ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರನಾ, ಪ್ರಲ್ಹಾದ್ ಜೋಶಿನಾ: ಆರ್ ಅಶೋಕ್ ರಿಂದ ಎಡವಟ್ಟಾಯ್ತು

Krishnaveni K
ಸೋಮವಾರ, 1 ಸೆಪ್ಟಂಬರ್ 2025 (16:20 IST)
ಧರ್ಮಸ್ಥಳ: ರಾಜ್ಯ ಬಿಜೆಪಿ ಇಂದು ಧರ್ಮಸ್ಥಳ ಚಲೋ ಸಮಾವೇಶ ಹಮ್ಮಿಕೊಂಡಿದೆ. ಈಗಾಗಲೇ ಧರ್ಮಸ್ಥಳದಲ್ಲಿ ಬೃಹತ್ ಸಮಾವೇಶದಲ್ಲಿ ಬಿಜೆಪಿಯ ಬಹುತೇಕ ನಾಯಕರು ಬಂದು ಭಾಷಣ ಮಾಡುತ್ತಿದ್ದಾರೆ. ಈ ವೇಳೆ ಆರ್ ಅಶೋಕ್ ಬಿಜೆಪಿ ರಾಜ್ಯಾಧ್ಯಕ್ಷರು ಯಾರು ಎಂದು ಕನ್ ಫ್ಯೂಸ್ ಆಗಿದ್ದಾರೆ.

ಧರ್ಮಸ್ಥಳ ಚಲೋ ಸಮಾವೇಶಕ್ಕೆ ಮುನ್ನ ಇಂದು ಬಿಜೆಪಿ ನಾಯಕರು ಮಂಜುನಾಥಸ್ವಾಮಿಯ ದರ್ಶನ ಪಡೆದು ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದರು. ನಿಮ್ಮೊಂದಿಗೆ ನಾವಿದ್ದೇವೆ ಎಂದು ಭರವಸೆ ನೀಡಿದ್ದಾರೆ.

ಬಳಿಕ ಸಮಾವೇಶದಲ್ಲಿ ಬಿಜೆಪಿಯ ಬಹುತೇಕ ನಾಯಕರು ಭಾಗಿಯಾಗಿದ್ದಾರೆ. ಆದರೆ ಪ್ರತಿಪಕ್ಷ ನಾಯಕರಾಗಿರುವ ಆರ್ ಅಶೋಕ್ ಭಾಷಣದ ವೇಳೆ ಎಡವಟ್ಟು ಮಾಡಿದ್ದಾರೆ. ಅಶೋಕ್ ಭಾಷಣಕ್ಕೆ ಮೈಕ್ ಮುಂದೆ ಬರುವಾಗಲೇ ಜನರು ವಿಜಯೇಂದ್ರ ಮುಂದಿನ ಸಿಎಂ ಎಂದು ಘೋಷಣೆ ಕೂಗಿದ್ದಾರೆ.

ಬಹುಶಃ ಇದರಿಂದ ಅವರು ಗಲಿಬಿಲಿಯಾಗಿದ್ದರೋ ಏನೋ. ಒಟ್ಟಿನಲ್ಲಿ ಭಾಷಣ ಆರಂಭಿಸುವಾಗ ಬಿಜೆಪಿ ರಾಜ್ಯಾದ್ಯಕ್ಷರಾದ ಪ್ರಲ್ಹಾದ್ ಜೋಶಿಯವರೇ ಎಂದು ಬಿಟ್ಟರು. ಬಳಿಕ ತಮ್ಮ ತಪ್ಪಿನ ಅರಿವಾಗಿ ವಿಜಯೇಂದ್ರ ಅವರೇ ಎಂದರು.

ಧರ್ಮಸ್ಥಳ ಚಲೋ ಸಮಾವೇಶಕ್ಕೆ ಇಂದು ಸಾಕಷ್ಟು ಸಂಖ್ಯೆಯಲ್ಲಿ ಜನ ನೆರೆದಿದ್ದರು. ಆದರೆ ಕರಾವಳಿಯ ಹಿಂದೂ ಮುಖಂಡರಿಗೆ ಭಾಷಣ ಮಾಡಲು ಅವಕಾಶ ಸಿಗುತ್ತಿಲ್ಲ ಎಂಬ ಅಸಮಾಧಾನವೂ ಕೇಳಿಬಂತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ, ದೆಹಲಿಗೆ ಆಗಮಿಸಿದ ರಷ್ಯಾದ ವಿಶೇಷ ಭದ್ರತಾ ಪಡೆ

ಹೈದರಾಬಾದ್‌: ತಪ್ಪಾದ ಇಂಜೆಕ್ಷನ್‌ಗೆ ಕೋಮಾಕ್ಕೆ ಜಾರಿದ ಮಹಿಳೆ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಹೆಚ್ಚು ಸಮಯ ವಾಹನ ನಿಲ್ಲಿಸುವವರಿಗೆ ಬೀಳುತ್ತೆ ಜೇಬಿಗೆ ಕತ್ತರಿ

ಪಾಕಿಸ್ತಾನದ ಅವಸ್ಥೆಯೇ... ಶ್ರೀಲಂಕಾಗೆ ಅವಧಿ ಮೀರಿದ ಆಹಾರ ಸಾಮಗ್ರಿ ಕಳುಹಿಸಿದ ಪಾಕ್

ಹಿಟ್ಟು ಬೀಸಲೆಂದು ಗಿರಣಿಗೆ ತೆರಳಿದ್ದ ಬಾಲಕಿ ಮೇಲೆ ಗ್ಯಾಂಗ್ ರೇಪ್

ಮುಂದಿನ ಸುದ್ದಿ
Show comments