಬೆಂಗಳೂರು ಬ್ಯ್ರಾಂಡ್ ಹಾಳಾಗಲ್ಲ ಎಂದು ತಿರುಗೇಟು ನೀಡಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments